ಹರ್ಯಾಣ ಸರಕಾರ ಯಮುನಾ ನದಿಗೆ ಉದ್ದಿಶ್ಯಪೂರ್ವಕವಾಗಿ ಅಮೋನಿಯಾ ಹೆಚ್ಚು ಬೆರೆಯುವಂತೆ ಮಾಡ್ತಾ ಇದೆ.ಹಾಗಾಗಿ ಆ ನೀರನ್ನು ಬಳಸಿದ ದೆಹಲಿಯ ಜನರಿಗೆ ಆರೋಗ್ಯ ಸಮಸ್ಯೆ ಬರಲಿದೆ ಅಂತ ಅರವಿಂದ ಕೇಜ್ರೀವಾಲರ ಆರೋಪ.
ಹಾಗೇನೂ ಆಗಿಲ್ಲ ಎಂಬುದರ ಪ್ರದರ್ಶನಕ್ಕಾಗಿ ಹರ್ಯಾಣದ ಮುಖ್ಯಮಂತ್ರಿಯವರು ಎರಡು ರಾಜ್ಯಗಳ ಗಡಿಯಲ್ಲಿ ಯಮುನಾ ನದಿಯ ನೀರು ಕುಡಿದು ತೋರಿಸಿದ ವಿಡಿಯೋ ಪ್ರದರ್ಶನಕ್ಕೆ.
ನೀರು ಕುಡಿದ ನಾಟಕ ಅವರು ಮಾಡಿದ್ದು ಅಂತ ಇವರ ಪ್ರತ್ಯಾರೋಪ. ಮಾಧ್ಯಮಗಳಲ್ಲಂತೂ ಇದರದ್ದೇ ಸುದ್ದಿ,ಚರ್ಚೆ,ವಾಗ್ವಾದ. ನನಗೆ ಅರ್ಥವಾಗದ್ದು ,ದೆಹಲಿ / ಹರ್ಯಾಣ ರಾಜ್ಯದ ಗಡಿಯಲ್ಲಿನ ನೀರಿನ ರಾಸಾಯನಿಕ ಪರೀಕ್ಷೆ ಯಾವುದೇ ಮಾಧ್ಯಮ ಯಾಕೆ ಮಾಡಿಲ್ಲ ಅಂತ.ಅದು ಮತ್ತು ಅದರ ಜೊತೆ ದೆಹಲಿ ರಾಜ್ಯದ ಇನ್ನೊಂದು ಬದಿಯಲ್ಲಿನ ನದಿ ನೀರನ್ನು ಅಮೋನಿಯಾ ರಾಸಾಯನಿಕದ ಪ್ರಮಾಣಕ್ಕಾಗಿ ಪರೀಕ್ಷೆ ಮಾಡಿಸಿದ್ದರೆ ಸಮಸ್ಯೆ ಕ್ಷಣ ಮಾತ್ರದಲ್ಲಿ ಪರಿಹಾರವಾಗುತ್ತಿತ್ತಲ್ಲಾ ಅಂತ. ಅಂದ ಹಾಗೆ ದೆಹಲಿ ರಾಜ್ಯ ದಾಟಿದ ಬಳಿಕ ಯಮುನಾ ನದಿ ಯಾವ ರಾಜ್ಯದಲ್ಲಿ ಹರಿದು ಹೋಗುತ್ತಿದೆ? ಅಲ್ಲಿ ನದಿ ನೀರಿನ ಪರಿಸ್ಥಿತಿ ಹೇಗಿದೆ?
ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…
ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…
ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…
ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…
ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…