ಸುದ್ದಿಗಳು

ಕರ್ನಾಟಕ ಬಿಜೆಪಿಯಲ್ಲಿ ಹೊಸ ತಂತ್ರ | ಹೊಸಬರಿಗೆ ಆದ್ಯತೆ | ಗುಂಪುಗಾರಿಕೆ ತಡೆಯಲು ತಂತ್ರಗಾರಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಬಳಿಕ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲ್ಲಾ ಪಕ್ಷಗಳಲ್ಲೂ ಗುಂಪುಗಾರಿಕೆ, ಅಸಮಾಧಾನಗಳು ಕಂಡುಬರುತ್ತಿದೆ. ಇದೇ ಕಾರಣದಿಂದ ಕಾಂಗ್ರೆಸ್‌ ಪಕ್ಷವು ಮೊದಲೇ ಒಂದು ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿತ್ತು. ಬಿಜೆಪಿಯು ಗುಂಪುಗಾರಿಕೆ ತಡೆಯಲು ತಂತ್ರ ಮಾಡುತ್ತಿದೆ. ಉತ್ತರ ಪ್ರದೇಶ ಮಾದರಿಯಲ್ಲೇ ಕರ್ನಾಟಕದಲ್ಲೂ ಟಿಕೆಟ್‌ ಹಂಚಿಕೆ ಮಾಡಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆ, ಅಸಮಾಧಾನ, ವಿರೋಧಿ ಅಲೆ ಇರುವ ಕಡೆಗಳಲ್ಲಿ  ಹೊಸಬರಿಗೆ ಆದ್ಯತೆ ನೀಡಲು ಸಿದ್ಧತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

Advertisement
Advertisement

ಗುಂಪುಗಾರಿಕೆ ಹಾಗೂ ಎಲ್ಲೆಲ್ಲಿ ಯಾವ ವಾತಾವರಣ ಇದೆ, ಅದಕ್ಕೆ ಕಾರಣಗಳ ಸಹಿತ ಕಂಡುಹಿಡಿಯಲು ತಟಸ್ಥ ಏಜೆನ್ಸಿಯೊಂದರ ಸಮೀಕ್ಷೆಯ ಮೂಲಕ ಪ್ರಾಥಮಿಕ ಹಂತದ ಮಾಹಿತಿ ಸಂಗ್ರಹ ಕಾರ್ಯವನ್ನು ಬಿಜೆಪಿ ಮಾಡಿತ್ತು. ಈ ಮೂಲಕ ಕ್ಷೇತ್ರದ ಸಮಗ್ರ ಮಾಹಿತಿ ಕಲೆ ಹಾಕಿತ್ತು. ಏಕೆ ವಿರೋಧ ಹಾಗೂ ಇದಕ್ಕೆ ಕಾರಣವನ್ನೂ ಕಂಡು ಹಿಡಿಯುತ್ತಿದೆ. ಒಂದು ವೇಳೆ ಬಣ ರಾಜಕೀಯಗಳು ಇದ್ದರೆ ಅಂತಹ ಕಡೆಗಳಲ್ಲಿ  ಯಾವ ಬಣಕ್ಕೂ ಸೇರದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೆ ಹೇಗೆ ಎಂಬ ಸಮೀಕ್ಷೆಯನ್ನೂ ನಡೆಸಿದೆ.

ಟಿಕೆಟ್‌ ವಂಚಿತರಾಗುವವರ ಪೈಕಿ ಕೆಲ ಹಿರಿಯರಿಗೆ ಅಧಿಕಾರ ಬಂದ ಬಳಿಕ  ಸ್ಥಾನಮಾನ ಗಳನ್ನು ನೀಡುವ ಭರವಸೆ ನೀಡಿ ಚುನಾವಣಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗುತ್ತದೆ. ಅಮಿತ್‌ ಶಾ ಅವರ ರಾಜ್ಯ ಪ್ರವಾಸ ಮತ್ತು ಇನ್ನೊಂದು ಹಂತದ ಸಮೀಕ್ಷೆಯ ನಂತರ ಬಿಜೆಪಿ ನಿಲುವುಗಳು ಗಟ್ಟಿಯಾಗಲಿದೆ ಎನ್ನುವುದು  ಪಕ್ಷದ ಮೂಲದಿಂದ ಲಭ್ಯ ಮಾಹಿತಿ.

ಕಾಂಗ್ರೆಸ್‌ ಪಕ್ಷವು ಕೂಡಾ ಈ ಬಾರಿ ಗೆಲುವು ಸಾಧಿಸಲು ತಂತ್ರಗಳನ್ನು ಮಾಡುತ್ತಿದೆ. ಗುಂಪುಗಾರಿಕೆಗಳಿಗೆ ಬ್ರೇಕ್‌ ಹಾಕಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆಯ ಕಾರಣದಿಂದ ಕ್ಷೇತ್ರವು ಸೋತರೆ ಸ್ಥಳೀಯ ನಾಯಕತ್ವನ್ನೇ ಬದಲು ಮಾಡಲು ಚಿಂತನೆ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಪಕ್ಷದ ತೀರ್ಮಾನದ ವಿರುದ್ಧ ಹೋಗದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಪಕ್ಷದ ಮೂಲದ ಮಾಹಿತಿ.

Advertisement
/**/
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೇರಳ ಮತ್ತು ಅಸ್ಸಾಂನಲ್ಲಿ ಭಾರಿ ಮಳೆ, ದೆಹಲಿ ಮಾನ್ಸೂನ್ ವಿಳಂಬ

ರಾಷ್ಟ್ರೀಯ ರಾಜಧಾನಿ ದೆಹಲಿಗೆ ಮುಂಗಾರು ಮಳೆ ವಿಳಂಬವಾಗಿದ್ದು ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಸಾಮಾನ್ಯವಾಗಿ…

1 hour ago

ಬದುಕು ಪುರಾಣ | ವಾತ್ಸಲ್ಯಗಳು ತೂಕಡಿಸುತ್ತಿವೆ?

ಒಂದೇ ತಾಯಿಯ ಗರ್ಭದಿಂದ ಸಂಜನಿಸಿದ ಸಹೋದರರ ಗುಣಗಳಲ್ಲಿ ವ್ಯತ್ಯಾಸಗಳಿವೆ. ವ್ಯಕ್ತಿತ್ವ ರೂಪೀಕರಣದಲ್ಲೂ ಭಿನ್ನ…

1 hour ago

ಆಷಾಢ ಶುಕ್ರವಾರ ಈ 4 ತಪ್ಪುಗಳನ್ನು ಮಾಡಲೇಬೇಡಿ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

2 hours ago

ರಸ್ತೆ ಗುಂಡಿಮುಚ್ಚಲು ಇಕೋಫಿಕ್ಸ್ ತಂತ್ರಜ್ಞಾನ | ಏನಿದು ತಂತ್ರಜ್ಞಾನ ? ಗ್ರಾಮೀಣ ಭಾಗಕ್ಕೂ ಸೂಕ್ತವೇ..?

ರಸ್ತೆಯ ಗುಂಡಿಗಳಲ್ಲಿ ನೀರಿನ ಅಂಶ ಇರುವಾಗಲೂ ರಸ್ತೆ ತೇಪೆ ಕೆಲಸ ಮಾಡಬಹುದು ಹಾಗೂ…

2 hours ago

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

11 hours ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

12 hours ago