Advertisement
ಸುದ್ದಿಗಳು

ರಾಜ್ಯದಲ್ಲಿ ಚುನಾವಣಾ ಲೆಕ್ಕಾಚಾರ ಆರಂಭ | ಈ ಬಾರಿ ಟ್ರೆಂಡ್‌ ಹೇಗಿದೆ ? |

Share

 ರಾಜ್ಯ ವಿಧಾನಸಭೆಗೆ ಚುನಾವಣೆಯ ತಯಾರಿ ಆರಂಭವಾಗುತ್ತಿದೆ. ಕಳೆದ ಎರಡು ತಿಂಗಳಿನಿಂದ ನಿಧಾನವಾಗಿ ಚುನಾವಣಾ ಘೋಷಣೆಗಳೂ ಆರಂಭವಾಗಿವೆ. ಕೆಲವು ಕಡೆ ಟೆಂಡರ್‌ ತಯಾರಿಯೂ ನಡೆದಿದೆ. ಈಗ ಜನರೂ ಯೋಚಿಸುತ್ತಿದ್ದಾರೆ, ಟೆಂಡರ್‌ ಅಲ್ಲ, ಕಾಮಗಾರಿಯೇ ಆರಂಭವಾಗಬೇಕು ಎನ್ನುತ್ತಿದ್ದಾರೆ. ಹೀಗಾಗಿ ಈ ಬಾರಿ ಚುನಾವಣಾ ಟ್ರೆಂಡ್‌ ಈಗಲೇ ಸಿದ್ಧವಾಗುತ್ತಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೆ ಬಹುಮತದಿಂದ ಅಧಿಕಾರ ಹಿಡಿಯಬೇಕೆಂದು ಹವಣಿಕೆಯಲ್ಲಿದ್ದರೆ, ಕಾಂಗ್ರೆಸ್  ಅಧಿಕಾರ ಹಿಡಿಯಲೇಬೇಕೆಂದು ಪಣ ತೊಟ್ಟಿದೆ. ಈ ನಡುವೆ, ಈ ಬಾರಿ ಎಎಪಿ ಕೂಡಾ ರಾಜಕೀಯ ವೇದಿಕೆ ಸಿದ್ಧ ಮಾಡಿದೆ.

ಈಗಿನ ರಾಜಕೀಯ ಸಮೀಕ್ಷೆಗಳ ಪ್ರಕಾರ ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ಸೃಷ್ಟಿಯಾಗಲಿದೆ. ರಾಜ್ಯ ಬಿಜೆಪಿಯಲ್ಲಿನ ಗೊಂದಲ ಹಾಗೂ ಒಳಗೊಳಗೇ ಇರುವ ಅಸಮಾಧಾನಗಳೂ ಈ ಬಾರಿ ಬಹುದೊಡ್ಡ ಹೊಡೆತ ನೀಡಲಿದೆ. ದಕ್ಷಿಣ  ಕನ್ನಡದಲ್ಲೂ ಆಂತರಿಕ ಅಸಮಾಧಾನಗಳು ಹಿಂದಿಗಿಂತಲೂ ಈ ಬಾರಿ ಅಧಿಕವಾಗಿದೆ ಎನ್ನುವುದು  ಸಮೀಕ್ಷಾ ವರದಿ. ಈ ಅಸಮಾಧಾನಗಳನ್ನು ಯಾವ ಪಕ್ಷಗಳು ಸೆಳೆದುಕೊಳ್ಳುತ್ತವೆ ಎನ್ನುವುದರಲ್ಲಿ ಗೆಲುವಿನ ಲೆಕ್ಕಾಚಾರಗಳು ಸಿದ್ಧವಾಗುತ್ತವೆ ಎಂದು ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆ ತಿಳಿಸಿದೆ.

ಇದೀಗ ಆಗಸ್ಟ್‌ ತಿಂಗಳಲ್ಲಿ ಖಾಸಗಿ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈಗಿನ ಸ್ಥಿತಿಯಂತೆ ಬಿಜೆಪಿಗೆ ಬಹುದೊಡ್ಡ ಹೊಡೆತವಾಗಲಿದೆ. ಕರಾವಳಿ ಜಿಲ್ಲೆಯಲ್ಲಿ ಕೂಡಾ ಬಿಜೆಪಿಗೆ ಹಿನ್ನಡೆಯಾಗಲಿದೆ. ಎಲ್ಲೆಡೆಯೂ ಆಂತರಿಕ ಕಲಹಗಳು ಹೆಚ್ಚಾಗಿವೆ ಎಂಬುದು  ಸಮೀಕ್ಷಾ ವರದಿ.  ರಾಜ್ಯದಲ್ಲಿ ಕಾಂಗ್ರೆಸ್ 95-105 ರ ನಡುವೆ ಸ್ಥಾನಗಳನ್ನು ಪಡೆಯುವ ಸಾಧ್ಯತೆ ಕಂಡುಬಂದಿದೆ. ಬಿಜೆಪಿ 70ರಿಂದ 80 ಸ್ಥಾನಕ್ಕೆ ಕುಸಿಯಲಿದೆ.  ಜೆಡಿಎಸ್ 20 ಸ್ಥಾನ ಪಡೆಯಲಿದೆ ಎನ್ನುವ ಲೆಕ್ಕಾಚಾರದ ಫಲಿತಾಂಶ ಸಿಕ್ಕಿದೆ ಎನ್ನಲಾಗಿದೆ. ಉಳಿದ 20 ರಿಂದ 30 ಸ್ಥಾನಗಳಲ್ಲಿ ಹೆಚ್ಚಿನ ಸ್ಥಾನ  ಆಮ್‌ ಆದ್ಮಿ ಪಕ್ಷ ಸೆಳೆಯಲಿದೆ. ಜೊತೆಗೆ ಕೆಆರ್ ಎಸ್ ಹಾಗೂ ಪಕ್ಷೇತರರು ಪಡೆಯುವ ಸಾಧ್ಯತೆ ಇದೆ ಎಂದು ಸಮೀಕ್ಷೆ ಅಭಿಪ್ರಾಯ ಪಟ್ಟಿದೆ.

ರಾಜ್ಯ ಸರ್ಕಾರದ ವಿರುದ್ಧ ಜನರಿಗೆ ಅಸಮಾಧಾನಕ್ಕೆ ಬಹುಮುಖ್ಯವಾಗಿ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಪ್ರವಾಹ ಸಂದರ್ಭ ನಿರ್ಲಕ್ಷ್ಯ ಸೇರಿದಂತೆ ಹಲವು ಸಂಗತಿಗಳನ್ನು ಜನರು ತಿಳಿಸಿದ್ದರು. ಆದರೆ ರಾಜ್ಯ ಬಿಜೆಪಿಯಲ್ಲಿ ಮಾತ್ರಾ ಸಮಾಧಾನಹೊಂದಿರುವ ಜನರು ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ನರೇಂದ್ರ ಮೋದಿ ಪರವಾದ ಅಭಿಪ್ರಾಯ ಹೊಂದಿರುವುದು ಸಮೀಕ್ಷಾ ವರದಿ ಹೇಳಿದೆ. ಕಾಂಗ್ರೆಸ್‌ ಪಕ್ಷದ ನಾಯಕತ್ವದ ಬಗ್ಗೆ ಕೆಲವರು ಅಸಮಾಧಾನ ವ್ಯಕ್ತವಾಗಿತ್ತು.ಈ ಎಲ್ಲಾ ಬೆಳವಣಿಗೆಗಳ ನಡುವೆಯೇ ಜನರು ಪರ್ಯಾಯ ರಾಜಕೀಯ ಶಕ್ತಿಗಳ ಕಡೆಗೂ ಆಸಕ್ತರಾಗಿರುವುದು  ಗಮನಕ್ಕೆ ಬಂದಿದೆ.

ರಾಜ್ಯದಲ್ಲಿ ಆಮ್‌ ಆದ್ಮಿ ಪಕ್ಷದ ಪರವಾಗಿ ಹಲವಾರು ಮಂದಿ ಧನಾತ್ಮಕ ಅಭಿಪ್ರಾಯ ಮಂಡಿಸಿದ್ದಾರೆ. ಈಗಾಗಲೇ ಆಮ್‌ ಆದ್ಮಿ ಪಕ್ಷವು ಬೆಂಗಳೂರು, ಮಂಗಳೂರು ಸೇರಿಂದತೆ ವಿವಿದೆಡೆ ಸಂಘಟನೆಯನ್ನು ಬಲಗೊಳಿಸುತ್ತಿದೆ. ಹಲವು ಬಾರಿ ಆಂತರಿಕ ಸಮೀಕ್ಷೆಯನ್ನೂ ನಡೆಸಿ ಜನರ ನಾಡಿ ಮಿಡಿತ ತಿಳಿದಿದೆ. ಹೀಗಾಗಿ ಈ ಬಾರಿ ಆಮ್‌ ಆದ್ಮಿ ಕೂಡಾ ರಾಜ್ಯದಲ್ಲಿ ಗಟ್ಟಿಯಾದ ರಾಜಕೀಯ ವೇದಿಕೆ ಸೃಷ್ಟಿ ಮಾಡುತ್ತಿದೆ. ಭ್ರಷ್ಟಾಚಾರ ರಹಿತ ಆಡಳಿತನ್ನು ನೀಡುವ ಭರವಸೆ ನೀಡುತ್ತಿದೆ. ಹೀಗಾಗಿ ಕನಿಷ್ಟ 30 ಸ್ಥಾನ ಪಡೆಯಲು ಪ್ರಯತ್ನ ನಡೆಸುತ್ತಿದೆ.

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

9 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

10 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

10 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

20 hours ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

1 day ago