ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.
ನೀತಿ ಸಂಹಿತೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ರೋಡ್ ಶೋ, ಬೈಕ್ ರ್ಯಾಲಿ ನಡೆಸಿದ್ದರು. ಈ ವೇಳೆ ಅತಿವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ತ್ರಿಬಲ್ ರೈಡಿಂಗ್, ಹೆಲ್ಮೇಟ್ ರಹಿತ ಚಾಲನೆ, ಮೊಬೈಲ್ ಬಳಕೆ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.
ನಗರದ 250ಕ್ಕೂ ಹೆಚ್ಚು ಜಂಕ್ಷನ್ ನಲ್ಲಿದ್ದ ಕ್ಯಾಮಾರಾದಲ್ಲಿ ನಿಯಮ ಉಲ್ಲಂಘನೆ ದೃಶ್ಯ ಸೆರೆಯಾಗಿತ್ತು. ನಂತರ ಆ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ದಂಡ ವಿಧಿಸಿದ್ದಾರೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…