Advertisement
ಸುದ್ದಿಗಳು

ಎಲೆಕ್ಷನ್ : ಹೆಲಿಕಾಪ್ಟರ್ ಗೆ ಡಿಮ್ಯಾಂಡೊ ಡಿಮ್ಯಾಂಡ್ : ಒಂದು ಗಂಟೆಗೆ ಬರೋಬ್ಬರಿ ಬಾಡಿಗೆ

Share

ಬೆಂಗಳೂರು- ಕರ್ನಾಟಕದ ಹೈವೋಲ್ಟೇಜ್ ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ ಗಳು ಸಾಥ್ ನೀಡುತ್ತಿವೆ. ಕರ್ನಾಟಕದಲ್ಲಿ ಇರುವ ಹೆಲಿಕಾಪ್ಟರ್ ಗಳು ಸಾಲಲ್ಲ ಅಂತ ಹೊರ ರಾಜ್ಯಗಳಿಂದ ಹೆಲಿಕಾಪ್ಟರ್ ಗಳನ್ನು ತರಿಸಲಾಗುತ್ತಿದೆ.

ಒಂದೇ ದಿನ ರಾಜ್ಯದ ಹಲವು ಜಿಲ್ಲೆ ಹಾಗೂ ತಾಲ್ಲೂಕುಗಳಿಗೆ ಹೋಗಲು ಸಮಯದ ಅಭಾವವಿದೆ. ಈ ಕಾರಣ ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ನಾಯಕರು ಹೆಲಿಕಾಪ್ಟರ್ ಗಳನ್ನು ಬುಕ್ ಮಾಡಿದ್ದಾರೆ.

ಕರ್ನಾಟಕದಲ್ಲಿ ಈಗ 100 ಕ್ಕೂ ಹೆಚ್ಚು ಹೆಲಿಕಾಪ್ಟರ್ ಗಳಿವೆ. ಆದರೆ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ನವರು ಎಲ್ಲಾ ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳನ್ನು ಬುಕ್ ಮಾಡಿದ್ದಾರೆ.

ಈ ಡಿಮ್ಯಾಂಡ್ ಪೂರೈಸಲು ಕಂಪನಿಗಳು ದೆಹಲಿ, ಕೊಲ್ಕತ್ತಾ, ಕೊಚ್ಚಿ, ಗೋವಾ, ಆಂಧ್ರಪ್ರದೇಶ, ಜೈಪುರ ಸೇರಿದಂತೆ ಹಲವು ರಾಜ್ಯಗಳಿಂದ 150 ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳನ್ನು ತರಿಸಿಕೊಂಡಿವೆ.

ಇನ್ನು ಹೆಲಿಕಾಪ್ಟರ್ ಹಾಗೂ ಮಿನಿ ವಿಮಾನಗಳ ಬಾಡಿಗೆ ಒಂದು ಗಂಟೆಗೆ ಇಂತಿಷ್ಟು ಎಂದು ನಿಗದಿ ಮಾಡಲಾಗಿದೆ.

ಎರಡು ಸೀಟ್ ಹೆಲಿಕಾಪ್ಟರ್ ಬಾಡಿಗೆ ಒಂದು ಗಂಟೆಗೆ 2.10 ಲಕ್ಷ, ನಾಲ್ಕು ಸೀಟ್ ಹೆಲಿಕಾಪ್ಟರ್ 2.40 ಲಕ್ಷ, ಆರು ಸೀಟ್ ಹೆಲಿಕಾಪ್ಟರ್ 2.60 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ.

8 ಸೀಟ್ ಮಿನಿ ವಿಮಾನಕ್ಕೆ 3.50 ಲಕ್ಷ ಗಳು 13 ಸೀಟ್ ಮಿನಿ ವಿಮಾನಕ್ಕೆ 4 ಲಕ್ಷ ರೂಪಾಯಿಯನ್ನು ಗಂಟೆಗೆ ನಿಗದಿ ಮಾಡಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

2 hours ago

ಹವಾಮಾನ ವರದಿ | 26-07-2026 | ಕರ್ನಾಟಕದಲ್ಲಿ ಮತ್ತೆ ಮಳೆ ಚುರುಕು – ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ | ಕರಾವಳಿ–ಮಲೆನಾಡಿನಲ್ಲಿ 10 ದಿನ ಮಳೆಯ ಸಾಧ್ಯತೆ

ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…

3 hours ago

ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ

ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…

1 day ago

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…

2 days ago

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…

2 days ago