ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ-2023ರ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ದ ಕ ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದ್ದು ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ವಸತಿ ಸಮುಚ್ಚಯದಲ್ಲಿ ವಾಸ್ತವ್ಯವಿರುವವರ ಮಾಹಿತಿ ಸಂಗ್ರಹಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡುವರು, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ಪಾಸ್ ಪುಸ್ತಕ, ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಆರ್.ಜಿ.ಐ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ, ಅಧಿಕೃತ ಗುರುತಿನ ಚೀಟಿ ಮತ್ತು ವಿಶಿಷ್ಟ ಗುರುತಿನ ಚೀಟಿಗಳನ್ನು ಲಿಂಕ್ ಮಾಡುವ ಪ್ರಕ್ರೀಯೆ ಸಮಯದಲ್ಲಿ ಅಧಿಕಾರಿಗಳಿಗೆ ವಸತಿ ಸಮುಚ್ಚಯ ಮಾಲೀಕರ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಮುಚ್ಚಯದಲ್ಲಿ ವಾಸ್ತವ್ಯವಿರುವವರು ತಮ್ಮ ಕುಟುಂಬದ ಪೂರ್ಣ ವಿವರ ಮತ್ತು ಮಾಹಿತಿಯನ್ನು ನೀಡಿ ಸಹಕರಿಸಲು ಹಾಗೂ ಅಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಲಾಗಿದೆ.
ಈ ಬಗ್ಗೆ ಯಾವುದೇ ತಕರಾರು ತೋರಿದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರಡಿ ಪ್ರಕರಣ ದಾಖಲಿಸಲಾಗಿವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಚಾಮರಾಜನಗರದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಅರಣ್ಯ ಇಲಾಖೆ ಹಾಗೂ ಹೊಳೆಮತ್ತಿ ನೇಚರ್…
ಘಟ್ಟದ ಕೆಳಗಿನ ಪ್ರದೇಶಗಳ ಒಂದೆರಡು ಕಡೆ ಗುಡುಗು ಸಹಿತ ಸಾಮಾನ್ಯ ಮಳೆಯ ಸಾಧ್ಯತೆಗಳಿವೆ.…
ಸಾಹಿತ್ಯ, ಕಲಾ ರಂಗದೊಳಗೆ ಒಮ್ಮೆ ಇಣುಕಿ. ಬಹುತೇಕರ ಹೆಸರಿನÀ ಹಿಂದೆ ಬಿರುದುಗಳು ಅಂಟಿಕೊಂಡಿದೆ.…
2025-26ನೇ ಸಾಲಿನ ಮೈಸೂರಿನ ಪಿಂಜಿರಾಪೋಲ್ ಮತ್ತು ಇತರೆ ಗೋಶಾಲೆಗಳಿಗೆ ಬೆಂಬಲ ಕಾರ್ಯಕ್ರಮದಡಿಯಲ್ಲಿ ಸಹಾಯಧನಕ್ಕಾಗಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490
ಭಾರತ ಪ್ರವಾಸದಲ್ಲಿರುವ ಅಂಗೋಲಾ ಅಧ್ಯಕ್ಷ ಜೋವೊ ಮ್ಯಾನುಯೆಲ್ ಗೊನ್ಸಾಲ್ವೆಸ್ ಲಾರೆಂಕೊ ಮತ್ತು ಪ್ರಧಾನಿ…