ರಾಜ್ಯದಲ್ಲಿ ಚುನಾವಣೆ ಘೋಷಣೆಯಾಗಿ ವಿಧಾನಸಭಾ ಚುನಾವಣೆಯ ಮಾದರಿ ನೀತಿ ಸಂಹಿತೆ ಜಾರಿಯಾದ 11 ದಿನಗಳಲ್ಲಿ ಕರ್ನಾಟಕದಲ್ಲಿ 108.78 ಕೋಟಿ ರೂಪಾಯಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ.
2018 ರ ವಿಧಾನಸಭೆ ಚುನಾವಣೆಗೆ ಮುನ್ನ ಅದೇ ದಿನಗಳಲ್ಲಿ (27 ಮಾರ್ಚ್ 2018 ರಿಂದ 9 ಏಪ್ರಿಲ್ 2018) 20.12 ಕೋಟಿ ಮೌಲ್ಯದ ನಗದು ಮತ್ತು ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ. ಈ ಬಾರಿಯ ಚುನಾವಣೆಯಲ್ಲಿ ವಿಪರೀತವಾದ ಹಣ ಸಾಗಾಟ ಪ್ರಕರಣ ಪತ್ತೆಯಾಗಿದೆ. ಸುಮಾರು ಶೇ.440 ರಷ್ಟು ವಶಪಡಿಸಿಕೊಳ್ಳುವಿಕೆ ಹೆಚ್ಚಾಗಿದೆ.
ವಶಪಡಿಸಿಕೊಂಡ ವಸ್ತುಗಳಲ್ಲಿ ಲೆಕ್ಕಕ್ಕೆ ಸಿಗದ 37.24 ಕೋಟಿ ರೂಪಾಯಿ ನಗದು, 26.68 ಕೋಟಿ ರೂಪಾಯಿ ಮೌಲ್ಯದ 5.23 ಲಕ್ಷ ಲೀಟರ್ ಮದ್ಯ, 11.54 ಕೋಟಿ ರೂಪಾಯಿ ಮೌಲ್ಯದ 397 ಕೆಜಿ ಅಕ್ರಮ ಮಾದಕ ದ್ರವ್ಯ, 14.96 ಕೋಟಿ ರೂಪಾಯಿ ಮೌಲ್ಯದ 34.36 ಕೆಜಿ ಚಿನ್ನ ಮತ್ತು 15.80 ಕೋಟಿ ಮೌಲ್ಯದ ಉಚಿತ ವಸ್ತುಗಳು ಸೇರಿವೆ.
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…