ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ-2023ರ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ದ ಕ ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದ್ದು ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ವಸತಿ ಸಮುಚ್ಚಯದಲ್ಲಿ ವಾಸ್ತವ್ಯವಿರುವವರ ಮಾಹಿತಿ ಸಂಗ್ರಹಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡುವರು, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ಪಾಸ್ ಪುಸ್ತಕ, ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಆರ್.ಜಿ.ಐ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ, ಅಧಿಕೃತ ಗುರುತಿನ ಚೀಟಿ ಮತ್ತು ವಿಶಿಷ್ಟ ಗುರುತಿನ ಚೀಟಿಗಳನ್ನು ಲಿಂಕ್ ಮಾಡುವ ಪ್ರಕ್ರೀಯೆ ಸಮಯದಲ್ಲಿ ಅಧಿಕಾರಿಗಳಿಗೆ ವಸತಿ ಸಮುಚ್ಚಯ ಮಾಲೀಕರ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಮುಚ್ಚಯದಲ್ಲಿ ವಾಸ್ತವ್ಯವಿರುವವರು ತಮ್ಮ ಕುಟುಂಬದ ಪೂರ್ಣ ವಿವರ ಮತ್ತು ಮಾಹಿತಿಯನ್ನು ನೀಡಿ ಸಹಕರಿಸಲು ಹಾಗೂ ಅಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಲಾಗಿದೆ.
ಈ ಬಗ್ಗೆ ಯಾವುದೇ ತಕರಾರು ತೋರಿದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರಡಿ ಪ್ರಕರಣ ದಾಖಲಿಸಲಾಗಿವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…
ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರು ಭಾಗಗಳಲ್ಲಿ ಮಧ್ಯಾಹ್ನ ನಂತರ ಗುಡುಗು-ಮಿಂಚು ಸಹಿತ ಸಾಧಾರಣ…
ಕರ್ನಾಟಕದ ಹಲವೆಡೆ ಪೂರ್ವ ಮುಂಗಾರು ಮಳೆ ಮುಂದುವರಿದಿದ್ದು, ಕರಾವಳಿಯಲ್ಲಿ ಮೇ 20ರಿಂದ ಮುಂಗಾರು…