ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದಡಿ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆ, ಬಾಳೆಹಣ್ಣನ್ನು ಒಂದು ದಿನಕ್ಕೆ ಕಳೆದ ಜೂನ್ 21 ರಂದು ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಲಾಗಿತ್ತು. ಆದರೆ ಈಗ ಸರ್ಕಾರ ಶಾಲಾ ಮಕ್ಕಳ ಆರೋgಗ್ಯ ದೃಷ್ಟಿಯಿಂದ ವಾರಕ್ಕೆ ಒಂದೇ ದಿನ ನೀಡಲು ನಿರ್ಧರಿಸಿದ್ದ ಯೋಜನೆಯನ್ನು ಮತ್ತೆ ಎರಡು ದಿನಕ್ಕೆ ವಿಸ್ತರಿಸಿದೆ.
ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಿದರು. ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…