ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ ಕರ್ನಾಟಕದಲ್ಲಿ 108.78 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.
2018 ರ ವಿಧಾನಸಭೆ ಚುನಾವಣೆಗೆ ಮುನ್ನ ಅದೇ ದಿನಗಳಲ್ಲಿ (27 ಮಾರ್ಚ್ 2018 ರಿಂದ 9 ಏಪ್ರಿಲ್ 2018) 20.12 ಕೋಟಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ವಿಪರೀತವಾದ ಹಣ ಸಾಗಾಟ ಪ್ರಕರಣ ಪತ್ತೆಯಾಗಿದೆ. ಸುಮಾರು ಶೇ.440 ರಷ್ಟು ವಶಪಡಿಸಿಕೊಳ್ಳುವಿಕೆ ಹೆಚ್ಚಾಗಿದೆ.
ವಶಪಡಿಸಿಕೊಂಡ ವಸ್ತುಗಳಲ್ಲಿ ಲೆಕ್ಕಕ್ಕೆ ಸಿಗದ 37.24 ಕೋಟಿ ರೂಪಾಯಿ ನಗದು, 26.68 ಕೋಟಿ ರೂಪಾಯಿ ಮೌಲ್ಯದ 5.23 ಲಕ್ಷ ಲೀಟರ್ ಮದ್ಯ, 11.54 ಕೋಟಿ ರೂಪಾಯಿ ಮೌಲ್ಯದ 397 ಕೆಜಿ ಅಕ್ರಮ ಮಾದಕ ದ್ರವ್ಯ, 14.96 ಕೋಟಿ ರೂಪಾಯಿ ಮೌಲ್ಯದ 34.36 ಕೆಜಿ ಚಿನ್ನ ಮತ್ತು 15.80 ಕೋಟಿ ಮೌಲ್ಯದ ಉಚಿತ ವಸ್ತುಗಳು ಸೇರಿವೆ.
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…
ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…
ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್ ದಾಟಿದ್ದು, ತೆಂಗಿನ…