Opinion

ಪವರ್‌ ಕಳೆದುಕೊಳ್ಳುತ್ತಿರುವ ಎಲ್‌ ನಿನೋ | ಜುಲೈ-ಸೆಪ್ಟೆಂಬರ್ ವೇಳೆಗೆ ‘ಲಾ ನಿನಾ’ ಪ್ರಬಲ | ಉತ್ತಮ ಮುಂಗಾರು ನಿರೀಕ್ಷೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈ ಬಾರಿಯ ಹವಾಮಾನ ವೈಪರೀತ್ಯಕ್ಕೆ(Climate change) ಭಾರಿ ಕಾರಣವಾಗಿದ್ದ ಎಲ್‌ ನಿನೋ(L nino, ನಿಧಾನವಾಗಿ ತನ್ನ ಪವರ್‌ ಅನ್ನು ಕಳೆದುಕೊಳ್ಳುತ್ತಿದೆ. ಇದೀಗ ಅದಕ್ಕೆ ವಿರುದ್ಧವಾಗಿ ಲಾ ನಿನಾ(La nino) ತನ್ನ ಅಸ್ತಿತ್ವವನ್ನು ಕಂಡುಕೊಳ್ಳುತ್ತಿದೆ. ಹೀಗಾಗಿ ವಿಶ್ವದಾದ್ಯಂತ ದಾಖಲೆಯ ತಾಪಮಾನ(Temperature) ಮತ್ತು ವಿಪರೀತ ಹವಾಮಾನಕ್ಕೆ ಕಾರಣವಾದ 2023/24ರ ಎಲ್ ನಿನೋ ಹವಾಮಾನ ಪರಿಸ್ಥಿತಿಯು ಈ ವರ್ಷದ ಕೊನೆಯಲ್ಲಿ ಲಾ ನಿನಾ ಪರಿಸ್ಥಿತಿಗಳಿಗೆ ಪರಿವರ್ತನೆಯಾಗಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ ತಿಳಿಸಿದೆ.

Advertisement
Advertisement

ಜಗತ್ತು 2023-24ರಲ್ಲಿ ಈ ಹಿಂದೆ ಎಂದೂ ಕಾಣದಂಥ ತೀವ್ರ ಉಷ್ಣಾಂಶದ ಏಪ್ರಿಲ್​ ತಿಂಗಳಿಗೆ ಮತ್ತು ದಾಖಲೆಯ ಹೆಚ್ಚಿನ ತಾಪಮಾನದ ಸತತ ಹನ್ನೊಂದನೇ ತಿಂಗಳಿಗೆ ಸಾಕ್ಷಿಯಾಗಿದೆ. ಡಬ್ಲ್ಯುಎಂಒ ಪ್ರಕಾರ, ಕಳೆದ 13 ತಿಂಗಳುಗಳಿಂದ ಸಮುದ್ರದ ಮೇಲ್ಮೈ ತಾಪಮಾನವು ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಎಲ್​ ನಿನೋ ಇದು ಮಧ್ಯ ಮತ್ತು ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ನೈಸರ್ಗಿಕವಾಗಿ ಸಂಭವಿಸುವ ಹವಾಮಾನ ಪರಿಸ್ಥಿತಿಯಾಗಿದೆ. ಆದರೆ ಈ ಬಾರಿ ಅಸಾಮಾನ್ಯ ತಾಪಮಾನ ಏರಿಕೆ, ಮಾನವ ಚಟುವಟಿಕೆಗಳಿಂದ ಹಸಿರುಮನೆ ಅನಿಲಗಳ ಬಿಡುಗಡೆಯಿಂದ ವಾತಾವರಣ ಮತ್ತು ಸಾಗರದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಶಕ್ತಿಯಿಂದಾಗಿ ಎಲ್ ನಿನೋ ತೀವ್ರವಾಗಿದೆ ಎಂದು ಡಬ್ಲ್ಯುಎಂಒ ಹೇಳಿದೆ.

ಸದ್ಯ ಚಾಲ್ತಿಯಲ್ಲಿರುವ, ಆದರೆ ದುರ್ಬಲಗೊಳ್ಳುತ್ತಿರುವ ಎಲ್ ನಿನೊ ಹವಾಮಾನ ಪರಿಸ್ಥಿತಿಗಳಿಂದಾಗಿ ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ದಕ್ಷಿಣ ಏಷ್ಯಾದ ಲಕ್ಷಾಂತರ ಜನರು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಾರಣಾಂತಿಕವಾದ ಬಿಸಿಲಿನ ಹೊಡೆತ ಎದುರಿಸುವಂತಾಗಿತ್ತು. ಡಬ್ಲ್ಯುಎಂಒ ಗ್ಲೋಬಲ್ ಪ್ರೊಡಕ್ಷನ್ ಸೆಂಟರ್ಸ್ ಆಫ್ ಲಾಂಗ್-ರೇಂಜ್ ಫೋರ್ ಕಾಸ್ಟ್​ನ ಇತ್ತೀಚಿನ ಮುನ್ಸೂಚನೆಗಳ ಪ್ರಕಾರ ಜೂನ್-ಆಗಸ್ಟ್​ನಲ್ಲಿ ತಟಸ್ಥ ಪರಿಸ್ಥಿತಿಗಳು ಉಂಟಾಗಬಹುದಾದ ಅಥವಾ ಎಲ್​ ನಿನೋ ಲಾ ನಿನಾಗೆ ಪರಿವರ್ತನೆಯಾಗುವ ಸಮಾನ ಸಂಭಾವ್ಯತೆಗಳಿವೆ.

ಲಾ ನಿನಾ ಪರಿಸ್ಥಿತಿಗಳು ಏರ್ಪಡುವ ಸಾಧ್ಯತೆಗಳು ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಶೇಕಡಾ 60 ರಷ್ಟು ಮತ್ತು ಆಗಸ್ಟ್​ನಿಂದ ನವೆಂಬರ್​ವರೆಗೆ ಶೇಕಡಾ 70 ರಷ್ಟಾಗಿರಲಿದೆ. ಈ ಸಮಯದಲ್ಲಿ ಎಲ್ ನಿನೋ ಮತ್ತೆ ಮರುಕಳಿಸುವ ಸಾಧ್ಯತೆಯು ನಗಣ್ಯ ಎಂದು ಡಬ್ಲ್ಯುಎಂಒ ಹೇಳಿದೆ. ಎಲ್ ನಿನೋ ಭಾರತದಲ್ಲಿ ದುರ್ಬಲ ಮಾನ್ಸೂನ್ ಮಾರುತಗಳು ಮತ್ತು ಶುಷ್ಕ ಪರಿಸ್ಥಿತಿಗಳಿಗೆ ಕಾರಣವಾಗುತ್ತದೆ ಹಾಗೂ ಇದಕ್ಕೆ ವಿರುದ್ಧವಾಗಿ ಲಾ ನಿನಾ ಭಾರತದಲ್ಲಿ ಹೇರಳವಾದ ಮಾನ್ಸೂನ್ ಮಳೆಗೆ ಕಾರಣವಾಗುತ್ತದೆ.

ಕಳೆದ ತಿಂಗಳು, ಭಾರತ ಹವಾಮಾನ ಇಲಾಖೆ ಭಾರತದಲ್ಲಿ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಅನುಕೂಲಕರ ಲಾ ನಿನಾ ಪರಿಸ್ಥಿತಿಗಳು ಪ್ರಾರಂಭವಾಗುವ ನಿರೀಕ್ಷೆಯಿದೆ. ಭಾರತದ ಕೃಷಿ ವಲಯಕ್ಕೆ ಮಾನ್ಸೂನ್ ನಿರ್ಣಾಯಕವಾಗಿದೆ. ನಿವ್ವಳ ಕೃಷಿ ಪ್ರದೇಶದ 52 ಪ್ರತಿಶತದಷ್ಟು ಜನ ಮಾನ್ಸೂನ್ ಮೇಲೆ ಅವಲಂಬಿತರಾಗಿದ್ದಾರೆ. ದೇಶಾದ್ಯಂತ ವಿದ್ಯುತ್ ಉತ್ಪಾದನೆಯ ಹೊರತಾಗಿ ಕುಡಿಯುವ ನೀರಿಗೆ ಅಗತ್ಯವಾದ ಜಲಾಶಯಗಳನ್ನು ಮರುಪೂರಣ ಮಾಡಲು ಕೂಡ ಇದು ನಿರ್ಣಾಯಕವಾಗಿದೆ.

Advertisement
  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

2 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

5 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

5 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

14 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago