Advertisement
ಸುದ್ದಿಗಳು

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ, ಹೇಗಿದೆ ಬ್ಯಾಲೆಟ್​ ಪೇಪರ್​ ವೋಟಿಂಗ್?

Share

ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಸದ್ಯ 2023ರ ಚುನಾವಣೆಗೆ ಕೌಂಟ್​ಡೌನ್​ ಶುರುವಾಗಿದ್ದು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾವೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್​ ಪೇಪರ್​ ವೋಟಿಂಗ್​ ಶುರುವಾಗಿದೆ. ರಾಜ್ಯದಲ್ಲಿ ಬ್ಯಾಲೆಟ್​ ಪೇಪರ್​ ಮೂಲಕ ಗೌಪ್ಯ ಮತದಾನವನ್ನ ಎಲೆಕ್ಷನ್​ ಕಮಿಷನ್​ ಶುರುಮಾಡಿದೆ.

2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್​ ಮತದಾನವನ್ನು ಚುನಾವಣೆ ಅಯೋಗ ಶುರುಮಾಡಿದೆ

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏಪ್ರಿಲ್ 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರೀಕರು ಮತ್ತು ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ  ವಾಪಾಸು ಪಡೆದುಕೊಂಡು ತೆರಳಲಿದ್ದಾರೆ.

ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್

ಇನ್ನು ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್ ಕೂಡ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸದ್ಯ ಬೆಂಗಳೂರಿನ ವಿವಿಧ ವಲಯಗಳಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನ ಗುರ್ತಿಸಿರೋ ಪಾಲಿಕೆ, ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಿ ಎಣಿಕೆ ಮಾಡಲಾಗುತ್ತೆ.

2023ರ ಚುನಾವಣೆಗೆ ರಣಕಹಳೆ ಶುರುವಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಶೇಕಡ 80 ರಷ್ಟು ಮತದಾನ ಸಾಧಿಸೋ ಗುರಿಯಿಂದ ಚುನಾವಣಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸದ್ಯ ಏಪ್ರಿಲ್ 29ರಿಂದ ಆರಂಭವಾಗಿರುವ ಬ್ಯಾಲೆಟ್​ ಮತದಾನಕ್ಕ ಗುಡ್ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

5 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

9 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

9 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

10 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

21 hours ago

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್‌ 3 ರವರೆಗೆ ಮಳೆಯ ಸಾಧ್ಯತೆ…

1 day ago