Opinion

ಸಮೀಕ್ಷೆಗೆ ಬಾರದ ಬೆಳ್ಳಕ್ಕಿಗಳು…! | ಮುಂಗಾರು ನಿರೀಕ್ಷೆಯಲ್ಲಿ ಅನ್ನದಾತರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಉತ್ತರ ಕನ್ನಡ(Uttar Kannada) ಜಿಲ್ಲೆಯ ಶಿರಸಿ ತಾಲೂಕಿನ ಸುಧಾಪುರ ಕ್ಷೇತ್ರದಲ್ಲಿಯ “ಮುಂಡಿಗೆ ಕೆರೆ ಪಕ್ಷಿಧಾಮ”ಸೋಂದಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಇದೆ. ಅನೇಕ ಪಕ್ಷಿಗಳಿಗೆ(Birds) ಆಶ್ರಯ ತಾಣವಾಗಿದೆ ಈ ಸ್ಥಳ, ನೂರಾರು ವರ್ಷಗಳಿಂದ ಬೆಳ್ಳಕ್ಕಿಗಳ(Egrets) ವಂಶಾಭಿವೃದ್ಧಿ(Reproduction) ಸ್ಥಳವಾಗಿದೆ ಅಲ್ಲದೇ.. ಪ್ರತಿ ವರ್ಷವೂ ಮುಂಗಾರು ಮಳೆ(Mansoon rain) ಆಗಮನದ ನಿಖರ ಮಾಹಿತಿಯನ್ನು ರೈತರಿಗೆ(Farmer)ನೀಡುತ್ತಿವೆ. ಬೆಳ್ಳಕ್ಕಿಗಳು ಮೇ ತಿಂಗಳ ಕೊನೆಗೆ ಮುಂಜಾನೆಯಿಂದ, ಸಂಜೆಯವರೆಗೆ ಮುಂಡಿಗೆ ಕೆರೆಯ ಮೇಲ್ಗಡೆ ಹಾರಾಡುತ್ತಾ, ಸ್ಥಳ ಸಮೀಕ್ಷೆ ಕಾರ್ಯ ಮಾಡುವುದು, ಹಾಗೂ ಮುಂಗಾರು ಆಗಮನದ ನಿಖರ ಸಂದೇಶದೊಂದಿಗೆ ಕೆರೆಗೆ ಇಳಿದು ವಸತಿ ಮಾಡುವುದು ಈವರೆಗೆ ಚಾಚು ತಪ್ಪದೆ ನಡೆದು ಕೊಂಡು ಬಂದಿರುವುದು ಉಲ್ಲೇಖನೀಯವಾಗಿದೆ.

Advertisement
Advertisement

ಆದರೆ ಈ ವರ್ಷ ಜೂನ್ ತಿಂಗಳ ಆರಂಭವಾದರೂ ಬೆಳ್ಳಕ್ಕಿಗಳು ಇನ್ನೂ ಸಮೀಕ್ಷೆಗೆ ಬಾರದಿರುವುದು ಅಚ್ಚರಿಯ ಸಂಗತಿಯಾಗಿದೆ. ಈ ವಿದ್ಯಮಾನ ಗಮನಿಸಿದರೆ ಈ ವರ್ಷ ಮುಂಗಾರು ಮಳೆ ಆಗಮನ ವಿಳಂಬ ಸಾಧ್ಯತೆ ಕಂಡು ಬರುತ್ತದೆ. ಕಳೆದ ವರ್ಷ ಮೇ ತಿಂಗಳ 30ರಿಂದ ಸಮೀಕ್ಷೆ ಕಾರ್ಯ ಪ್ರಾರಂಭಿಸಿ ಜೂನ್ 18ಕ್ಕೆ ಬೆಳ್ಳಕ್ಕಿಗಳು ಕೆರೆಗೆ ಇಳಿದಿವೆ. ಹಾಗೂ 24ರಿಂದ ಉತ್ತಮ ಮಳೆ ಆಗಿದೆ. ನಂತರದ ದಿನಗಳಲ್ಲಿ ಅಧಿಕ ಮಳೆ ಆಗಿದ್ದು,2023 ಜೂನ್‌ 26 ಅತ್ಯಲ್ಪ ಮಳೆ ದಾಖಲಾಗಿದೆ. ಇದೇ ವೇಳೆ ಕೆರೆಯ ತುಂಬೆಲ್ಲ ಇದ್ದ ಪಕ್ಷಿಗಳ ಸಂಖ್ಯೆ 185ಕ್ಕೂ ಮೇಲ್ಪಟ್ಟಿದ್ದು ಇದ್ದು, ಇವುಗಳ ಸಂಖ್ಯೆ ಕೂಡಾ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿರುವದು ಕಂಡುಬಂದಿದೆ.

ಮೊದಲು ಬಂದು ಗೂಡು ಕಟ್ಟಿದವುಗಳನ್ನು ಬಿಟ್ಟರೆ ಉಳಿದ ಪಕ್ಷಗಳು ಗೂಡು ಕಟ್ಟದೇ, ಹಾರಿ ಹೋಗಿರುವುದು ಅಗಸ್ಟ್ 7ರಂದು ಗಮನಕ್ಕೆ ಬಂದಿದೆ. ಮತ್ತು ಕಟ್ಟಿದ ಗೂಡನ್ನು ಬಿಟ್ಟು ಹೋಗಿರುವದು ಇದೇ ಮೊದಲು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಸಮೀಕ್ಷೆ ಮಾಡಿ, ಪ್ರತಿಕೂಲ ವಾತಾವರಣದಿಂದ ಕೇವಲ 15 ರಿಂದ 20 ಗೂಡುಗಳಲ್ಲಿ ಮರಿಗಳಿವೆ. ಉಳಿದವುಗಳು ಕಟ್ಟಿದ ಗೂಡನ್ನು ಬಿಟ್ಟು ಹಾರಿ ಹೋಗಿವೆ ಎಂದು ಅಭಿಪ್ರಾಯಪಟ್ಟರು  ಕಳೆದ ವರ್ಷದ ಬೆಳವಣಿಗೆ ಗಮನಿಸಿದರೆ ಇಂದಿನವರೆಗೂ ಬೆಳ್ಳಕ್ಕಿಗಳು ಕೆರೆ ಸಮೀಕ್ಷೆಗೆ ಬಾರದಿರುವುದು ಕುತೂಹಲ ಕೆರಳಿಸಿದೆ. ಬೆಳ್ಳಕ್ಕಿಗಳು ಸ್ಥಳ ಪರಿಶೀಲನೆಗೆ ಇನ್ನೂ ಬಾರದೇ ಇದ್ದರೆ ಮುಂಗಾರು ಮಳೆ ಆಗಮನ ವಿಳಂಬ ಎಂದು ತಿಳಿಯೋಣವೆ?. ಅಥವಾ ಕಳೆದ ಸಾಲಿನಲ್ಲಿ ಅವುಗಳ ವಂಶಾಭಿವೃದ್ಧಿ ಸ್ಥಳಕ್ಕೆ ಮಾನವರಿಂದ ಅಪಾಯ ಉಂಟಾಗಿದೆ ಎಂದು ತಿಳಿಯೋಣವೆ..  ಯಾವುದಕ್ಕೂ ಮುಂಡಿಗೆ ಕೆರೆ ಸರಹದ್ದಿನಲ್ಲಿ ಪಕ್ಷಿಗಳ ಚಲನ-ವಲನ ಕಾದು ನೋಡಬೇಕಿದೆ. ಸದ್ಯದ ಪರಿಸ್ಥಿತಿ ಅವಲೋಕಿಸಿದರೆ “ಮುಂಗಾರು ಮಳೆ ವಿಳಂಬ” ಎಂದು ಹೇಳಬಹುದಾಗಿದೆ.

ಬರಹ :
ರತ್ನಾಕರ್‌ ಹೆಗಡೆ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

2028ರ ವೇಳೆಗೆ ಭಾರತದ ಉಪಗ್ರಹ ಸಂವಹನದ ಮಾರುಕಟ್ಟೆ 20 ಶತಕೋಟಿ  ಡಾಲರ್

ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…

11 hours ago

ಕಬ್ಬು ಪೂರೈಸಿದ ರೈತರಿಗೆ 15 ದಿನದೊಳಗೆ ಸಕ್ಕರೆ ಕಾರ್ಖಾನೆಗಳು ಹಣ ಪಾವತಿಸುವಂತೆ ಮಂಡ್ಯ  ಜಿಲ್ಲಾಧಿಕಾರಿ ಸೂಚನೆ

ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು  ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…

11 hours ago

ಗದಗದಲ್ಲಿ  ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಪ್ರತಿ ಕ್ವಿಂಟಲ್ ಗೆ 7280 ರೂಪಾಯಿ ಬೆಂಬಲ ಬೆಲೆ ನಿಗದಿ

2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…

11 hours ago

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |

ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…

14 hours ago

ದೀಪ ಹಚ್ಚುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490

15 hours ago