ಸುದ್ದಿಗಳು

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನು ಮೇ 7ರ ಸಂಜೆ 7 ಗಂಟೆಯೊಳಗೆ ಒದಗಿಸುವಂತೆ ಡಿ.ಕೆ.ಶಿವಕುಮಾರ್‌ಗೆ ಆಯೋಗದಿಂದ ನೋಟಿಸ್ ಜಾರಿಯಾಗಿದೆ.

Advertisement

ಸರ್ಕಾರದ ನೀತಿಯ ಬಗ್ಗೆ ಟೀಕಿಸುವ ಹಕ್ಕಿದೆ. ಆದರೆ ಜಾಹೀರಾತಿನಲ್ಲಿರುವುದು ಸಾಧಾರಣ ಆರೋಪಗಳಲ್ಲ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿರ್ದಿಷ್ಟವಾಗಿ ಆರೋಪಿಸಲಾಗಿದೆ. ಇದು ಸರಾಗ ಚುನಾವಣೆ ಮೇಲೂ ಪರಿಣಾಮ ಬೀರುವಂತಹದ್ದಾಗಿದೆ. ಜಾಹೀರಾತು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಬಳಿ ಪುರಾವೆಗಳಿರಬೇಕು. ಹೀಗಾಗಿ ನಾಳೆ ಸಂಜೆ 7 ಗಂಟೆಯೊಳಗೆ ಪುರಾವೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಚುನಾವಣಾ ಆಯೋಗವು ತಾಕೀತು ಮಾಡಿದೆ.

ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಬಿಜೆಪಿಯಿಂದ ಲೀಗಲ್ ನೋಟಿಸ್

ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಕುರಿತು ಅವಹೇಳನಕಾರಿ ಜಾಹೀರಾತು ನೀಡಿದ್ದ ಆರೋಪ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟೀಸ್ ಜಾರಿ ಮಾಡಿದೆ. ಸೋಮವಾರದೊಳಗೆ ತಮ್ಮ ಜಾಹೀರಾತನ್ನು ಹಿಂಪಡೆದು ಕ್ಷಮೆ ಕೋರಬೇಕು, ಇಲ್ಲವಾದರೆ ಮಾನಹಾನಿ ಪ್ರಕರಣ ಹೂಡುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ನೋಟೀಸ್ ಜಾರಿಯಾಗಿದೆ.

ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರ ವಿರುದ್ಧ ಜಾಹೀರಾತಿನಲ್ಲಿ ಮಾಡಿದ ಆರೋಪಗಳು ಆಧಾರ ರಹಿತವಾದದ್ದು. ಹೀಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ದೂರು ನೀಡಿತ್ತು. ಜಾಹೀರಾತಿನಲ್ಲಿ ಬಿಜೆಪಿ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ, 40 ಪರ್ಸೆಂಟ್ ಸರ್ಕಾರ ಎಂದೆಲ್ಲಾ ಸಂಬೋಧಿಸಿದ್ದು, ನೇಮಕಾತಿ, ವರ್ಗಾವಣೆ, ಹುದ್ದೆಗಳಿಗೆ ಒಂದೊಂದು ದರ ಫಿಕ್ಸ್ ಮಾಡಿ ರೇಟ್ ಕಾರ್ಡ್ ಜಾಹೀರಾತು ಪ್ರಕಟಿಸಿದೆ. ಇದರ ವಿರುದ್ಧ ಸೂಕ್ತ ಕ್ರಮಕ್ಕೆ ದೂರಿನಲ್ಲಿ ಬಿಜೆಪಿ ಒತ್ತಾಯಿಸಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

6 hours ago

“ದ ಹಿಂದೂ ಮ್ಯಾನಿಫ್ಯಾಸ್ಟೋ” ಕೃತಿ ಬಿಡುಗಡೆ | ಅಹಿಂಸೆಯೇ ಭಾರತದ ನೈಜ ಧರ್ಮ-ಮೋಹನ್ ಭಾಗವತ್

ಅಹಿಂಸೆಯೇ ಭಾರತದ ನೈಜ ಧರ್ಮವಾಗಿದೆ. ಆದರೆ, ಹಿಂಸಾಮಾರ್ಗದಲ್ಲಿ ಸಾಗುವವರ ದಮನ ಮಾಡುವುದೂ ಸಹ…

7 hours ago

ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರ ದಾಳಿ ಹಿನ್ನೆಲೆ | ಭಾರತದಲ್ಲಿ ಪಾಕ್ ಸರ್ಕಾರದ ಸಾಮಾಜಿಕ ಜಾಲತಾಣ ನಿಷೇಧ

ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಪಾಕ್ ಪ್ರೇರಿತ ಭಯೋತ್ಪಾದಕರು ದಾಳಿ ನಡೆಸಿರುವ…

7 hours ago

ರಾಜ್ಯದಲ್ಲಿ ಒಂದು ವಾರ ಗುಡುಗು ಸಹಿತ ಮಳೆ ಸಾಧ್ಯತೆ | 19 ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ

ರಾಜ್ಯದ ವಿವಿಧೆಡೆ ಮುಂದಿನ ಒಂದು ವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು…

7 hours ago

ಮೇ ಮೊದಲ ವಾರ ಲಕ್ಷ್ಮಿ ನಾರಾಯಣ ಯೋಗ, ಯಾವ ರಾಶಿಗಳಿಗೆ ಲಾಭ.!

ಇನ್ನು ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

7 hours ago

ಹವಾಮಾನ ವರದಿ | 27-04-2025 | ಅಲ್ಲಲ್ಲಿ ಸಂಜೆ ಗುಡುಗು ಸಹಿತ ಮಳೆ | ಎ.28 ರಿಂದ ಮಳೆಯ ಪ್ರಮಾಣ ಕಡಿಮೆ |

ಈಗಿನಂತೆ ಎಪ್ರಿಲ್ 29 ಅಥವಾ 30ರಿಂದ ಕರಾವಳಿ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ…

1 day ago