ಚುನಾವಣಾ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದ್ದು, ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಈ ನಡುವೆ ಫಲಿತಾಂಶಕ್ಕೂ ಮುನ್ನವೇ ಸಂಚಾರ ಪೊಲೀಸರು ರಾಜಕೀಯ ನಾಯಕರಿಗೆ ಬಿಸಿ ಮುಟ್ಟಿದ್ದಾರೆ.
ಚುನಾವಣೆ ನೀತಿ ಸಂಹಿತೆ ಜಾರಿಯಾಗಿದ್ದ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ ಮುಖಂಡರ ವಿರುದ್ಧ ಕೇಸ್ ದಾಖಲಿಸಿ ದಂಡ ವಿಧಿಸಿದ್ದಾರೆ.
ಚುನಾವಣೆ ನೀತಿ ಸಂಹಿತೆ ವೇಳೆ ಚುನಾವಣಾ ಪ್ರಚಾರ ನಡೆಸುತ್ತಿದ್ದ ರಾಜಕೀಯ ನಾಯಕರು ಸಂಚಾರ ನಿಯಮ ಉಲ್ಲಂಘಿಸಿದ್ದು, ಕಳೆದ 25 ದಿನಗಳಲ್ಲಿ ಬರೋಬ್ಬರಿ 4.12 ಲಕ್ಷ ಕೇಸ್ ದಾಖಲಾಗಿದೆ. ಈ ಪ್ರಕರಣಗಳಿಗೆ ಸಂಚಾರ ಪೊಲೀಸರು 22.89 ಕೋಟಿ ರೂ. ದಂಡ ವಿಧಿಸಿದ್ದಾರೆ.
ನೀತಿ ಸಂಹಿತೆ ವೇಳೆ ಬಿರುಸಿನ ಪ್ರಚಾರ ನಡೆಸಿದ್ದ ರಾಜಕೀಯ ಪಕ್ಷದ ಕಾರ್ಯಕರ್ತರು ರೋಡ್ ಶೋ, ಬೈಕ್ ರ್ಯಾಲಿ ನಡೆಸಿದ್ದರು. ಈ ವೇಳೆ ಅತಿವೇಗದ ಚಾಲನೆ, ಸಿಗ್ನಲ್ ಜಂಪ್, ಜೀಬ್ರಾ ಕ್ರಾಸಿಂಗ್, ತ್ರಿಬಲ್ ರೈಡಿಂಗ್, ಹೆಲ್ಮೇಟ್ ರಹಿತ ಚಾಲನೆ, ಮೊಬೈಲ್ ಬಳಕೆ ಮಾಡುವ ಮೂಲಕ ಸಂಚಾರ ನಿಯಮ ಉಲ್ಲಂಘಿಸಿದ್ದರು.
ನಗರದ 250ಕ್ಕೂ ಹೆಚ್ಚು ಜಂಕ್ಷನ್ ನಲ್ಲಿದ್ದ ಕ್ಯಾಮಾರಾದಲ್ಲಿ ನಿಯಮ ಉಲ್ಲಂಘನೆ ದೃಶ್ಯ ಸೆರೆಯಾಗಿತ್ತು. ನಂತರ ಆ ವಾಹನಗಳ ನಂಬರ್ ಪ್ಲೇಟ್ ಆಧರಿಸಿ ಪೊಲೀಸರು ದಂಡ ವಿಧಿಸಿದ್ದಾರೆ.
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…
ದಕ್ಷಿಣ ಕನ್ನಡದಲ್ಲಿ ಕಾಡಾನೆಗಳ ಹಾವಳಿ ಕೃಷಿಕರ ಜೀವ ಮತ್ತು ಕೃಷಿಭೂಮಿಗೆ ಗಂಭೀರ ಅಪಾಯವಾಗುತ್ತಿರುವ…