Advertisement
Opinion

ಪವರ್‌ ಕಳೆದುಕೊಳ್ಳುತ್ತಿರುವ ಎಲ್‌ ನಿನೋ | ಜುಲೈ-ಸೆಪ್ಟೆಂಬರ್ ವೇಳೆಗೆ ‘ಲಾ ನಿನಾ’ ಪ್ರಬಲ | ಉತ್ತಮ ಮುಂಗಾರು ನಿರೀಕ್ಷೆ |

Share

ಈ ಬಾರಿಯ ಹವಾಮಾನ ವೈಪರೀತ್ಯಕ್ಕೆ(Climate change) ಭಾರಿ ಕಾರಣವಾಗಿದ್ದ ಎಲ್‌ ನಿನೋ(L nino, ನಿಧಾನವಾಗಿ ತನ್ನ ಪವರ್‌ ಅನ್ನು ಕಳೆದುಕೊಳ್ಳುತ್ತಿದೆ. ಇದೀಗ ಅದಕ್ಕೆ ವಿರುದ್ಧವಾಗಿ ಲಾ ನಿನಾ(La nino) ತನ್ನ ಅಸ್ತಿತ್ವವನ್ನು ಕಂಡುಕೊಳ್ಳುತ್ತಿದೆ. ಹೀಗಾಗಿ ವಿಶ್ವದಾದ್ಯಂತ ದಾಖಲೆಯ ತಾಪಮಾನ(Temperature) ಮತ್ತು ವಿಪರೀತ ಹವಾಮಾನಕ್ಕೆ ಕಾರಣವಾದ 2023/24ರ ಎಲ್ ನಿನೋ ಹವಾಮಾನ ಪರಿಸ್ಥಿತಿಯು ಈ ವರ್ಷದ ಕೊನೆಯಲ್ಲಿ ಲಾ ನಿನಾ ಪರಿಸ್ಥಿತಿಗಳಿಗೆ ಪರಿವರ್ತನೆಯಾಗಲಿದೆ ಎಂದು ವಿಶ್ವ ಹವಾಮಾನ ಸಂಸ್ಥೆ ತಿಳಿಸಿದೆ.

ಜಗತ್ತು 2023-24ರಲ್ಲಿ ಈ ಹಿಂದೆ ಎಂದೂ ಕಾಣದಂಥ ತೀವ್ರ ಉಷ್ಣಾಂಶದ ಏಪ್ರಿಲ್​ ತಿಂಗಳಿಗೆ ಮತ್ತು ದಾಖಲೆಯ ಹೆಚ್ಚಿನ ತಾಪಮಾನದ ಸತತ ಹನ್ನೊಂದನೇ ತಿಂಗಳಿಗೆ ಸಾಕ್ಷಿಯಾಗಿದೆ. ಡಬ್ಲ್ಯುಎಂಒ ಪ್ರಕಾರ, ಕಳೆದ 13 ತಿಂಗಳುಗಳಿಂದ ಸಮುದ್ರದ ಮೇಲ್ಮೈ ತಾಪಮಾನವು ದಾಖಲೆಯ ಪ್ರಮಾಣದಲ್ಲಿ ಹೆಚ್ಚಾಗಿದೆ. ಎಲ್​ ನಿನೋ ಇದು ಮಧ್ಯ ಮತ್ತು ಪೂರ್ವ ಪೆಸಿಫಿಕ್ ಮಹಾಸಾಗರದಲ್ಲಿ ನೈಸರ್ಗಿಕವಾಗಿ ಸಂಭವಿಸುವ ಹವಾಮಾನ ಪರಿಸ್ಥಿತಿಯಾಗಿದೆ. ಆದರೆ ಈ ಬಾರಿ ಅಸಾಮಾನ್ಯ ತಾಪಮಾನ ಏರಿಕೆ, ಮಾನವ ಚಟುವಟಿಕೆಗಳಿಂದ ಹಸಿರುಮನೆ ಅನಿಲಗಳ ಬಿಡುಗಡೆಯಿಂದ ವಾತಾವರಣ ಮತ್ತು ಸಾಗರದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಶಕ್ತಿಯಿಂದಾಗಿ ಎಲ್ ನಿನೋ ತೀವ್ರವಾಗಿದೆ ಎಂದು ಡಬ್ಲ್ಯುಎಂಒ ಹೇಳಿದೆ.

ಸದ್ಯ ಚಾಲ್ತಿಯಲ್ಲಿರುವ, ಆದರೆ ದುರ್ಬಲಗೊಳ್ಳುತ್ತಿರುವ ಎಲ್ ನಿನೊ ಹವಾಮಾನ ಪರಿಸ್ಥಿತಿಗಳಿಂದಾಗಿ ಭಾರತ ಮತ್ತು ಪಾಕಿಸ್ತಾನ ಸೇರಿದಂತೆ ದಕ್ಷಿಣ ಏಷ್ಯಾದ ಲಕ್ಷಾಂತರ ಜನರು ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಮಾರಣಾಂತಿಕವಾದ ಬಿಸಿಲಿನ ಹೊಡೆತ ಎದುರಿಸುವಂತಾಗಿತ್ತು. ಡಬ್ಲ್ಯುಎಂಒ ಗ್ಲೋಬಲ್ ಪ್ರೊಡಕ್ಷನ್ ಸೆಂಟರ್ಸ್ ಆಫ್ ಲಾಂಗ್-ರೇಂಜ್ ಫೋರ್ ಕಾಸ್ಟ್​ನ ಇತ್ತೀಚಿನ ಮುನ್ಸೂಚನೆಗಳ ಪ್ರಕಾರ ಜೂನ್-ಆಗಸ್ಟ್​ನಲ್ಲಿ ತಟಸ್ಥ ಪರಿಸ್ಥಿತಿಗಳು ಉಂಟಾಗಬಹುದಾದ ಅಥವಾ ಎಲ್​ ನಿನೋ ಲಾ ನಿನಾಗೆ ಪರಿವರ್ತನೆಯಾಗುವ ಸಮಾನ ಸಂಭಾವ್ಯತೆಗಳಿವೆ.

ಲಾ ನಿನಾ ಪರಿಸ್ಥಿತಿಗಳು ಏರ್ಪಡುವ ಸಾಧ್ಯತೆಗಳು ಜುಲೈನಿಂದ ಸೆಪ್ಟೆಂಬರ್ ಅವಧಿಯಲ್ಲಿ ಶೇಕಡಾ 60 ರಷ್ಟು ಮತ್ತು ಆಗಸ್ಟ್​ನಿಂದ ನವೆಂಬರ್​ವರೆಗೆ ಶೇಕಡಾ 70 ರಷ್ಟಾಗಿರಲಿದೆ. ಈ ಸಮಯದಲ್ಲಿ ಎಲ್ ನಿನೋ ಮತ್ತೆ ಮರುಕಳಿಸುವ ಸಾಧ್ಯತೆಯು ನಗಣ್ಯ ಎಂದು ಡಬ್ಲ್ಯುಎಂಒ ಹೇಳಿದೆ. ಎಲ್ ನಿನೋ ಭಾರತದಲ್ಲಿ ದುರ್ಬಲ ಮಾನ್ಸೂನ್ ಮಾರುತಗಳು ಮತ್ತು ಶುಷ್ಕ ಪರಿಸ್ಥಿತಿಗಳಿಗೆ ಕಾರಣವಾಗುತ್ತದೆ ಹಾಗೂ ಇದಕ್ಕೆ ವಿರುದ್ಧವಾಗಿ ಲಾ ನಿನಾ ಭಾರತದಲ್ಲಿ ಹೇರಳವಾದ ಮಾನ್ಸೂನ್ ಮಳೆಗೆ ಕಾರಣವಾಗುತ್ತದೆ.

ಕಳೆದ ತಿಂಗಳು, ಭಾರತ ಹವಾಮಾನ ಇಲಾಖೆ ಭಾರತದಲ್ಲಿ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿತ್ತು. ಆಗಸ್ಟ್-ಸೆಪ್ಟೆಂಬರ್ ವೇಳೆಗೆ ಅನುಕೂಲಕರ ಲಾ ನಿನಾ ಪರಿಸ್ಥಿತಿಗಳು ಪ್ರಾರಂಭವಾಗುವ ನಿರೀಕ್ಷೆಯಿದೆ. ಭಾರತದ ಕೃಷಿ ವಲಯಕ್ಕೆ ಮಾನ್ಸೂನ್ ನಿರ್ಣಾಯಕವಾಗಿದೆ. ನಿವ್ವಳ ಕೃಷಿ ಪ್ರದೇಶದ 52 ಪ್ರತಿಶತದಷ್ಟು ಜನ ಮಾನ್ಸೂನ್ ಮೇಲೆ ಅವಲಂಬಿತರಾಗಿದ್ದಾರೆ. ದೇಶಾದ್ಯಂತ ವಿದ್ಯುತ್ ಉತ್ಪಾದನೆಯ ಹೊರತಾಗಿ ಕುಡಿಯುವ ನೀರಿಗೆ ಅಗತ್ಯವಾದ ಜಲಾಶಯಗಳನ್ನು ಮರುಪೂರಣ ಮಾಡಲು ಕೂಡ ಇದು ನಿರ್ಣಾಯಕವಾಗಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

20 hours ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

1 day ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

1 day ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

2 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

2 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

2 days ago