ಶಾಲಾ ಮಕ್ಕಳ ಅಪೌಷ್ಠಿಕತೆ ನಿವಾರಣೆಗಾಗಿ ಮಧ್ಯಾಹ್ನದ ಬಿಸಿಯೂಟದ ಜತೆಗೆ ಪ್ರಧಾನ ಮಂತ್ರಿ ಪೋಷಣ ಅಭಿಯಾನದಡಿ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಮೊಟ್ಟೆ, ಬಾಳೆಹಣ್ಣನ್ನು ಒಂದು ದಿನಕ್ಕೆ ಕಳೆದ ಜೂನ್ 21 ರಂದು ಕಾಂಗ್ರೆಸ್ ಸರ್ಕಾರ ಕಡಿತಗೊಳಿಸಲಾಗಿತ್ತು. ಆದರೆ ಈಗ ಸರ್ಕಾರ ಶಾಲಾ ಮಕ್ಕಳ ಆರೋgಗ್ಯ ದೃಷ್ಟಿಯಿಂದ ವಾರಕ್ಕೆ ಒಂದೇ ದಿನ ನೀಡಲು ನಿರ್ಧರಿಸಿದ್ದ ಯೋಜನೆಯನ್ನು ಮತ್ತೆ ಎರಡು ದಿನಕ್ಕೆ ವಿಸ್ತರಿಸಿದೆ.
ಕಾಂಗ್ರೆಸ್ ಸರ್ಕಾರದ ಮತ್ತೊಂದು ಮಹತ್ವಾಕಾಂಕ್ಷೆ ಯೋಜನೆಗೆ ಇಂದಿನಿಂದ ಚಾಲನೆ ದೊರೆಯಲಿದೆ. ಶಾಲಾ ಮಕ್ಕಳಿಗೆ ಇಂದಿನಿಂದ ವಾರದಲ್ಲಿ ಎರಡು ದಿನ ಮೊಟ್ಟೆ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಶಿಕ್ಷಣ ಸಚಿವರು ಮಂಡ್ಯದಲ್ಲಿ ಚಾಲನೆ ನೀಡಿದರು.
ಜಿಲ್ಲಾ ಪ್ರವಾಸ ಕೈಗೊಂಡಿರುವ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಶುಕ್ರವಾರ ಮಂಡ್ಯ ನಗರದ ಹೊಸಹಳ್ಳಿ ಪ್ರೌಢಶಾಲೆಯಲ್ಲಿ ಅಧಿಕೃತ ಚಾಲನೆ ನೀಡಿದರು. ಯೋಜನೆ ಅನ್ವಯ ಇಂದಿನಿಂದ ವಾರದಲ್ಲಿ ಎರಡು ದಿನ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಮಾಡಲಾಗುತ್ತದೆ. ಮೊಟ್ಟೆ ತಿನ್ನದ ಮಕ್ಕಳಿಗೆ ಶೇಂಗಾ ಚಿಕ್ಕಿ (ಕಡ್ಲೆ ಮಿಠಾಯಿ) ವಿತರಣೆ ಮಾಡಲಾಗುತ್ತದೆ. ಮೊಟ್ಟೆ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಂತರ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಚಿವರು ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಲಿದ್ದಾರೆ.
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…