Advertisement
ಸುದ್ದಿಗಳು

ಮತದಾರರ ಪಟ್ಟಿ ಪರಿಷ್ಕರಣೆ | ಡಿ.8 ರ ವರೆಗೆ ಹಕ್ಕು, ಆಕ್ಷೇಪಣೆಗೆ ಅವಕಾಶ

Share

ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ-2023ರ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ದ ಕ ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದ್ದು ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯ  ಹಮ್ಮಿಕೊಳ್ಳಲಾಗಿದೆ.

ಜಿಲ್ಲೆಯ ಎಲ್ಲಾ ವಸತಿ ಸಮುಚ್ಚಯದಲ್ಲಿ ವಾಸ್ತವ್ಯವಿರುವವರ ಮಾಹಿತಿ ಸಂಗ್ರಹಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡುವರು, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ಪಾಸ್ ಪುಸ್ತಕ, ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಆರ್.ಜಿ.ಐ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ, ಅಧಿಕೃತ ಗುರುತಿನ ಚೀಟಿ ಮತ್ತು ವಿಶಿಷ್ಟ ಗುರುತಿನ ಚೀಟಿಗಳನ್ನು ಲಿಂಕ್ ಮಾಡುವ ಪ್ರಕ್ರೀಯೆ ಸಮಯದಲ್ಲಿ ಅಧಿಕಾರಿಗಳಿಗೆ ವಸತಿ ಸಮುಚ್ಚಯ ಮಾಲೀಕರ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಮುಚ್ಚಯದಲ್ಲಿ ವಾಸ್ತವ್ಯವಿರುವವರು ತಮ್ಮ ಕುಟುಂಬದ ಪೂರ್ಣ ವಿವರ ಮತ್ತು ಮಾಹಿತಿಯನ್ನು ನೀಡಿ ಸಹಕರಿಸಲು ಹಾಗೂ ಅಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಲಾಗಿದೆ.

ಈ ಬಗ್ಗೆ ಯಾವುದೇ ತಕರಾರು ತೋರಿದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರಡಿ ಪ್ರಕರಣ ದಾಖಲಿಸಲಾಗಿವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

1 day ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

1 day ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

1 day ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

2 days ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

2 days ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago