Advertisement
ಸುದ್ದಿಗಳು

80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ, ಹೇಗಿದೆ ಬ್ಯಾಲೆಟ್​ ಪೇಪರ್​ ವೋಟಿಂಗ್?

Share

ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಸದ್ಯ 2023ರ ಚುನಾವಣೆಗೆ ಕೌಂಟ್​ಡೌನ್​ ಶುರುವಾಗಿದ್ದು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾವೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್​ ಪೇಪರ್​ ವೋಟಿಂಗ್​ ಶುರುವಾಗಿದೆ. ರಾಜ್ಯದಲ್ಲಿ ಬ್ಯಾಲೆಟ್​ ಪೇಪರ್​ ಮೂಲಕ ಗೌಪ್ಯ ಮತದಾನವನ್ನ ಎಲೆಕ್ಷನ್​ ಕಮಿಷನ್​ ಶುರುಮಾಡಿದೆ.

2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್​ ಮತದಾನವನ್ನು ಚುನಾವಣೆ ಅಯೋಗ ಶುರುಮಾಡಿದೆ

ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏಪ್ರಿಲ್ 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರೀಕರು ಮತ್ತು ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ  ವಾಪಾಸು ಪಡೆದುಕೊಂಡು ತೆರಳಲಿದ್ದಾರೆ.

ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್

ಇನ್ನು ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್ ಕೂಡ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸದ್ಯ ಬೆಂಗಳೂರಿನ ವಿವಿಧ ವಲಯಗಳಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನ ಗುರ್ತಿಸಿರೋ ಪಾಲಿಕೆ, ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಿ ಎಣಿಕೆ ಮಾಡಲಾಗುತ್ತೆ.

2023ರ ಚುನಾವಣೆಗೆ ರಣಕಹಳೆ ಶುರುವಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಶೇಕಡ 80 ರಷ್ಟು ಮತದಾನ ಸಾಧಿಸೋ ಗುರಿಯಿಂದ ಚುನಾವಣಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸದ್ಯ ಏಪ್ರಿಲ್ 29ರಿಂದ ಆರಂಭವಾಗಿರುವ ಬ್ಯಾಲೆಟ್​ ಮತದಾನಕ್ಕ ಗುಡ್ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

14 hours ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

1 day ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

2 days ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

3 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago