ಉತ್ತರಾಖಂಡ ರಾಜ್ಯದ ಇಬ್ಬರು ಹೆಣ್ಣು ಮಕ್ಕಳು ತಮ್ಮ ತಂದೆಯ ಸೋಲಿಗೆ ಇದೀಗ ವಿಶೇಷ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾರೆ. ಪ್ರಸ್ತುತ ವಿಧಾನಸಭೆ ಚುನಾವಣೆ ಕಣಕ್ಕಿಳಿದಿದ್ದ ಅನುಪಮಾ ರಾವತ್ ಮತ್ತು ರಿತು ಖಂಡೂರಿ ಎಂಬಿಬ್ಬರು ಮಹಿಳೆಯರು ತಮ್ಮ ಎದುರಾಳಿ ಸ್ಪರ್ಧಿಗಳ ವಿರುದ್ಧ ಭರ್ಜರಿ ಗೆಲುವು ದಾಖಲಿಸಿ ಇದೀಗ ಹೊಸ ಇತಿಹಾಸ ಸೃಷ್ಟಿಸಿದ್ದಾರೆ.
ಕಾಂಗ್ರೆಸ್ನ ಹಿರಿಯ ಮುಖಂಡ ಹಾಗು ಮಾಜಿ ಸಿಎಂ ಹರೀಶ್ ರಾವತ್ ಮತ್ತು ಬಿಜೆಪಿಯ ಮೇಜರ್ ಜನರಲ್ ಭುವನ್ ಚಂದ್ರ ಖಂಡೂರಿ ಅವರ ಈ ಸುಪುತ್ರಿಯರು ತಮ್ಮ ಅಪ್ಪನ ಸೋಲಿಗೆ ಚುನಾವಣೆಯಲ್ಲಿ ಗೆಲ್ಲುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ.
2012ರ ವಿಧಾನಸಭೆ ಚುನಾವಣೆಯಲ್ಲಿ ಭುವನ್ ಚಂದ್ರ ಖಂಡೂರಿ ಅವರು ಕೊಟ್ದ್ವಾರ ಕ್ಷೇತ್ರದಲ್ಲಿ ಸೋಲು ಕಂಡಿದ್ದರೆ, 2017ರ ಚುನಾವಣೆಯಲ್ಲಿ ಹರಿದ್ವಾರ ಗ್ರಾಮೀಣ ಕ್ಷೇತ್ರದಲ್ಲಿ ಹರೀಶ್ ರಾವತ್ ವೈಫಲ್ಯ ಅನುಭವಿಸಿದ್ದರು.
ಇದೀಗ ಉತ್ತರಾಖಂಡದ ಕೊಟ್ದ್ವಾರ್ ಕ್ಷೇತ್ರದಿಂದ ಅನುಪಮಾ ರಾವತ್ ಮತ್ತು ಕೊಟ್ದ್ವಾರ ವಿಧಾನಸಭೆ ಕ್ಷೇತ್ರದಿಂದ ರಿತು ಖಂಡೂರಿ ಭೂಷಣ್ ಕಣಕ್ಕಿಳಿದು ಗೆದ್ದು ಸಂಭ್ರಮಿಸಿದ್ದಾರೆ.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…