ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ.
ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ ವ್ಯವಸ್ಥೆಯಾಗಿದ್ದು ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಚುಣಾವಣಾ ಅಧಿಕಾರಿಗಳು ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗಳಿಂದ ಒಪ್ಪಿಗೆ ಪಡೆದು ಅನುಮತಿ ಪತ್ರವನ್ನು ನೀಡುತ್ತಾರೆ. ಅರ್ಜಿದಾರರು ತಮ್ಮ ಅನುಮತಿ ಪತ್ರಗಳನ್ನು ಆನ್ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇ ಮಾಡಲು ಎಲ್ಲಾ ಮತ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸುವಿಧಾ ಏಕ ಗವಾಕ್ಷಿ ಕೌಂಟರ್ ಗಳನ್ನು ತೆರೆಯಲಾಗಿದೆ.ಜಿಲ್ಲಾ ವ್ಯಾಪ್ತಿಯ ಅನುಮತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…