ಪ್ರಮುಖ

ಎಲ್‌ ನಿನೋ ಹವಾಮಾನದ ಮೇಲೆ ಭಾರಿ ಪರಿಣಾಮ | ಬರಗಾಲಕ್ಕೆ ಕಾರಣ ಈ ಎಲ್‌ ನಿನೊ | ಏನಿದು ಎಲ್‌ ನಿನೊ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿ ದೇಶದ ಜನತೆ ದಾಖಲೆ ಪ್ರಮಾಣದ ತಾಪಮಾನ ತಡೆದುಕೊಳ್ಳಲು ಸಿದ್ದರಾಗಬೇಕು. ಇದಕ್ಕೆ ಕಾರಣ ಎಲ್‌ನಿನೋ. ಈ ಎಲ್‌ ನಿನೊ ತಾಪಮಾನ ಬದಲಾವಣೆಗೆ ಹೇಗೆ ಕಾರಣ..? 2023-24 ರ ವರ್ಷದಲ್ಲಿ ಭಾರತ(India) ಸೇರಿದಂತೆ ಜಗತ್ತಿನ ಹಲವು ದೇಶಗಳು ಭೀಕರ ಬರವನ್ನು(Drought) ಎದುರಿಸಿವೆ. ಕೆಲವು ಪ್ರದೇಶಗಳಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿ(Rain) ಅನಾಹುತ ಸಂಭವಿಸಿದರೆ, ಭಾರತದ ಬಹುತೇಕ ರಾಜ್ಯಗಳು ಮಳೆ ಕೊರತೆಯನ್ನು(Rain Scarcity) ಅನುಭವಿಸಿದವು. ಈಗ ಬೇಸಿಗೆ(Summer) ಶುರುವಾಗಿದ್ದು ದಾಖಲೆಯ ತಾಪಮಾನ(Temperature) ಮತ್ತಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ. ದಾಖಲೆಗಳ ಪ್ರಕಾರ ಕಳೆದ 100 ವರ್ಷಗಳಲ್ಲಿ, ಭಾರತವು 18 ಬಾರಿ ಬರಗಾಲಕ್ಕೆ ತುತ್ತಾಗಿದೆ ಇದರಲ್ಲಿ 13 ಬಾರಿ ಬರಗಾಲಕ್ಕೆ ಎಲ್ ನಿನೊ ಕಾರಣವಾಗಿದೆ.

Advertisement

ಎಲ್‌ ನಿನೋ ಎಂದರೇನು?: ಪೆಸಿಫಿಕ್ ಮಹಾಸಾಗರದ ಮೇಲ್ಮೈ ಸಾಮಾನ್ಯಕ್ಕಿಂತ ಹೆಚ್ಚು ಬೆಚ್ಚಗಾಗುವುದನ್ನು ಎಲ್ ನಿನೊ ಎಂದು ಕರೆಯಲಾಗುತ್ತದೆ. ಇದು ಜಾಗತಿಕ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ, ತಾಪಮಾನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಎಲ್‌ ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗುತ್ತದೆ, ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ಜಾಗತಿಕವಾಗಿ ಮಳೆ ಪ್ರಮಾಣದ ಮೇಳೆ ಪರಿಣಾಮ ಬೀರುತ್ತದೆ. ಇದರಿಂದ ಅನಾವೃಷ್ಠಿಗೆ ಕಾರಣವಾಗುತ್ತದೆ. ಎಲ್‌ ನಿನೋ ಉತ್ತರ ಗೋಳಾರ್ಧದಲ್ಲಿ ಶರತ್ಕಾಲದಿಂದ ಬೇಸಿಗೆಯ ಅವಧಿಯಲ್ಲಿ ಸ್ವಾಭಾವಿಕವಾಗಿ ಸಂಭವಿಸುತ್ತದೆ, ಸಾಮಾನ್ಯವಾಗಿ ಪ್ರತಿ 2-7 ವರ್ಷಗಳಿಗೊಮ್ಮೆ ಎಲ್ ನಿನೋ ಸಂಭವಿಸುತ್ತದೆ ಮತ್ತು ಸುಮಾರು 9 ರಿಂದ 12 ತಿಂಗಳವರೆಗೆ ಇರುತ್ತದೆ, ಆದರೂ ಕೆಲವೊಮ್ಮೆ ಇದು ಸತತವಾಗಿ ಎರಡು ವರ್ಷಗಳವರೆಗೆ ಇರುತ್ತದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಕಡಿಮೆಯಾಗುತ್ತಿದೆ ಎಲ್‌ ನಿನೋ : ಕಳೆದ ವರ್ಷ ಮಳೆ ಕಡಿಮೆಯಾಗಲು ಕಾರಣವಾಗಿದ್ದ ಎಲ್‌ ನಿನೋ ಸದ್ಯ ದುರ್ಬಲಗೊಳ್ಳುತ್ತಿದೆ ಆದರೆ ಇದು ಈ ಬೇಸಿಗೆಯಲ್ಲಿ ಶಾಖವನ್ನು ಹೆಚ್ಚಿಸುವ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ನಿರೀಕ್ಷಿಸಲಾಗಿದೆ. ಏಪ್ರಿಲ್ ನಂತರ ಮೇ – ಜುಲೈ ನಡುವೆ ತಟಸ್ಥವಾಗಿರುತ್ತದೆ ಎಂದು ಹೇಳಲಾಗಿದೆ. ಎಲ್‌ ನಿನೋ ಕಡಿಮೆಯಾದ ನಂತರ ಲಾ ನಿನಾ ಅಭಿವೃದ್ಧಿಗೊಳ್ಳುವ ಸಾಧ್ಯತೆಗಳಿವೆ. ಎಲ್ ನಿನೊಗೆ ಲಾ ನಿನಾ ಎಂಬ ಹಿಮ್ಮುಖ ಸ್ಥಿತಿ ಇದೆ. ಪೆಸಿಫಿಕ್ ಮಹಾಸಾಗರವು ಸಾಮಾನ್ಯಕ್ಕಿಂತ ತಂಪಾಗಿರುವಾಗ ಅದನ್ನು ಲಾ ನಿನಾ ಎಂದು ಕರೆಯಲಾಗುತ್ತದೆ.

ಈ ಬಾರಿ ವಾಡಿಕೆಗಿಂತ ಉತ್ತಮ ಮಳೆ : ಈ ವರ್ಷ ಮುಂಗಾರು ಉತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಎನ್‌ ನಿನೋ ಪ್ರಭಾವ ಕಡಿಮೆಯಾದ ಬಳಿಕ ದೇಶಾದ್ಯಂತ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕೂಡ ಜೂನ್ ವೇಳೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

6 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

6 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

6 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

17 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago

ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ

ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ರಾಜಸ್ಥಾನದಲ್ಲಿ ಸುಮಾರು 30…

1 day ago