ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.
ನೀತಿ ಸಂಹಿತೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ರೋಡ್ ಶೋ, ಬೈಕ್ ರ್ಯಾಲಿ ನಡೆಸಿದ್ದರು. ಈ ವೇಳೆ ಅತಿವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ತ್ರಿಬಲ್ ರೈಡಿಂಗ್, ಹೆಲ್ಮೇಟ್ ರಹಿತ ಚಾಲನೆ, ಮೊಬೈಲ್ ಬಳಕೆ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.
ನಗರದ 250ಕ್ಕೂ ಹೆಚ್ಚು ಜಂಕ್ಷನ್ ನಲ್ಲಿದ್ದ ಕ್ಯಾಮಾರಾದಲ್ಲಿ ನಿಯಮ ಉಲ್ಲಂಘನೆ ದೃಶ್ಯ ಸೆರೆಯಾಗಿತ್ತು. ನಂತರ ಆ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ದಂಡ ವಿಧಿಸಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…