ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಬಳಿಕ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲ್ಲಾ ಪಕ್ಷಗಳಲ್ಲೂ ಗುಂಪುಗಾರಿಕೆ, ಅಸಮಾಧಾನಗಳು ಕಂಡುಬರುತ್ತಿದೆ. ಇದೇ ಕಾರಣದಿಂದ ಕಾಂಗ್ರೆಸ್ ಪಕ್ಷವು ಮೊದಲೇ ಒಂದು ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿತ್ತು. ಬಿಜೆಪಿಯು ಗುಂಪುಗಾರಿಕೆ ತಡೆಯಲು ತಂತ್ರ ಮಾಡುತ್ತಿದೆ. ಉತ್ತರ ಪ್ರದೇಶ ಮಾದರಿಯಲ್ಲೇ ಕರ್ನಾಟಕದಲ್ಲೂ ಟಿಕೆಟ್ ಹಂಚಿಕೆ ಮಾಡಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆ, ಅಸಮಾಧಾನ, ವಿರೋಧಿ ಅಲೆ ಇರುವ ಕಡೆಗಳಲ್ಲಿ ಹೊಸಬರಿಗೆ ಆದ್ಯತೆ ನೀಡಲು ಸಿದ್ಧತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.
ಗುಂಪುಗಾರಿಕೆ ಹಾಗೂ ಎಲ್ಲೆಲ್ಲಿ ಯಾವ ವಾತಾವರಣ ಇದೆ, ಅದಕ್ಕೆ ಕಾರಣಗಳ ಸಹಿತ ಕಂಡುಹಿಡಿಯಲು ತಟಸ್ಥ ಏಜೆನ್ಸಿಯೊಂದರ ಸಮೀಕ್ಷೆಯ ಮೂಲಕ ಪ್ರಾಥಮಿಕ ಹಂತದ ಮಾಹಿತಿ ಸಂಗ್ರಹ ಕಾರ್ಯವನ್ನು ಬಿಜೆಪಿ ಮಾಡಿತ್ತು. ಈ ಮೂಲಕ ಕ್ಷೇತ್ರದ ಸಮಗ್ರ ಮಾಹಿತಿ ಕಲೆ ಹಾಕಿತ್ತು. ಏಕೆ ವಿರೋಧ ಹಾಗೂ ಇದಕ್ಕೆ ಕಾರಣವನ್ನೂ ಕಂಡು ಹಿಡಿಯುತ್ತಿದೆ. ಒಂದು ವೇಳೆ ಬಣ ರಾಜಕೀಯಗಳು ಇದ್ದರೆ ಅಂತಹ ಕಡೆಗಳಲ್ಲಿ ಯಾವ ಬಣಕ್ಕೂ ಸೇರದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೆ ಹೇಗೆ ಎಂಬ ಸಮೀಕ್ಷೆಯನ್ನೂ ನಡೆಸಿದೆ.
ಟಿಕೆಟ್ ವಂಚಿತರಾಗುವವರ ಪೈಕಿ ಕೆಲ ಹಿರಿಯರಿಗೆ ಅಧಿಕಾರ ಬಂದ ಬಳಿಕ ಸ್ಥಾನಮಾನ ಗಳನ್ನು ನೀಡುವ ಭರವಸೆ ನೀಡಿ ಚುನಾವಣಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗುತ್ತದೆ. ಅಮಿತ್ ಶಾ ಅವರ ರಾಜ್ಯ ಪ್ರವಾಸ ಮತ್ತು ಇನ್ನೊಂದು ಹಂತದ ಸಮೀಕ್ಷೆಯ ನಂತರ ಬಿಜೆಪಿ ನಿಲುವುಗಳು ಗಟ್ಟಿಯಾಗಲಿದೆ ಎನ್ನುವುದು ಪಕ್ಷದ ಮೂಲದಿಂದ ಲಭ್ಯ ಮಾಹಿತಿ.
ಕಾಂಗ್ರೆಸ್ ಪಕ್ಷವು ಕೂಡಾ ಈ ಬಾರಿ ಗೆಲುವು ಸಾಧಿಸಲು ತಂತ್ರಗಳನ್ನು ಮಾಡುತ್ತಿದೆ. ಗುಂಪುಗಾರಿಕೆಗಳಿಗೆ ಬ್ರೇಕ್ ಹಾಕಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆಯ ಕಾರಣದಿಂದ ಕ್ಷೇತ್ರವು ಸೋತರೆ ಸ್ಥಳೀಯ ನಾಯಕತ್ವನ್ನೇ ಬದಲು ಮಾಡಲು ಚಿಂತನೆ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಪಕ್ಷದ ತೀರ್ಮಾನದ ವಿರುದ್ಧ ಹೋಗದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಪಕ್ಷದ ಮೂಲದ ಮಾಹಿತಿ.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…