ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆಯ ತಂದಿರುವ ರಾಜ್ಯ ಸರ್ಕಾರ ವಾರಕ್ಕೆ ಒಂದು ದಿನ ಮೊಟ್ಟೆ, ಚಿಕ್ಕಿ, ಬಾಳೆಹಣ್ಣು ನೀಡಲು ಆದೇಶಿಸಿತ್ತು. ಮಕ್ಕಳು ಏನನ್ನು ಬಯಸುತ್ತಾರೋ ಅದನ್ನೇ ನೀಡಬೇಕೆಂದು ಕಟ್ಟುನಿಟ್ಟಾಗಿ ಸೂಚಿಸಲಾಗಿತ್ತು.
ಅಲ್ಲದೆ ಸಮೀಕ್ಷೆ ಒಂದರಲ್ಲಿ ಶೇಕಡ 70ಕ್ಕೂ ಅಧಿಕ ಮಕ್ಕಳು ಮೊಟ್ಟೆ ನೀಡಲು ಬೇಡಿಕೆ ಇಟ್ಟಿದ್ದು, ಕಂಡುಬಂದಿತ್ತು.ಇದರ ಮಧ್ಯೆ ಆಡಳಿತ ಸುಧಾರಣಾ ಆಯೋಗ ಮತ್ತೊಂದು ಮಹತ್ವದ ಶಿಫಾರಸ್ಸು ಮಾಡಿದ್ದು ಅಪೌಷ್ಟಿಕತೆಯಿಂದ ಬಳಲುವ ಮಕ್ಕಳಿಗೆ ವಾರಕ್ಕೆ 5 ದಿನ ಮೊಟ್ಟೆ ನೀಡುವಂತೆ ತಿಳಿಸಲಾಗಿದೆ.
ಶುಕ್ರವಾರದಂದು ಟಿ.ಎಂ. ವಿಜಯ ಭಾಸ್ಕರ್ ಅವರು ಈ ಶಿಫಾರಸ್ಸನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಸಲ್ಲಿಸಿದ್ದು, ಸಾಮಾನ್ಯ ಮಕ್ಕಳಿಗೆ ವಾರಕ್ಕೆ ಎರಡು ದಿನ ಮೊಟ್ಟೆ ನೀಡಬಹುದು ಎಂದು ತಿಳಿಸಿದೆ.ಪ್ರಸ್ತುತ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ವಾರಕ್ಕೆ ಎರಡು ಮೊಟ್ಟೆ ನೀಡಲಾಗುತ್ತಿದ್ದು, ಇದನ್ನು ಐದು ಮೊಟ್ಟೆಗೆ ಹೆಚ್ಚಿಸಲು ಸಲಹೆ ನೀಡಲಾಗಿದೆ.
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…
ಜಾಗತಿಕ ತಾಪಮಾನ ಪ್ರತಿ 1 ಡಿಗ್ರಿ ಏರಿದರೆ ಭಾರತದ ಭತ್ತದ ಇಳುವರಿ ಶೇ.6.6ರಷ್ಟು…
ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…
ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…