ಕರ್ನಾಟಕ ಬಿಜೆಪಿಯಲ್ಲಿ ಹೊಸ ತಂತ್ರ | ಹೊಸಬರಿಗೆ ಆದ್ಯತೆ | ಗುಂಪುಗಾರಿಕೆ ತಡೆಯಲು ತಂತ್ರಗಾರಿಕೆ |

April 3, 2023
11:19 AM

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಬಳಿಕ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲ್ಲಾ ಪಕ್ಷಗಳಲ್ಲೂ ಗುಂಪುಗಾರಿಕೆ, ಅಸಮಾಧಾನಗಳು ಕಂಡುಬರುತ್ತಿದೆ. ಇದೇ ಕಾರಣದಿಂದ ಕಾಂಗ್ರೆಸ್‌ ಪಕ್ಷವು ಮೊದಲೇ ಒಂದು ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿತ್ತು. ಬಿಜೆಪಿಯು ಗುಂಪುಗಾರಿಕೆ ತಡೆಯಲು ತಂತ್ರ ಮಾಡುತ್ತಿದೆ. ಉತ್ತರ ಪ್ರದೇಶ ಮಾದರಿಯಲ್ಲೇ ಕರ್ನಾಟಕದಲ್ಲೂ ಟಿಕೆಟ್‌ ಹಂಚಿಕೆ ಮಾಡಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆ, ಅಸಮಾಧಾನ, ವಿರೋಧಿ ಅಲೆ ಇರುವ ಕಡೆಗಳಲ್ಲಿ  ಹೊಸಬರಿಗೆ ಆದ್ಯತೆ ನೀಡಲು ಸಿದ್ಧತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಗುಂಪುಗಾರಿಕೆ ಹಾಗೂ ಎಲ್ಲೆಲ್ಲಿ ಯಾವ ವಾತಾವರಣ ಇದೆ, ಅದಕ್ಕೆ ಕಾರಣಗಳ ಸಹಿತ ಕಂಡುಹಿಡಿಯಲು ತಟಸ್ಥ ಏಜೆನ್ಸಿಯೊಂದರ ಸಮೀಕ್ಷೆಯ ಮೂಲಕ ಪ್ರಾಥಮಿಕ ಹಂತದ ಮಾಹಿತಿ ಸಂಗ್ರಹ ಕಾರ್ಯವನ್ನು ಬಿಜೆಪಿ ಮಾಡಿತ್ತು. ಈ ಮೂಲಕ ಕ್ಷೇತ್ರದ ಸಮಗ್ರ ಮಾಹಿತಿ ಕಲೆ ಹಾಕಿತ್ತು. ಏಕೆ ವಿರೋಧ ಹಾಗೂ ಇದಕ್ಕೆ ಕಾರಣವನ್ನೂ ಕಂಡು ಹಿಡಿಯುತ್ತಿದೆ. ಒಂದು ವೇಳೆ ಬಣ ರಾಜಕೀಯಗಳು ಇದ್ದರೆ ಅಂತಹ ಕಡೆಗಳಲ್ಲಿ  ಯಾವ ಬಣಕ್ಕೂ ಸೇರದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೆ ಹೇಗೆ ಎಂಬ ಸಮೀಕ್ಷೆಯನ್ನೂ ನಡೆಸಿದೆ.

ಟಿಕೆಟ್‌ ವಂಚಿತರಾಗುವವರ ಪೈಕಿ ಕೆಲ ಹಿರಿಯರಿಗೆ ಅಧಿಕಾರ ಬಂದ ಬಳಿಕ  ಸ್ಥಾನಮಾನ ಗಳನ್ನು ನೀಡುವ ಭರವಸೆ ನೀಡಿ ಚುನಾವಣಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗುತ್ತದೆ. ಅಮಿತ್‌ ಶಾ ಅವರ ರಾಜ್ಯ ಪ್ರವಾಸ ಮತ್ತು ಇನ್ನೊಂದು ಹಂತದ ಸಮೀಕ್ಷೆಯ ನಂತರ ಬಿಜೆಪಿ ನಿಲುವುಗಳು ಗಟ್ಟಿಯಾಗಲಿದೆ ಎನ್ನುವುದು  ಪಕ್ಷದ ಮೂಲದಿಂದ ಲಭ್ಯ ಮಾಹಿತಿ.

ಕಾಂಗ್ರೆಸ್‌ ಪಕ್ಷವು ಕೂಡಾ ಈ ಬಾರಿ ಗೆಲುವು ಸಾಧಿಸಲು ತಂತ್ರಗಳನ್ನು ಮಾಡುತ್ತಿದೆ. ಗುಂಪುಗಾರಿಕೆಗಳಿಗೆ ಬ್ರೇಕ್‌ ಹಾಕಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆಯ ಕಾರಣದಿಂದ ಕ್ಷೇತ್ರವು ಸೋತರೆ ಸ್ಥಳೀಯ ನಾಯಕತ್ವನ್ನೇ ಬದಲು ಮಾಡಲು ಚಿಂತನೆ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಪಕ್ಷದ ತೀರ್ಮಾನದ ವಿರುದ್ಧ ಹೋಗದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಪಕ್ಷದ ಮೂಲದ ಮಾಹಿತಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!
March 25, 2026
12:30 PM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 24-03-2026 | ಕರ್ನಾಟಕದಲ್ಲಿ ಮತ್ತೆ ಮಳೆ ಅಲರ್ಟ್‌ | ಈ ದಿನದಿಂದ ಮಳೆ ವ್ಯಾಪ್ತಿ ಹೆಚ್ಚಳ ಸಾಧ್ಯತೆ..!
March 24, 2026
12:24 PM
by: ಸಾಯಿಶೇಖರ್ ಕರಿಕಳ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror