ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.
ನೀತಿ ಸಂಹಿತೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ರೋಡ್ ಶೋ, ಬೈಕ್ ರ್ಯಾಲಿ ನಡೆಸಿದ್ದರು. ಈ ವೇಳೆ ಅತಿವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ತ್ರಿಬಲ್ ರೈಡಿಂಗ್, ಹೆಲ್ಮೇಟ್ ರಹಿತ ಚಾಲನೆ, ಮೊಬೈಲ್ ಬಳಕೆ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.
ನಗರದ 250ಕ್ಕೂ ಹೆಚ್ಚು ಜಂಕ್ಷನ್ ನಲ್ಲಿದ್ದ ಕ್ಯಾಮಾರಾದಲ್ಲಿ ನಿಯಮ ಉಲ್ಲಂಘನೆ ದೃಶ್ಯ ಸೆರೆಯಾಗಿತ್ತು. ನಂತರ ಆ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ದಂಡ ವಿಧಿಸಿದ್ದಾರೆ.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…