ಕೇಂದ್ರ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ-2023ರ ಹಿನ್ನಲೆಯಲ್ಲಿ ಕರಡು ಮತದಾರರ ಪಟ್ಟಿ ಪ್ರಕಟಿಸಲಾಗಿದೆ.ದ ಕ ಜಿಲ್ಲೆಯಲ್ಲಿ ಒಟ್ಟು 17,08,955 ಮತದಾರರನ್ನು ಗುರುತಿಸಲಾಗಿದ್ದು ಡಿ.8ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಯ ಸಮಯದಲ್ಲಿ ಮನೆ ಮನೆ ಸಮೀಕ್ಷೆ ಕಾರ್ಯ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯ ಎಲ್ಲಾ ವಸತಿ ಸಮುಚ್ಚಯದಲ್ಲಿ ವಾಸ್ತವ್ಯವಿರುವವರ ಮಾಹಿತಿ ಸಂಗ್ರಹಕ್ಕಾಗಿ ಬೂತ್ ಮಟ್ಟದ ಅಧಿಕಾರಿಗಳು ಭೇಟಿ ನೀಡುವರು, ಮತದಾರರ ಗುರುತಿನ ಚೀಟಿಯೊಂದಿಗೆ ಆಧಾರ್ ಕಾರ್ಡ್, ಉದ್ಯೋಗ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಕಚೇರಿ ಪಾಸ್ ಪುಸ್ತಕ, ಆರೋಗ್ಯ ವಿಮೆ ಸ್ಮಾರ್ಟ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಆರ್.ಜಿ.ಐ ಸ್ಮಾರ್ಟ್ ಕಾರ್ಡ್, ಇಂಡಿಯನ್ ಪಾಸ್ ಪೋರ್ಟ್, ಪಿಂಚಣಿ ದಾಖಲೆ, ಸೇವಾ ಗುರುತಿನ ಚೀಟಿ, ಅಧಿಕೃತ ಗುರುತಿನ ಚೀಟಿ ಮತ್ತು ವಿಶಿಷ್ಟ ಗುರುತಿನ ಚೀಟಿಗಳನ್ನು ಲಿಂಕ್ ಮಾಡುವ ಪ್ರಕ್ರೀಯೆ ಸಮಯದಲ್ಲಿ ಅಧಿಕಾರಿಗಳಿಗೆ ವಸತಿ ಸಮುಚ್ಚಯ ಮಾಲೀಕರ ಸಂಘಟನೆಯ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸಮುಚ್ಚಯದಲ್ಲಿ ವಾಸ್ತವ್ಯವಿರುವವರು ತಮ್ಮ ಕುಟುಂಬದ ಪೂರ್ಣ ವಿವರ ಮತ್ತು ಮಾಹಿತಿಯನ್ನು ನೀಡಿ ಸಹಕರಿಸಲು ಹಾಗೂ ಅಧಿಕಾರಿಗಳಿಗೆ ಅನುಮತಿ ನೀಡಲು ಸೂಚಿಸಲಾಗಿದೆ.
ಈ ಬಗ್ಗೆ ಯಾವುದೇ ತಕರಾರು ತೋರಿದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1950ರಡಿ ಪ್ರಕರಣ ದಾಖಲಿಸಲಾಗಿವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…