ಈಡೇರದ ಸೇತುವೆ ಭರವಸೆ | ಮತದಾನ‌ ಬಹಿಷ್ಕರಿಸಿ ಶ್ರಮ ಸೇವೆ ನಡೆಸಿದ ಜನತೆ | ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಘಟನೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ಕುಜುಂಬಾರ್ ಎಂಬಲ್ಲಿ ಸೇತುವೆ ನಿರ್ಮಿಸುವಂತೆ ಬೇಡಿಕೆ ಈಡೇರಿಸಿದ್ದರೂ, ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ಆ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೆ, ಹೊಳೆಗೆ ಮರದ ಸಂಕ ನಿರ್ಮಿಸಲು ಶ್ರಮಸೇವೆ ನಡೆಸಿದ ಘಟನೆ ನಡೆದಿದೆ.

Advertisement
Advertisement

ಕಡಬ ತಾಲೂಕಿನ ಕುಜುಂಬಾರು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಹಲವಾರು ವರ್ಷಗಳಿಂದ ಬೇಡಿಕೆ, ಮನವಿ ಸಲ್ಲಿಸಿದ್ದರೂ ಸಂಬಂಧಿಸಿದವರು ನಿರ್ಲಕ್ಷ್ಯ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಇಲ್ಲಿನ ಜನ ಸೇತುವೆ ನಿರ್ಮಿಸದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರದೊಂದಿಗೆ ಬ್ಯಾನರ್ ಅಳವಡಿಸಿದ್ದರು. ಈ ವೇಳೆ ಸ್ಥಳೀಯ ಅಧಿಕಾರಿಗಳು ಆಗಮಿಸಿ ಜನರ ಮನವೊಲಿಸಿದ್ದರು. ಸೇತುವೆ ನಿರ್ಮಿಸದಿದ್ದಲ್ಲಿ ಮತದಾನ ಬಹಿಷ್ಕಾರ ಎಂಬ ನಿರ್ಧಾರಕ್ಕೂ ಅಂದೇ ಬಂದಿದ್ದರು.

ಸೇತುವೆ ನಿರ್ಮಿಸುವ ಬಗ್ಗೆ ಯಾವುದೇ ಭರವಸೆ ಸಿಗದ ಹಿನ್ನಲೆಯಲ್ಲಿ ಕುಜುಂಬಾರು ಪರಿಸರದ ಸುಮಾರು 30 ಮನೆಗಳ 80 ಕ್ಕೂ ಅಧಿಕ ಜನರು ಮತ ಚಲಾಯಿಸಿಲ್ಲ. ಬದಲಿಗೆ, ಹೊಳೆಗೆ ಸಂಪರ್ಕ ಕಲ್ಪಿಸುವ ಪಾಲ ನಿರ್ಮಾಣದಲ್ಲಿ ಶ್ರಮಸೇವೆ ನಡೆಸಿ ಸಂಬಂಧಿಸಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಹಲವು ವರ್ಷಗಳಿಂದ ಬೇಡಿಕೆ ಇರಿಸಿದ್ದೇವೆ. ಆದರೂ ಸ್ಪಂಧಿಸುತ್ತಿಲ್ಲ, ಭರವಸೆ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌. ಇಂದು ವಿಧಾನ ಸಭಾ ಚುನಾವಣೆ ಬಹಿಷ್ಕರಿಸಿದ್ದೇವೆ. ಮುಂದೆಯೂ ಸೇತುವೆ ಆಗದಿದ್ದರೆ, ಎಂಪಿ ಚುನಾವಣೆಯನ್ನು ಬಹಿಷ್ಕಾರಿಸುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ನಿಮ್ಮ ಓಟು ನಮಗೆ ಅಗತ್ಯವಿಲ್ಲ ಎಂಬ ಮಾತನ್ನೂ ನಾವು ಕೇಳಬೇಕಾಗಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

18 hours ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

21 hours ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

22 hours ago

ಮುಂದುವರಿದ ಮಳೆಯಬ್ಬರ | 4 ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ |

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.  ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ…

1 day ago

ವಿದೇಶದಿಂದ ಹಳ್ಳಿಗೆ ಬಂದು ಕೃಷಿ ಸಾಧನೆ ಮಾಡಿದ ಯುವಕ

ಕೃಷಿಯನ್ನು ನಂಬಿ ಕೆಲಸ ಮಾಡಿದರೆ ಯಶಸ್ಸು ಕಾಣಬಹುದು ಎಂಬುದನ್ನು ರೈತ  ಯೋಗೇಶ್ ತೋರಿಸಿಕೊಟ್ಟಿದ್ದಾರೆ.…

2 days ago