Advertisement
ಸುದ್ದಿಗಳು

ಮತದಾರರ ಪಟ್ಟಿ ಪರಿಷ್ಕರಣೆ | ಡಿ.8 ರ ವರೆಗೆ ಹಕ್ಕು, ಆಕ್ಷೇಪಣೆಗೆ ಅವಕಾಶ

Share

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ-2023ರ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ದ ಕ ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದ್ದು ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯ  ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ವಸತಿ ಸಮುಚ್ಚಯದಲ್ಲಿ ವಾಸ್ತವ್ಯವಿರುವವರ ಮಾಹಿತಿ ಸಂಗ್ರಹಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡುವರು, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ಪಾಸ್ ಪುಸ್ತಕ, ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಆರ್.ಜಿ.ಐ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ, ಅಧಿಕೃತ ಗುರುತಿನ ಚೀಟಿ ಮತ್ತು ವಿಶಿಷ್ಟ ಗುರುತಿನ ಚೀಟಿಗಳನ್ನು ಲಿಂಕ್ ಮಾಡುವ ಪ್ರಕ್ರೀಯೆ ಸಮಯದಲ್ಲಿ ಅಧಿಕಾರಿಗಳಿಗೆ ವಸತಿ ಸಮುಚ್ಚಯ ಮಾಲೀಕರ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಮುಚ್ಚಯದಲ್ಲಿ ವಾಸ್ತವ್ಯವಿರುವವರು ತಮ್ಮ ಕುಟುಂಬದ ಪೂರ್ಣ ವಿವರ ಮತ್ತು ಮಾಹಿತಿಯನ್ನು ನೀಡಿ ಸಹಕರಿಸಲು ಹಾಗೂ ಅಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಲಾಗಿದೆ.

ಈ ಬಗ್ಗೆ ಯಾವುದೇ ತಕರಾರು ತೋರಿದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರಡಿ ಪ್ರಕರಣ ದಾಖಲಿಸಲಾಗಿವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

4 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

4 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

4 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

4 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

1 day ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

1 day ago