Advertisement
ಪ್ರಮುಖ

ಎಲ್‌ ನಿನೋ ಹವಾಮಾನದ ಮೇಲೆ ಭಾರಿ ಪರಿಣಾಮ | ಬರಗಾಲಕ್ಕೆ ಕಾರಣ ಈ ಎಲ್‌ ನಿನೊ | ಏನಿದು ಎಲ್‌ ನಿನೊ..?

Share

ಈ ಬಾರಿ ದೇಶದ ಜನತೆ ದಾಖಲೆ ಪ್ರಮಾಣದ ತಾಪಮಾನ ತಡೆದುಕೊಳ್ಳಲು ಸಿದ್ದರಾಗಬೇಕು. ಇದಕ್ಕೆ ಕಾರಣ ಎಲ್‌ನಿನೋ. ಈ ಎಲ್‌ ನಿನೊ ತಾಪಮಾನ ಬದಲಾವಣೆಗೆ ಹೇಗೆ ಕಾರಣ..? 2023-24 ರ ವರ್ಷದಲ್ಲಿ ಭಾರತ(India) ಸೇರಿದಂತೆ ಜಗತ್ತಿನ ಹಲವು ದೇಶಗಳು ಭೀಕರ ಬರವನ್ನು(Drought) ಎದುರಿಸಿವೆ. ಕೆಲವು ಪ್ರದೇಶಗಳಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿ(Rain) ಅನಾಹುತ ಸಂಭವಿಸಿದರೆ, ಭಾರತದ ಬಹುತೇಕ ರಾಜ್ಯಗಳು ಮಳೆ ಕೊರತೆಯನ್ನು(Rain Scarcity) ಅನುಭವಿಸಿದವು. ಈಗ ಬೇಸಿಗೆ(Summer) ಶುರುವಾಗಿದ್ದು ದಾಖಲೆಯ ತಾಪಮಾನ(Temperature) ಮತ್ತಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ. ದಾಖಲೆಗಳ ಪ್ರಕಾರ ಕಳೆದ 100 ವರ್ಷಗಳಲ್ಲಿ, ಭಾರತವು 18 ಬಾರಿ ಬರಗಾಲಕ್ಕೆ ತುತ್ತಾಗಿದೆ ಇದರಲ್ಲಿ 13 ಬಾರಿ ಬರಗಾಲಕ್ಕೆ ಎಲ್ ನಿನೊ ಕಾರಣವಾಗಿದೆ.

ಎಲ್‌ ನಿನೋ ಎಂದರೇನು?: ಪೆಸಿಫಿಕ್ ಮಹಾಸಾಗರದ ಮೇಲ್ಮೈ ಸಾಮಾನ್ಯಕ್ಕಿಂತ ಹೆಚ್ಚು ಬೆಚ್ಚಗಾಗುವುದನ್ನು ಎಲ್ ನಿನೊ ಎಂದು ಕರೆಯಲಾಗುತ್ತದೆ. ಇದು ಜಾಗತಿಕ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ, ತಾಪಮಾನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಎಲ್‌ ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗುತ್ತದೆ, ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ಜಾಗತಿಕವಾಗಿ ಮಳೆ ಪ್ರಮಾಣದ ಮೇಳೆ ಪರಿಣಾಮ ಬೀರುತ್ತದೆ. ಇದರಿಂದ ಅನಾವೃಷ್ಠಿಗೆ ಕಾರಣವಾಗುತ್ತದೆ. ಎಲ್‌ ನಿನೋ ಉತ್ತರ ಗೋಳಾರ್ಧದಲ್ಲಿ ಶರತ್ಕಾಲದಿಂದ ಬೇಸಿಗೆಯ ಅವಧಿಯಲ್ಲಿ ಸ್ವಾಭಾವಿಕವಾಗಿ ಸಂಭವಿಸುತ್ತದೆ, ಸಾಮಾನ್ಯವಾಗಿ ಪ್ರತಿ 2-7 ವರ್ಷಗಳಿಗೊಮ್ಮೆ ಎಲ್ ನಿನೋ ಸಂಭವಿಸುತ್ತದೆ ಮತ್ತು ಸುಮಾರು 9 ರಿಂದ 12 ತಿಂಗಳವರೆಗೆ ಇರುತ್ತದೆ, ಆದರೂ ಕೆಲವೊಮ್ಮೆ ಇದು ಸತತವಾಗಿ ಎರಡು ವರ್ಷಗಳವರೆಗೆ ಇರುತ್ತದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಕಡಿಮೆಯಾಗುತ್ತಿದೆ ಎಲ್‌ ನಿನೋ : ಕಳೆದ ವರ್ಷ ಮಳೆ ಕಡಿಮೆಯಾಗಲು ಕಾರಣವಾಗಿದ್ದ ಎಲ್‌ ನಿನೋ ಸದ್ಯ ದುರ್ಬಲಗೊಳ್ಳುತ್ತಿದೆ ಆದರೆ ಇದು ಈ ಬೇಸಿಗೆಯಲ್ಲಿ ಶಾಖವನ್ನು ಹೆಚ್ಚಿಸುವ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ನಿರೀಕ್ಷಿಸಲಾಗಿದೆ. ಏಪ್ರಿಲ್ ನಂತರ ಮೇ – ಜುಲೈ ನಡುವೆ ತಟಸ್ಥವಾಗಿರುತ್ತದೆ ಎಂದು ಹೇಳಲಾಗಿದೆ. ಎಲ್‌ ನಿನೋ ಕಡಿಮೆಯಾದ ನಂತರ ಲಾ ನಿನಾ ಅಭಿವೃದ್ಧಿಗೊಳ್ಳುವ ಸಾಧ್ಯತೆಗಳಿವೆ. ಎಲ್ ನಿನೊಗೆ ಲಾ ನಿನಾ ಎಂಬ ಹಿಮ್ಮುಖ ಸ್ಥಿತಿ ಇದೆ. ಪೆಸಿಫಿಕ್ ಮಹಾಸಾಗರವು ಸಾಮಾನ್ಯಕ್ಕಿಂತ ತಂಪಾಗಿರುವಾಗ ಅದನ್ನು ಲಾ ನಿನಾ ಎಂದು ಕರೆಯಲಾಗುತ್ತದೆ.

ಈ ಬಾರಿ ವಾಡಿಕೆಗಿಂತ ಉತ್ತಮ ಮಳೆ : ಈ ವರ್ಷ ಮುಂಗಾರು ಉತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಎನ್‌ ನಿನೋ ಪ್ರಭಾವ ಕಡಿಮೆಯಾದ ಬಳಿಕ ದೇಶಾದ್ಯಂತ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕೂಡ ಜೂನ್ ವೇಳೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

– ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

3 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

3 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

12 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

13 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago