Advertisement
ಪ್ರಮುಖ

ಎಲ್‌ ನಿನೋ ಹವಾಮಾನದ ಮೇಲೆ ಭಾರಿ ಪರಿಣಾಮ | ಬರಗಾಲಕ್ಕೆ ಕಾರಣ ಈ ಎಲ್‌ ನಿನೊ | ಏನಿದು ಎಲ್‌ ನಿನೊ..?

Share

ಈ ಬಾರಿ ದೇಶದ ಜನತೆ ದಾಖಲೆ ಪ್ರಮಾಣದ ತಾಪಮಾನ ತಡೆದುಕೊಳ್ಳಲು ಸಿದ್ದರಾಗಬೇಕು. ಇದಕ್ಕೆ ಕಾರಣ ಎಲ್‌ನಿನೋ. ಈ ಎಲ್‌ ನಿನೊ ತಾಪಮಾನ ಬದಲಾವಣೆಗೆ ಹೇಗೆ ಕಾರಣ..? 2023-24 ರ ವರ್ಷದಲ್ಲಿ ಭಾರತ(India) ಸೇರಿದಂತೆ ಜಗತ್ತಿನ ಹಲವು ದೇಶಗಳು ಭೀಕರ ಬರವನ್ನು(Drought) ಎದುರಿಸಿವೆ. ಕೆಲವು ಪ್ರದೇಶಗಳಲ್ಲಿ ನಿರೀಕ್ಷೆಗೂ ಮೀರಿ ಮಳೆಯಾಗಿ(Rain) ಅನಾಹುತ ಸಂಭವಿಸಿದರೆ, ಭಾರತದ ಬಹುತೇಕ ರಾಜ್ಯಗಳು ಮಳೆ ಕೊರತೆಯನ್ನು(Rain Scarcity) ಅನುಭವಿಸಿದವು. ಈಗ ಬೇಸಿಗೆ(Summer) ಶುರುವಾಗಿದ್ದು ದಾಖಲೆಯ ತಾಪಮಾನ(Temperature) ಮತ್ತಷ್ಟು ಸಮಸ್ಯೆಗಳನ್ನು ತಂದೊಡ್ಡಿದೆ. ದಾಖಲೆಗಳ ಪ್ರಕಾರ ಕಳೆದ 100 ವರ್ಷಗಳಲ್ಲಿ, ಭಾರತವು 18 ಬಾರಿ ಬರಗಾಲಕ್ಕೆ ತುತ್ತಾಗಿದೆ ಇದರಲ್ಲಿ 13 ಬಾರಿ ಬರಗಾಲಕ್ಕೆ ಎಲ್ ನಿನೊ ಕಾರಣವಾಗಿದೆ.

Advertisement
Advertisement

ಎಲ್‌ ನಿನೋ ಎಂದರೇನು?: ಪೆಸಿಫಿಕ್ ಮಹಾಸಾಗರದ ಮೇಲ್ಮೈ ಸಾಮಾನ್ಯಕ್ಕಿಂತ ಹೆಚ್ಚು ಬೆಚ್ಚಗಾಗುವುದನ್ನು ಎಲ್ ನಿನೊ ಎಂದು ಕರೆಯಲಾಗುತ್ತದೆ. ಇದು ಜಾಗತಿಕ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ, ತಾಪಮಾನ ಹೆಚ್ಚಳಕ್ಕೆ ಕಾರಣವಾಗುತ್ತದೆ. ಎಲ್‌ ನಿನೋ ಪರಿಣಾಮದಿಂದ ಮಳೆ ಕೊರತೆ ಉಂಟಾಗುತ್ತದೆ, ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ಜಾಗತಿಕವಾಗಿ ಮಳೆ ಪ್ರಮಾಣದ ಮೇಳೆ ಪರಿಣಾಮ ಬೀರುತ್ತದೆ. ಇದರಿಂದ ಅನಾವೃಷ್ಠಿಗೆ ಕಾರಣವಾಗುತ್ತದೆ. ಎಲ್‌ ನಿನೋ ಉತ್ತರ ಗೋಳಾರ್ಧದಲ್ಲಿ ಶರತ್ಕಾಲದಿಂದ ಬೇಸಿಗೆಯ ಅವಧಿಯಲ್ಲಿ ಸ್ವಾಭಾವಿಕವಾಗಿ ಸಂಭವಿಸುತ್ತದೆ, ಸಾಮಾನ್ಯವಾಗಿ ಪ್ರತಿ 2-7 ವರ್ಷಗಳಿಗೊಮ್ಮೆ ಎಲ್ ನಿನೋ ಸಂಭವಿಸುತ್ತದೆ ಮತ್ತು ಸುಮಾರು 9 ರಿಂದ 12 ತಿಂಗಳವರೆಗೆ ಇರುತ್ತದೆ, ಆದರೂ ಕೆಲವೊಮ್ಮೆ ಇದು ಸತತವಾಗಿ ಎರಡು ವರ್ಷಗಳವರೆಗೆ ಇರುತ್ತದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

Advertisement

ಕಡಿಮೆಯಾಗುತ್ತಿದೆ ಎಲ್‌ ನಿನೋ : ಕಳೆದ ವರ್ಷ ಮಳೆ ಕಡಿಮೆಯಾಗಲು ಕಾರಣವಾಗಿದ್ದ ಎಲ್‌ ನಿನೋ ಸದ್ಯ ದುರ್ಬಲಗೊಳ್ಳುತ್ತಿದೆ ಆದರೆ ಇದು ಈ ಬೇಸಿಗೆಯಲ್ಲಿ ಶಾಖವನ್ನು ಹೆಚ್ಚಿಸುವ ಹವಾಮಾನದ ಮೇಲೆ ಪರಿಣಾಮ ಬೀರುತ್ತದೆ. ಮೇ ತಿಂಗಳವರೆಗೆ ಸಾಮಾನ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ನಿರೀಕ್ಷಿಸಲಾಗಿದೆ. ಏಪ್ರಿಲ್ ನಂತರ ಮೇ – ಜುಲೈ ನಡುವೆ ತಟಸ್ಥವಾಗಿರುತ್ತದೆ ಎಂದು ಹೇಳಲಾಗಿದೆ. ಎಲ್‌ ನಿನೋ ಕಡಿಮೆಯಾದ ನಂತರ ಲಾ ನಿನಾ ಅಭಿವೃದ್ಧಿಗೊಳ್ಳುವ ಸಾಧ್ಯತೆಗಳಿವೆ. ಎಲ್ ನಿನೊಗೆ ಲಾ ನಿನಾ ಎಂಬ ಹಿಮ್ಮುಖ ಸ್ಥಿತಿ ಇದೆ. ಪೆಸಿಫಿಕ್ ಮಹಾಸಾಗರವು ಸಾಮಾನ್ಯಕ್ಕಿಂತ ತಂಪಾಗಿರುವಾಗ ಅದನ್ನು ಲಾ ನಿನಾ ಎಂದು ಕರೆಯಲಾಗುತ್ತದೆ.

ಈ ಬಾರಿ ವಾಡಿಕೆಗಿಂತ ಉತ್ತಮ ಮಳೆ : ಈ ವರ್ಷ ಮುಂಗಾರು ಉತ್ತಮವಾಗಿರಲಿದೆ ಎಂದು ಅಂದಾಜಿಸಲಾಗಿದೆ. ಎನ್‌ ನಿನೋ ಪ್ರಭಾವ ಕಡಿಮೆಯಾದ ಬಳಿಕ ದೇಶಾದ್ಯಂತ ವಾಡಿಕೆಯಂತೆ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ಕೂಡ ಜೂನ್ ವೇಳೆಗೆ ಉತ್ತಮ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ.

Advertisement

– ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಳೆ ಸುರಿಯುತ್ತಿದ್ದಂತೆ ರಾಜ್ಯದಲ್ಲಿ ಡೆಂಘೀ ಭೀತಿ : ಮುಂಜಾಗ್ರತಾ ಕ್ರಮಕ್ಕೆ ಮುಂದಾದ ರಾಜ್ಯ ಆರೋಗ್ಯ ಇಲಾಖೆ

ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…

6 hours ago

ನಮ್ಮ ಪ್ರಧಾನಿಯ ಆಸ್ತಿ ಎಷ್ಟು ಗೊತ್ತಾ..? ಅವರಿಗೆ ಜಮೀನಿಲ್ಲ, ಕಾರಿಲ್ಲ, ಸ್ವಂತ ಮನೆಯೂ ಇಲ್ಲ : ಬರೀ 3.02ಕೋಟಿ ಚರಾಸ್ತಿ

ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…

7 hours ago

ಇಂದು ಅಂತಾರಾಷ್ಟ್ರೀಯ ಕುಟುಂಬ ದಿನ : ಅಂದಿನ ಕೂಡು ಕುಟುಂಬ ಇಂದಿನ ವಿಭಕ್ತ ಕುಟುಂಬ

ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…

7 hours ago

ಸಿಎಎ ಅಡಿಯಲ್ಲಿ 14 ಜನರಿಗೆ ಮೊದಲ ಬಾರಿಗೆ ಪೌರತ್ವ : 14 ಮಂದಿಗೆ ಭಾರತೀಯ ಪೌರತ್ವ ಪ್ರಮಾಣ ಪತ್ರ ನೀಡಿದ ಕೇಂದ್ರ ಸರ್ಕಾರ

ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…

7 hours ago

ಗ್ರಾಹಕನಿಗೆ ಶಾಕ್‌ ಕೊಟ್ಟ ವಿದ್ಯುತ್‌ ಇಲಾಖೆ : ಬರೋಬ್ಬರಿ 17 ಕೋಟಿ ರೂ. ಕರೆಂಟ್ ಬಿಲ್ ಕಂಡು ವ್ಯಕ್ತಿ ಕಂಗಾಲು

ಉಚಿತ ಉಚಿತ ಉಚಿತ(Free).. ರಾಜ್ಯದ ಪ್ರತೀ ಮನೆಗೂ ವಿದ್ಯುತ್‌ ಉಚಿತ(Free Current). ಇಂಥ…

10 hours ago

ಮಲೆನಾಡ ಗಿಡ್ಡ ಗೋತಳಿಗಳನ್ನು ಉಳಿಸಿ ಸಂವರ್ಧಿಸಬೇಕು ಏಕೆ..?

ಮಲೆನಾಡಗಿಡ್ಡ ಹಸುಗಳು ಬಹಳ ಮಹತ್ವದ ಅಂಶಗಳನ್ನು ಹೊಂದಿವೆ. ಅಂತಹ ವಿಶೇಷತೆಗಳ ಕಾರಣದಿಂದಲೇ ಈ…

15 hours ago