ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.
ನೀತಿ ಸಂಹಿತೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ರೋಡ್ ಶೋ, ಬೈಕ್ ರ್ಯಾಲಿ ನಡೆಸಿದ್ದರು. ಈ ವೇಳೆ ಅತಿವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ತ್ರಿಬಲ್ ರೈಡಿಂಗ್, ಹೆಲ್ಮೇಟ್ ರಹಿತ ಚಾಲನೆ, ಮೊಬೈಲ್ ಬಳಕೆ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.
ನಗರದ 250ಕ್ಕೂ ಹೆಚ್ಚು ಜಂಕ್ಷನ್ ನಲ್ಲಿದ್ದ ಕ್ಯಾಮಾರಾದಲ್ಲಿ ನಿಯಮ ಉಲ್ಲಂಘನೆ ದೃಶ್ಯ ಸೆರೆಯಾಗಿತ್ತು. ನಂತರ ಆ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ದಂಡ ವಿಧಿಸಿದ್ದಾರೆ.
ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…
ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…
ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…
ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…
ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…
ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…