Advertisement

ಈಡೇರದ ಸೇತುವೆ ಭರವಸೆ | ಮತದಾನ‌ ಬಹಿಷ್ಕರಿಸಿ ಶ್ರಮ ಸೇವೆ ನಡೆಸಿದ ಜನತೆ | ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಘಟನೆ|

Share

ಸುಳ್ಯ ವಿಧಾನಸಭಾ ಕ್ಷೇತ್ರದ ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಐನೆಕಿದು ಗ್ರಾಮದ ಕುಜುಂಬಾರ್ ಎಂಬಲ್ಲಿ ಸೇತುವೆ ನಿರ್ಮಿಸುವಂತೆ ಬೇಡಿಕೆ ಈಡೇರಿಸಿದ್ದರೂ, ಬೇಡಿಕೆ ಈಡೇರಿಸದ ಹಿನ್ನಲೆಯಲ್ಲಿ ಆ ಭಾಗದ ಜನರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸದೆ, ಹೊಳೆಗೆ ಮರದ ಸಂಕ ನಿರ್ಮಿಸಲು ಶ್ರಮಸೇವೆ ನಡೆಸಿದ ಘಟನೆ ನಡೆದಿದೆ.

ಕಡಬ ತಾಲೂಕಿನ ಕುಜುಂಬಾರು ಎಂಬಲ್ಲಿ ಸೇತುವೆ ನಿರ್ಮಾಣಕ್ಕೆ ಹಲವಾರು ವರ್ಷಗಳಿಂದ ಬೇಡಿಕೆ, ಮನವಿ ಸಲ್ಲಿಸಿದ್ದರೂ ಸಂಬಂಧಿಸಿದವರು ನಿರ್ಲಕ್ಷ್ಯ ವಹಿಸಿದ್ದರು ಎಂದು ಆರೋಪಿಸಲಾಗಿದೆ. ಇತ್ತೀಚೆಗೆ ಇಲ್ಲಿನ ಜನ ಸೇತುವೆ ನಿರ್ಮಿಸದ ಹಿನ್ನಲೆಯಲ್ಲಿ ಮತದಾನ ಬಹಿಷ್ಕಾರ ಮಾಡುವ ನಿರ್ಧಾರದೊಂದಿಗೆ ಬ್ಯಾನರ್ ಅಳವಡಿಸಿದ್ದರು. ಈ ವೇಳೆ ಸ್ಥಳೀಯ ಅಧಿಕಾರಿಗಳು ಆಗಮಿಸಿ ಜನರ ಮನವೊಲಿಸಿದ್ದರು. ಸೇತುವೆ ನಿರ್ಮಿಸದಿದ್ದಲ್ಲಿ ಮತದಾನ ಬಹಿಷ್ಕಾರ ಎಂಬ ನಿರ್ಧಾರಕ್ಕೂ ಅಂದೇ ಬಂದಿದ್ದರು.

ಸೇತುವೆ ನಿರ್ಮಿಸುವ ಬಗ್ಗೆ ಯಾವುದೇ ಭರವಸೆ ಸಿಗದ ಹಿನ್ನಲೆಯಲ್ಲಿ ಕುಜುಂಬಾರು ಪರಿಸರದ ಸುಮಾರು 30 ಮನೆಗಳ 80 ಕ್ಕೂ ಅಧಿಕ ಜನರು ಮತ ಚಲಾಯಿಸಿಲ್ಲ. ಬದಲಿಗೆ, ಹೊಳೆಗೆ ಸಂಪರ್ಕ ಕಲ್ಪಿಸುವ ಪಾಲ ನಿರ್ಮಾಣದಲ್ಲಿ ಶ್ರಮಸೇವೆ ನಡೆಸಿ ಸಂಬಂಧಿಸಿದವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಹಲವು ವರ್ಷಗಳಿಂದ ಬೇಡಿಕೆ ಇರಿಸಿದ್ದೇವೆ. ಆದರೂ ಸ್ಪಂಧಿಸುತ್ತಿಲ್ಲ, ಭರವಸೆ ನೀಡಿ ಕೈತೊಳೆದುಕೊಳ್ಳುತ್ತಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ‌. ಇಂದು ವಿಧಾನ ಸಭಾ ಚುನಾವಣೆ ಬಹಿಷ್ಕರಿಸಿದ್ದೇವೆ. ಮುಂದೆಯೂ ಸೇತುವೆ ಆಗದಿದ್ದರೆ, ಎಂಪಿ ಚುನಾವಣೆಯನ್ನು ಬಹಿಷ್ಕಾರಿಸುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ನಿಮ್ಮ ಓಟು ನಮಗೆ ಅಗತ್ಯವಿಲ್ಲ ಎಂಬ ಮಾತನ್ನೂ ನಾವು ಕೇಳಬೇಕಾಗಿದೆ ಎಂದು ಜನತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

2 hours ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

3 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

4 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

13 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

15 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

22 hours ago