Advertisement
MIRROR FOCUS

ಅಡಿಕೆ ನಿಷೇಧದ ಆತಂಕ ನಿವಾರಣೆಗೆ ಪ್ರಯತ್ನ | ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ARDF ಸಭೆ

Share
ವಿಶ್ವ ಆರೋಗ್ಯ ಸಂಸ್ಥೆಯ(WHO) ಮೂಲಕ ಅಡಿಕೆ ಕ್ಯಾನ್ಸರ್‌ಕಾರಕ, ಅಡಿಕೆ ನಿಷೇಧ ಇತ್ಯಾದಿಗಳ ಬಗ್ಗೆ ಪದೇ ಪದೇ ಸುದ್ದಿಯಾಗುತ್ತಿದೆ. ಹೀಗಾಗಿ  ವಿಶ್ವ ಆರೋಗ್ಯ ಸಂಸ್ಥೆಯ  ಸಭೆಗೆ ತೆರಳುವ ಭಾರತದ ಪ್ರತಿನಿಧಿಗಳಿಗೆ ಅಡಿಕೆಯ ಔಷಧೀಯ ಮೌಲ್ಯಗಳ ಬಗ್ಗೆ ಮಾಹಿತಿ ನೀಡುವುದು ಅಗತ್ಯವಾಗಿದೆ. ಅಲ್ಲದೆ ಅಡಿಕೆಯ ಅಧ್ಯಯನದ ಬಗ್ಗೆ ಮಾಹಿತಿ  ಹಾಗೂ ಕೃಷಿಕರ ಬದುಕಿನ ಬಗ್ಗೆ ಮಾಹಿತಿ ನೀಡಲು ವ್ಯವಸ್ಥೆಯಾಗಬೇಕು ಎಂದು ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನ (ಎ ಆರ್‌ ಡಿ ಎಫ್)‌ ಸಭೆಯಲ್ಲಿ ನಿರ್ಧರಿಸಲಾಗಿದೆ.
ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನದ ಸಭೆಯು ಧರ್ಮಸ್ಥಳದಲ್ಲಿ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನದ ಅಧ್ಯಕ್ಷ ಡಾ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆಯಲ್ಲಿ ನಡೆಯಿತು. ಸಭೆಯಲ್ಲಿ ಅಡಿಕೆ ಸಂಶೋಧನೆಗಳ ಬಗ್ಗೆ ಚರ್ಚೆ ನಡೆಯಿತು.  ಅಡಿಕೆಯ ವಿವಿಧ ಔಷಧೀಯ ಗುಣಮಟ್ಟಗಳ ಬಗ್ಗೆ ಇನ್ನಷ್ಟು ಅಧ್ಯಯನ ನಡೆಸಲು ನಿರ್ಧರಿಸಲಾಗಿದೆ.  ಅಡಿಕೆ ಹಾನಿಕಾರಕ ಅಲ್ಲ ಎಂಬ ಅಂಶ ಈಗಾಗಲೇ ಅಧ್ಯಯನದಿಂದ ಹೊರಬಂದಿದೆ, ಎ ಆರ್‌ ಡಿ ಎಫ್‌ ಹಾಗೂ ಜೆಡ್ಡು ಆಯುರ್ವೇದ ಸಂಸ್ಥೆ ಈ ಬಗ್ಗೆ ಮಾಡಿರುವ ಅಧ್ಯಯನವು  ಅಂತರಾಷ್ಟ್ರೀಯ ಜರ್ನಲ್‌ ನಲ್ಲೂ ಪ್ರಕಟವಾಗಿದೆ ಎಂದು ಸಭೆಯ ಗಮನಕ್ಕೆ ತರಲಾಯಿತು.   ವಿದೇಶಿ ಅಡಿಕೆ ಆಮದು ತಡೆಗೆ ಅಡಿಕೆ ಕ್ವಾಲಿಟಿಯ ಬಗ್ಗೆ ಮಾಹಿತಿ ಅಗತ್ಯವಾಗಿದೆ. ಈ  ಬಗ್ಗೆ ಸುಸಜ್ಜಿತವಾದ ಪ್ರಯೋಗಾಲಯ ಸ್ಥಾಪನೆ ಅಗತ್ಯವಿದೆ. ಈಗಾಗಲೇ 63 ಕ್ಕೂ ಹೆಚ್ಚು ವಿದೇಶಿ ಅಡಿಕೆಯ ಸ್ಯಾಂಪಲ್‌ ಗಳನ್ನು ಎಆರ್‌ ಡಿಎಫ್‌ ಪರಿಶೀಲಿಸಿದೆ. ಇದಕ್ಕಾಗಿ ಮುಂದೆ ಪ್ರಯೋಗಾಲಯದ ಅಗತ್ಯ ಇದೆ ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಅಡಿಕೆ ಹಳದಿರೋಗ ಪೀಡಿತ ಪ್ರದೇಶದ ರೈತರಿಗೆ ನೆರವಾಗಲು ಸರ್ಕಾರದಿಂದ ಕ್ರಮವಾಗಬೇಕು ಈ ಬಗ್ಗೆ ಒತ್ತಾಯ ಅಗತ್ಯವಿದೆ ಹಾಗೂ ಆ ಪ್ರದೇಶದಲ್ಲಿ ಪರ್ಯಾಯ ಬೆಳೆಗೆ ಪ್ರೋತ್ಸಾಹ ನೀಡಲು ಯೋಜನೆಗೆ ಸಲಹೆ ನೀಡಲಾಯಿತು. ವಿಶೇಷವಾಗಿ ಸುಳ್ಯ, ಶೃಂಗೇರಿ ಹಾಗೂ ಕೊಪ್ಪ ತಾಲೂಕಿಗೆ ಆದ್ಯತೆ ನೀಡಬೇಕಾಗಿದೆ.  ಅಡಿಕೆ ಕೊಳೆರೋಗದಿಂದ ಕೃಷಿಕರು ಸಂಕಷ್ಟ ಅನುಭವಿಸಿರುವ ಬಗ್ಗೆ ಚರ್ಚೆ ನಡೆಯಿತು.  ಶೇ.70 ರಷ್ಟು ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದ್ದು ಸರ್ಕಾರದ ಗಮನಕ್ಕೆ ತಂದು ಪರಿಹಾರ ಕ್ರಮಗಳ ಬಗ್ಗೆಯೂ ಒತ್ತಾಯಿಸಲಾಯಿತು. ಅಡಿಕೆಯ ಇತರ ಬಳಕೆಯಾದ ಶಾಯಿ, ಅಡಿಕೆಯ ಬಣ್ಣದ ಬಗ್ಗೆ ಇನ್ನಷ್ಟು ಅಧ್ಯಯನ ಹಾಗೂ ಸಂಸ್ಥೆಗಳ ಮೂಲಕ ತಯಾರಿಗೆ ಸಲಹೆ ನೀಡಲಾಯಿತು.
ಸಭೆಯಲ್ಲಿ ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನದ ಟ್ರಸ್ಟಿಗಳಾದ  ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್‌ ಕುಮಾರ್‌ ಕೊಡ್ಗಿ, ಅಡಿಕೆ ಮಹಾಮಂಡಲ ಅಧ್ಯಕ್ಷ ಅರಗ ಜ್ಞಾನೇಂದ್ರ, ಕ್ಯಾಂಪ್ಕೊ ಆಡಳಿತ ನಿರ್ದೇಶಕ ಬಿ ವಿ ಸತ್ಯನಾರಾಯಣ, ಟಿಎಸ್‌ಎಸ್‌ ಅಧ್ಯಕ್ಷ ಗೋಪಾಲಕೃಷ್ಣ ವೈದ್ಯ ,  ತುಮ್ಕೋಸ್‌ ಅಧ್ಯಕ್ಷ ಎಚ್‌ ಎಸ್‌ ಶಿವಕುಮಾರ್‌,ಅಡಿಕೆ ಕೃಷಿಕ ಸಂಶೋಧಕ ಬದನಾಜೆ ಶಂಕರ ಭಟ್‌,  ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್‌ ಪುಚ್ಚಪ್ಪಾಡಿ,   ಅಡಿಕೆ ಸಂಶೋಧನೆ ಮತ್ತು ಅಭಿವೃದ್ಧಿ ಪ್ರತಿಷ್ಟಾನದ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎಸ್‌ ಕೇಶವ ಭಟ್‌ ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್‌ ಮಾಡಿ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

7 hours ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

8 hours ago

ರಸಗೊಬ್ಬರದಲ್ಲಿ ಆತ್ಮನಿರ್ಭರತೆ ಅನಿವಾರ್ಯ – ಸಂಕಷ್ಟದಿಂದ ಅವಕಾಶದತ್ತ ಭಾರತ ಸಾಗಬೇಕಿದೆ

ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…

12 hours ago

ಹವಾಮಾನ ವರದಿ | 24-07-2026 | ಕರಾವಳಿಯಲ್ಲಿ ಮುಂದುವರಿಯುವ ಮಳೆ, ಜುಲೈ ಅಂತ್ಯದ ವೇಳೆಗೆ ಮುಂಗಾರು ಹೇಗೆ..?

ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…

12 hours ago

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

22 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

23 hours ago