ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯಲಿದ್ದು ಎರಡು ದಿನಗಳ ಬಳಿಕ ಅಂದರೆ ಮೇ 13 ಕ್ಕೆ ಫಲಿತಾಂಶ ಹೊರಬೀಳಲಿದೆ. ಸದ್ಯ 2023ರ ಚುನಾವಣೆಗೆ ಕೌಂಟ್ಡೌನ್ ಶುರುವಾಗಿದ್ದು ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರ ನಡೆಸುತ್ತಿದ್ದಾವೆ. ಇದರ ನಡುವೆ ಏಪ್ರಿಲ್ 29ರಿಂದ ಬ್ಯಾಲೆಟ್ ಪೇಪರ್ ವೋಟಿಂಗ್ ಶುರುವಾಗಿದೆ. ರಾಜ್ಯದಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಗೌಪ್ಯ ಮತದಾನವನ್ನ ಎಲೆಕ್ಷನ್ ಕಮಿಷನ್ ಶುರುಮಾಡಿದೆ.
2023ರ ಸಾರ್ವತ್ರಿಕ ಚುನಾವಣೆಗೆ ಅಖಾಡ ಸಜ್ಜಾಗಿದ್ದು, ರಾಜ್ಯ ಸೇರಿದಂತೆ ರಾಜ್ಯ ರಾಜಧಾನಿಯಲ್ಲೂ ಚುನಾವಣಾ ರಣಕಹಳೆ ಶುರುವಾಗಿದೆ. ಏಪ್ರಿಲ್ 29ರಿಂದ ಮೇ 6 ರವರೆಗೆ ಬ್ಯಾಲೇಟ್ ಮತದಾನಕ್ಕೆ ಅವಕಾಶ ನೀಡಲಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಬ್ಯಾಲೆಟ್ ಮತದಾನವನ್ನು ಚುನಾವಣೆ ಅಯೋಗ ಶುರುಮಾಡಿದೆ
ಇದೇ ಮೊದಲ ಬಾರಿಗೆ ವಿಧಾನಸಭೆ ಚುನಾವಣೆಯಲ್ಲಿ ಹಿರಿಯ ನಾಗರಿಕರು, ಅಂಗವಿಕಲರು ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. ಅದೂ ಅಧಿಕಾರಿಗಳು ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತಚಲಾಯಿಸುವಂತೆ ಮಾಡುತ್ತಿದ್ದಾರೆ. ಏಪ್ರಿಲ್ 29ರಿಂದ ಈ ಪ್ರಕ್ರಿಯೆ ಆರಂಭವಾಗಿದ್ದು, ಮೇ 6ರವರೆಗೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ಅವಕಾಶ ನೀಡಲಾಗಿದೆ. 8 ದಿನಗಳಲ್ಲಿ ಅಧಿಕಾರಿಗಳು ಯಾವಾಗಲಾದರೊಮ್ಮೆ ಬ್ಯಾಲೆಟ್ ಪೇಪರ್ ಮೂಲಕ ಮತ ಚಲಾಯಿಸಲು ನೋಂದಣಿ ಮಾಡಿಕೊಂಡಿರುವ ಹಿರಿಯ ನಾಗರೀಕರು ಮತ್ತು ವಿಕಲ ಚೇತನ ಮತದಾರರ ಮನೆಗೆ ತೆರಳಿ ಬ್ಯಾಲೆಟ್ ಪೇಪರ್ ನೀಡಿ, ಮತ ಚಲಾಯಿಸಿದ ನಂತರ ವಾಪಾಸು ಪಡೆದುಕೊಂಡು ತೆರಳಲಿದ್ದಾರೆ.
ಇನ್ನು ಚುನಾವಣಾ ಅಯೋಗದ ಸಿಬ್ಬಂದಿಗಳಿಂದ 80 ವರ್ಷ ಮೇಲ್ಪಟ್ಟ ವೃದ್ಧರಿಗೆ ಮನೆ ಬಳಿ ತೆರಳಿ ಬ್ಯಾಲೆಟ್ ಪೇಪರ್ ನೀಡಿ ಗೌಪ್ಯವಾಗಿ ಮತ ಚಲಾವಣೆಗೆ ಅವಕಾಶ ನೀಡಲಾಗ್ತಿದ್ದು, ಗೌಪ್ಯ ಮತ ಚಲಾಯಿಸುವಾಗ ಚುನಾವಣೆ ಸಿಬ್ಬಂದಿ ಸೇರಿದಂತೆ ಸ್ಥಳೀಯ ಪೊಲೀಸರು ಹಾಜರಿರಲಿದ್ದಾರೆ. ಮನೆಯಲ್ಲೇ ಮತದಾನ ಮಾಡುವಾಗ ವಿಡಿಯೋ ರೇಕಾರ್ಡಿಂಗ್ ಕೂಡ ಮಾಡಲು ವ್ಯವಸ್ಥೆ ಮಾಡಿಕೊಂಡಿದ್ದು, ಸದ್ಯ ಬೆಂಗಳೂರಿನ ವಿವಿಧ ವಲಯಗಳಲ್ಲಿ 80 ವರ್ಷ ಮೇಲ್ಪಟ್ಟ ಸುಮಾರು 9152 ಹಿರಿಯ ಮತದಾರರನ್ನ ಗುರ್ತಿಸಿರೋ ಪಾಲಿಕೆ, ಈ ಎಲ್ಲಾ ಮತಗಳನ್ನೂ ಮೇ 13 ರಂದು ಮತ ಏಣಿಕೆ ದಿನ ಓಪನ್ ಮಾಡಿ ಎಣಿಕೆ ಮಾಡಲಾಗುತ್ತೆ.
2023ರ ಚುನಾವಣೆಗೆ ರಣಕಹಳೆ ಶುರುವಾಗಿದ್ದು ಈ ಬಾರಿ ಬೆಂಗಳೂರಿನಲ್ಲಿ ಶೇಕಡ 80 ರಷ್ಟು ಮತದಾನ ಸಾಧಿಸೋ ಗುರಿಯಿಂದ ಚುನಾವಣಾಧಿಕಾರಿಗಳು ಕೆಲಸ ಮಾಡ್ತಿದ್ದಾರೆ. ಸದ್ಯ ಏಪ್ರಿಲ್ 29ರಿಂದ ಆರಂಭವಾಗಿರುವ ಬ್ಯಾಲೆಟ್ ಮತದಾನಕ್ಕ ಗುಡ್ ರೆಸ್ಪಾನ್ಸ್ ಕೂಡಾ ಸಿಕ್ಕಿದೆ.
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…
ಗುಟ್ಕಾ ಮತ್ತು ಪಾನ್ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…
ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…
ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…