Advertisement
ಸುದ್ದಿಗಳು

#BJPStatePresident| ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಆಯ್ಕೆ ಚುರುಕು : ಸಿಟಿ ರವಿಗೆ ವರಿಷ್ಠರಿಂದ ದೆಹಲಿಗೆ ಬುಲಾವ್

Share

2023ರ ವಿಧಾನ ಸಭೆ ಚುನಾವಣೆ ನಂತರ ಬಿಜೆಪಿ ಯಾಕೋ ಭಾರಿ ನಿಧಾನ ಗತಿಯಲ್ಲಿ ತಮ್ಮ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಹೈಕಮಾಂಡ್‌ ರಾಜ್ಯದ ನಾಯಕರ ಮೇಲೆ ಭರವಸೆಯನ್ನೇ ಕಳೆದುಕೊಂಡಂತಿದೆ. ರಾಜ್ಯಾಧ್ಯಕ್ಷರಾಗಿದ್ದ ನಳೀನ್‌ ಕಟೀಲ್‌ ಅವರನ್ನು ಸ್ಥಾನದಿಂದ ಇಳಿಸಿ ಇನ್ನೋಬ್ಬರನ್ನು ಆಯ್ಕೆ ಮಾಡುವ ಕಸರತ್ತು ಮಾಡುತ್ತಿರುವ ಬಿಜೆಪಿಗೆ ಇನ್ನೂ ಸರಿಯಾದ ಅಭ್ಯರ್ಥಿ ಸಿಕ್ಕಿಲ್ಲ. ಅತ್ತ ವಿರೋಧ ಪಕ್ಷ ನಾಯಕನನ್ನು ಆರಿಸದೇ ಆಡಳಿತ ಪಕ್ಷದಿಂದ ಹಿಗ್ಗಾಮುಗ್ಗಾ ಮಾತು ಕೇಳುತ್ತಿದೆ. ಇದೀಗ ರಾಜ್ಯ ಬಿಜೆಪಿಯಲ್ಲಿ ರಾಜ್ಯಾಧ್ಯಕ್ಷ ಆಯ್ಕೆ ಸಂಬಂಧ ಒಂದಷ್ಟು ಪೂರಕ ಬೆಳವಣಿಗೆಗಳು ಚುರುಕು ಪಡೆದುಕೊಂಡಿವೆ.

ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಸಿ.ಟಿ ರವಿ ಹೆಸರು ಕೈಬಿಟ್ಟಿರುವ ವರಿಷ್ಠರು, ಅವರಿಗೆ ಸೋಮವಾರ ದೆಹಲಿಗೆಬುಲಾವ್ ಕೊಟ್ಟಿರೋದು ಕುತೂಹಲ ಮೂಡಿಸಿದೆ. ಈ ಮಧ್ಯೆ ಭಾನುವಾರ ಬೆಳಗ್ಗೆ ಆರ್‌ಎಸ್‌ಎಸ್ ಮುಖಂಡರನ್ನು ಸಿ.ಟಿ ರವಿ ಭೇಟಿ ಮಾಡಿರುವುದು ಈ ನಿಟ್ಟಿನಲ್ಲಿ ಇನ್ನಷ್ಟು ಪುಷ್ಠಿ ಕೊಟ್ಟಿದೆ. ಬರೋಬ್ಬರಿ ಎರಡೂವರೆ ತಿಂಗಳ ಬಳಿಕ ಬಿಜೆಪಿ ಹೈಕಮಾಂಡ್ ರಾಜ್ಯ ಬಿಜೆಪಿ ಮೇಲೆ ಗಮನ ಹರಿಸುವ ಲಕ್ಷಣ ಕಾಣಿಸುತ್ತಿದೆ. ರಾಜ್ಯ ಬಿಜೆಪಿಗೆ ಮುಂದಿನ ಸಮರ್ಥ ಸಾರಥಿಯ ಆಯ್ಕೆಗೆ ಹೈಕಮಾಂಡ್ ಮುಂದಾಗಿದೆ. ಈ ನಿಟ್ಟಿನಲ್ಲಿ ಒಂದಷ್ಟು ಸುಳಿವುಗಳು ಸಿಗುತ್ತಿದ್ದು, ಪೂರಕ ವಿದ್ಯಮಾನಗಳು ನಡೆಯುತ್ತಿವೆ. ಮುಂದಿನ ಬಿಜೆಪಿ ಸಾರಥಿಯಾಗಿ ಮಾಜಿ ಶಾಸಕ ಸಿ.ಟಿ ರವಿ ಹೆಸರು ಮುಂಚೂಣಿಯಲ್ಲಿದೆ.

Advertisement

ಶನಿವಾರವಷ್ಟೇ ಅವರ ಹೆಸರನ್ನು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸ್ಥಾನದಿಂದ ಕೊಕ್ ಕೊಟ್ಟಿರೋದು ಈ ಸುದ್ದಿಗೆ ಮತ್ತಷ್ಟು ಪುಷ್ಠಿ ನೀಡಿದೆ. ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಪ್ರತಿಕ್ರಿಯಿಸಿರುವ ಸಿ.ಟಿ ರವಿ, ತಾವೀಗ ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಷ್ಟೇ. ರಾಜ್ಯಾಧ್ಯಕ್ಷ ಸ್ಥಾನದ ಆಕಾಂಕ್ಷಿ ಅಲ್ಲದಿದ್ದರೂ ವರಿಷ್ಠರು ಕೊಡುವ ಯಾವುದೇ ಜವಾಬ್ದಾರಿ ನಿಭಾಯಿಸುವುದಾಗಿ ಹೇಳುವ ಮೂಲಕ ಪರೋಕ್ಷವಾಗಿ ಆಕಾಂಕ್ಷೆ ವ್ಯಕ್ತಪಡಿಸಿದ್ದಾರೆ.

ಸೋಮವಾರ ದೆಹಲಿಗೆ ಬರುವಂತೆ ಸಿ.ಟಿ ರವಿಗೆ ಹೈಕಮಾಂಡ್ ನಾಯಕರು ಬುಲಾವ್ ಕೊಟ್ಟಿದ್ದಾರೆ. ಸೋಮವಾರ ದೆಹಲಿಯಲ್ಲಿ ವರಿಷ್ಠರ ಭೇಟಿ ಮಾಡಿ ಸಿ.ಟಿ ರವಿ ಮಾತುಕತೆ ನಡೆಸಲಿದ್ದಾರೆ. ಇನ್ನು ಇದೇ ವೇಳೆ ಭಾನುವಾರ ಬೆಳಗ್ಗೆ ಸಿ.ಟಿ ರವಿ ಬೆಂಗಳೂರಿನಲ್ಲಿ ಹಿರಿಯ ಆರ್‌ಎಸ್‌ಎಸ್ ಮುಖಂಡರನ್ನೂ ಭೇಟಿ ಮಾಡಿ ಮಾತನಾಡಿರುವುದು ಕುತೂಹಲ ಮೂಡಿಸಿದೆ. ರಾಜ್ಯಾಧ್ಯಕ್ಷ ಸ್ಥಾನಕ್ಕೆ ಒಕ್ಕಲಿಗ ಮತ್ತು ವಿಧಾನಸಭೆ ವಿಪಕ್ಷ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮೀಕರಣದ ಜೊತೆಗೆ ಎರಡೂ ಹುದ್ದೆಗಳಿಗೂ ಹಿಂದೂ ಫೈರ್ ಬ್ರ್ಯಾಂಡ್ ನಾಯಕರನ್ನೇ ನೇಮಕ ಮಾಡುವ ಲೆಕ್ಕಾಚಾರ ಇದೆ ಎನ್ನಲಾಗಿದೆ. ಆದರೆ ಸದ್ಯಕ್ಕೆ ರಾಜ್ಯಾಧ್ಯಕ್ಷ ಸ್ಥಾನಕ್ಕಷ್ಟೇ ನೇಮಕ ಆಗುತ್ತಾ ಅಥವಾ ಉಭಯ ಸದನಗಳ ವಿಪಕ್ಷ ನಾಯಕರ ಆಯ್ಕೆಯೂ ಫೈನಲ್ ಆಗುತ್ತಾ ಎಂದು ಕಾದು ನೋಡಬೇಕಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

11 hours ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

20 hours ago

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

2 days ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

2 days ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

2 days ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

2 days ago