ಈಡೇರದ ಸೇತುವೆ ಭರವಸೆ | ಮತದಾನ‌ ಬಹಿಷ್ಕರಿಸಿ ಶ್ರಮ ಸೇವೆ ನಡೆಸಿದ ಜನತೆ | ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಘಟನೆ|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ಕುಜುಂಬಾರ್ ಎಂಬಲ್ಲಿ ಸೇತುವೆ ನಿರ್ಮಿಸುವಂತೆ ಬೇಡಿಕೆ ಈಡೇರಿಸಿದ್ದರೂ, ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ಆ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೆ, ಹೊಳೆಗೆ ಮರದ ಸಂಕ ನಿರ್ಮಿಸಲು ಶ್ರಮಸೇವೆ ನಡೆಸಿದ ಘಟನೆ ನಡೆದಿದೆ.

Advertisement

ಕಡಬ ತಾಲೂಕಿನ ಕುಜುಂಬಾರು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಹಲವಾರು ವರ್ಷಗಳಿಂದ ಬೇಡಿಕೆ, ಮನವಿ ಸಲ್ಲಿಸಿದ್ದರೂ ಸಂಬಂಧಿಸಿದವರು ನಿರ್ಲಕ್ಷ್ಯ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಇಲ್ಲಿನ ಜನ ಸೇತುವೆ ನಿರ್ಮಿಸದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರದೊಂದಿಗೆ ಬ್ಯಾನರ್ ಅಳವಡಿಸಿದ್ದರು. ಈ ವೇಳೆ ಸ್ಥಳೀಯ ಅಧಿಕಾರಿಗಳು ಆಗಮಿಸಿ ಜನರ ಮನವೊಲಿಸಿದ್ದರು. ಸೇತುವೆ ನಿರ್ಮಿಸದಿದ್ದಲ್ಲಿ ಮತದಾನ ಬಹಿಷ್ಕಾರ ಎಂಬ ನಿರ್ಧಾರಕ್ಕೂ ಅಂದೇ ಬಂದಿದ್ದರು.

ಸೇತುವೆ ನಿರ್ಮಿಸುವ ಬಗ್ಗೆ ಯಾವುದೇ ಭರವಸೆ ಸಿಗದ ಹಿನ್ನಲೆಯಲ್ಲಿ ಕುಜುಂಬಾರು ಪರಿಸರದ ಸುಮಾರು 30 ಮನೆಗಳ 80 ಕ್ಕೂ ಅಧಿಕ ಜನರು ಮತ ಚಲಾಯಿಸಿಲ್ಲ. ಬದಲಿಗೆ, ಹೊಳೆಗೆ ಸಂಪರ್ಕ ಕಲ್ಪಿಸುವ ಪಾಲ ನಿರ್ಮಾಣದಲ್ಲಿ ಶ್ರಮಸೇವೆ ನಡೆಸಿ ಸಂಬಂಧಿಸಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಹಲವು ವರ್ಷಗಳಿಂದ ಬೇಡಿಕೆ ಇರಿಸಿದ್ದೇವೆ. ಆದರೂ ಸ್ಪಂಧಿಸುತ್ತಿಲ್ಲ, ಭರವಸೆ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌. ಇಂದು ವಿಧಾನ ಸಭಾ ಚುನಾವಣೆ ಬಹಿಷ್ಕರಿಸಿದ್ದೇವೆ. ಮುಂದೆಯೂ ಸೇತುವೆ ಆಗದಿದ್ದರೆ, ಎಂಪಿ ಚುನಾವಣೆಯನ್ನು ಬಹಿಷ್ಕಾರಿಸುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ನಿಮ್ಮ ಓಟು ನಮಗೆ ಅಗತ್ಯವಿಲ್ಲ ಎಂಬ ಮಾತನ್ನೂ ನಾವು ಕೇಳಬೇಕಾಗಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ | ಮೃತಪಟ್ಟ ಕುಟುಂಬಗಳಿಗೆ  ಶೃಂಗೇರಿ ಮಠದಿಂದ 2 ಲಕ್ಷ ಪರಿಹಾರ

ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿಯಿಂದ ಮೃತಪಟ್ಟ ಕುಟುಂಬಗಳಿಗೆ ಚಿಕ್ಕಮಗಳೂರು ಜಿಲ್ಲೆಯ  ಶೃಂಗೇರಿ ಶಾರದಾ ಮಠವು…

1 hour ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ.  ಮಂಡ್ಯ ಜಿಲ್ಲೆಯ…

2 hours ago

ಜೀವನ ಪೂರ್ತಿ ಈ ರಾಶಿಯವರ ಮೇಲಿರುವುದು ಗುರು ಬಲ !

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ಹವಾಮಾನ ವರದಿ | 01-05-2025 | ಕೆಲವು ಕಡೆ ಸಂಜೆ ಮಳೆ ನಿರೀಕ್ಷೆ | ಮೇ.6 ರಿಂದ ಮತ್ತೆ ಮಳೆ ಆರಂಭ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…

19 hours ago

ಅಪ್ಪ ಅಮ್ಮ ಇಲ್ಲದ ಪರೀಕ್ಷಾ ನಿಯಮಗಳು

ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…

22 hours ago

ಮೇ 2- 6 | ಮಂಗಳೂರಿನಲ್ಲಿ ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ

ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…

1 day ago