Advertisement
ಸುದ್ದಿಗಳು

ಕರ್ನಾಟಕ ಬಿಜೆಪಿಯಲ್ಲಿ ಹೊಸ ತಂತ್ರ | ಹೊಸಬರಿಗೆ ಆದ್ಯತೆ | ಗುಂಪುಗಾರಿಕೆ ತಡೆಯಲು ತಂತ್ರಗಾರಿಕೆ |

Share

ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆ ಬಳಿಕ ರಾಜಕೀಯ ಚಟುವಟಿಕೆ ಗರಿಗೆದರಿದೆ. ಎಲ್ಲಾ ಪಕ್ಷಗಳಲ್ಲೂ ಗುಂಪುಗಾರಿಕೆ, ಅಸಮಾಧಾನಗಳು ಕಂಡುಬರುತ್ತಿದೆ. ಇದೇ ಕಾರಣದಿಂದ ಕಾಂಗ್ರೆಸ್‌ ಪಕ್ಷವು ಮೊದಲೇ ಒಂದು ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ ಮಾಡಿತ್ತು. ಬಿಜೆಪಿಯು ಗುಂಪುಗಾರಿಕೆ ತಡೆಯಲು ತಂತ್ರ ಮಾಡುತ್ತಿದೆ. ಉತ್ತರ ಪ್ರದೇಶ ಮಾದರಿಯಲ್ಲೇ ಕರ್ನಾಟಕದಲ್ಲೂ ಟಿಕೆಟ್‌ ಹಂಚಿಕೆ ಮಾಡಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆ, ಅಸಮಾಧಾನ, ವಿರೋಧಿ ಅಲೆ ಇರುವ ಕಡೆಗಳಲ್ಲಿ  ಹೊಸಬರಿಗೆ ಆದ್ಯತೆ ನೀಡಲು ಸಿದ್ಧತೆ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಗುಂಪುಗಾರಿಕೆ ಹಾಗೂ ಎಲ್ಲೆಲ್ಲಿ ಯಾವ ವಾತಾವರಣ ಇದೆ, ಅದಕ್ಕೆ ಕಾರಣಗಳ ಸಹಿತ ಕಂಡುಹಿಡಿಯಲು ತಟಸ್ಥ ಏಜೆನ್ಸಿಯೊಂದರ ಸಮೀಕ್ಷೆಯ ಮೂಲಕ ಪ್ರಾಥಮಿಕ ಹಂತದ ಮಾಹಿತಿ ಸಂಗ್ರಹ ಕಾರ್ಯವನ್ನು ಬಿಜೆಪಿ ಮಾಡಿತ್ತು. ಈ ಮೂಲಕ ಕ್ಷೇತ್ರದ ಸಮಗ್ರ ಮಾಹಿತಿ ಕಲೆ ಹಾಕಿತ್ತು. ಏಕೆ ವಿರೋಧ ಹಾಗೂ ಇದಕ್ಕೆ ಕಾರಣವನ್ನೂ ಕಂಡು ಹಿಡಿಯುತ್ತಿದೆ. ಒಂದು ವೇಳೆ ಬಣ ರಾಜಕೀಯಗಳು ಇದ್ದರೆ ಅಂತಹ ಕಡೆಗಳಲ್ಲಿ  ಯಾವ ಬಣಕ್ಕೂ ಸೇರದ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿದರೆ ಹೇಗೆ ಎಂಬ ಸಮೀಕ್ಷೆಯನ್ನೂ ನಡೆಸಿದೆ.

ಟಿಕೆಟ್‌ ವಂಚಿತರಾಗುವವರ ಪೈಕಿ ಕೆಲ ಹಿರಿಯರಿಗೆ ಅಧಿಕಾರ ಬಂದ ಬಳಿಕ  ಸ್ಥಾನಮಾನ ಗಳನ್ನು ನೀಡುವ ಭರವಸೆ ನೀಡಿ ಚುನಾವಣಾ ಕಾರ್ಯದಲ್ಲಿ ಸಂಪೂರ್ಣ ತೊಡಗಿಸಿಕೊಳ್ಳಲು ಸೂಚನೆ ನೀಡಲಾಗುತ್ತದೆ. ಅಮಿತ್‌ ಶಾ ಅವರ ರಾಜ್ಯ ಪ್ರವಾಸ ಮತ್ತು ಇನ್ನೊಂದು ಹಂತದ ಸಮೀಕ್ಷೆಯ ನಂತರ ಬಿಜೆಪಿ ನಿಲುವುಗಳು ಗಟ್ಟಿಯಾಗಲಿದೆ ಎನ್ನುವುದು  ಪಕ್ಷದ ಮೂಲದಿಂದ ಲಭ್ಯ ಮಾಹಿತಿ.

ಕಾಂಗ್ರೆಸ್‌ ಪಕ್ಷವು ಕೂಡಾ ಈ ಬಾರಿ ಗೆಲುವು ಸಾಧಿಸಲು ತಂತ್ರಗಳನ್ನು ಮಾಡುತ್ತಿದೆ. ಗುಂಪುಗಾರಿಕೆಗಳಿಗೆ ಬ್ರೇಕ್‌ ಹಾಕಲು ಸಿದ್ಧತೆ ನಡೆಸಿದೆ. ಗುಂಪುಗಾರಿಕೆಯ ಕಾರಣದಿಂದ ಕ್ಷೇತ್ರವು ಸೋತರೆ ಸ್ಥಳೀಯ ನಾಯಕತ್ವನ್ನೇ ಬದಲು ಮಾಡಲು ಚಿಂತನೆ ನಡೆಸುತ್ತಿದೆ. ಯಾವುದೇ ಕಾರಣಕ್ಕೂ ಪಕ್ಷದ ತೀರ್ಮಾನದ ವಿರುದ್ಧ ಹೋಗದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ ಎಂದು ಪಕ್ಷದ ಮೂಲದ ಮಾಹಿತಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago