ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿದೆ. ಇದೀಗ ಸಾಮಾಜಿಕ ಜಾಲತಾಣಗಳ ಮೇಲೂ ಇಲಾಖೆಗಳು ಕಣ್ಣಿಟ್ಟಿದೆ. ಸಿಕ್ಕಾಪಟ್ಟೆ ಪೋಸ್ಟ್ ಮಾಡುವವರು ಇದನ್ನು ಗಮನಿಸಿಕೊಳ್ಳುವುದು ಉತ್ತಮ.
ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಅಕ್ಷೇಪಾರ್ಹ ಪೊಸ್ಟ್ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್ಗಳನ್ನು ಪ್ರಸಾರ ಮಾಡುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ದ.ಕ.ಜಿಲ್ಲಾ ಪೊಲೀಸ್ ಅಧೀಕ್ಷಕರ ಕಚೇರಿ ಪ್ರಕಟಣೆ ಹೊರಡಿಸಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ಇಡಲು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ, ಜಿಲ್ಲಾ ಪೊಲೀಸ್ ಕಚೇರಿಯಲ್ಲಿ, ಪುತ್ತೂರು ಮತ್ತು ಬಂಟ್ವಾಳ ಪೊಲೀಸ್ ಉಪಾಧೀಕ್ಷಕರುಗಳ ಕಚೇರಿಗಳಲ್ಲಿ ಮಾನಿಟರ್ ಮಾಡಲಾಗುತ್ತಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಚುನಾವಣಾ ನೀತಿಸಂಹಿತೆ ಉಲ್ಲಂಘನೆಯಾಗುವಂತಹ ಪೋಸ್ಟ್ಗಳು ಕಂಡುಬಂದರೆ ಕ್ರಮ ಕೈಗೊಳ್ಳಲಾಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಹರಡುವ ಸುದ್ದಿ ಹಾಕುವುದು , ಸುಳ್ಳು ಸುದ್ದಿ ಹರಡುವುದು, ಅಶ್ಲೀಲ, ಅಸಭ್ಯ ವಿಷಯಗಳನ್ನು ಒಳಗೊಂಡ ಪೋಸ್ಟ್ , ಯಾವುದೇ ವ್ಯಕ್ತಿಗಳಿಗೆ ಸಂಬಂಧಿಸಿದಂತೆ ಚಾರಿತ್ರ್ಯಹರಣ ಹಾಗೂ ಮಾನಹಾನಿ ಉಂಟಾಗುವಂತಹ ಪೋಸ್ಟ್ ಗಳನ್ನು ಹಾಕುವುದು ಕಾನೂನಿನ ಪ್ರಕಾರ ಶಿಕ್ಷಾರ್ಹ ಅಪರಾಧವಾಗಿರುತ್ತದೆ. ಇಂತಹ ಯಾವುದೇ ಕಾನೂನುಬಾಹಿರ ಪೋಸ್ಟ್ಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರ ಮಾಡುವುದು ಕಂಡುಬಂದಲ್ಲಿ, ಅಂತಹವರ ವಿರುದ್ಧ ಸೂಕ್ತ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…