ರಾಜಕೀಯ ಪಕ್ಷದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಕೇಂದ್ರ ಚುನಾವಣಾ ಆಯೋಗವು ಸುವಿಧಾ ಆನ್ ಲೈನ್ ತಂತ್ರಾಂಶವನ್ನು ಜಾರಿಗೆ ತಂದಿದೆ.
ರಾಜಕೀಯ ಪಕ್ಷಗಳು ಪ್ರಚಾರಕ್ಕೆ ಅಗತ್ಯವಿರುವ ಸಭೆ, ಸಮಾರಂಭ, ಜಾಥಾ, ವಾಹನ ಇತ್ಯಾದಿಗಳ ಅನುಮತಿಗಾಗಿ ಸುವಿಧಾ ಪೋರ್ಟಲ್ನಲ್ಲಿ ಆನ್ಲೈನ್ ಮೂಲಕ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು. ಇದು ಏಕ ಗವಾಕ್ಷಿ ವ್ಯವಸ್ಥೆಯಾಗಿದ್ದು ಸಲ್ಲಿಕೆಯಾದ ಅರ್ಜಿಗಳನ್ನು ಸಂಬಂಧಿಸಿದ ಚುಣಾವಣಾ ಅಧಿಕಾರಿಗಳು ಪರಿಶೀಲಿಸಿ ಸಂಬಂಧ ಪಟ್ಟ ಇಲಾಖೆಗಳಿಂದ ಒಪ್ಪಿಗೆ ಪಡೆದು ಅನುಮತಿ ಪತ್ರವನ್ನು ನೀಡುತ್ತಾರೆ. ಅರ್ಜಿದಾರರು ತಮ್ಮ ಅನುಮತಿ ಪತ್ರಗಳನ್ನು ಆನ್ಲೈನ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ.
ಅರ್ಜಿ ಸ್ವೀಕರಿಸಿ ತ್ವರಿತವಾಗಿ ವಿಲೇ ಮಾಡಲು ಎಲ್ಲಾ ಮತ ಕ್ಷೇತ್ರದ ಚುನಾವಣಾಧಿಕಾರಿಗಳ ಕಚೇರಿಗಳಲ್ಲಿ ಸುವಿಧಾ ಏಕ ಗವಾಕ್ಷಿ ಕೌಂಟರ್ ಗಳನ್ನು ತೆರೆಯಲಾಗಿದೆ.ಜಿಲ್ಲಾ ವ್ಯಾಪ್ತಿಯ ಅನುಮತಿಗಾಗಿ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ಏಕ ಗವಾಕ್ಷಿ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…