ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದಡಿ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆ, ಬಾಳೆಹಣ್ಣನ್ನು ಒಂದು ದಿನಕ್ಕೆ ಕಳೆದ ಜೂನ್ 21 ರಂದು ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಲಾಗಿತ್ತು. ಆದರೆ ಈಗ ಸರ್ಕಾರ ಶಾಲಾ ಮಕ್ಕಳ ಆರೋgಗ್ಯ ದೃಷ್ಟಿಯಿಂದ ವಾರಕ್ಕೆ ಒಂದೇ ದಿನ ನೀಡಲು ನಿರ್ಧರಿಸಿದ್ದ ಯೋಜನೆಯನ್ನು ಮತ್ತೆ ಎರಡು ದಿನಕ್ಕೆ ವಿಸ್ತರಿಸಿದೆ.
ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಿದರು. ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…
2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…
ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…