Advertisement
ಸುದ್ದಿಗಳು

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್

Share

ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನು ಮೇ 7ರ ಸಂಜೆ 7 ಗಂಟೆಯೊಳಗೆ ಒದಗಿಸುವಂತೆ ಡಿ.ಕೆ.ಶಿವಕುಮಾರ್‌ಗೆ ಆಯೋಗದಿಂದ ನೋಟಿಸ್ ಜಾರಿಯಾಗಿದೆ.

ಸರ್ಕಾರದ ನೀತಿಯ ಬಗ್ಗೆ ಟೀಕಿಸುವ ಹಕ್ಕಿದೆ. ಆದರೆ ಜಾಹೀರಾತಿನಲ್ಲಿರುವುದು ಸಾಧಾರಣ ಆರೋಪಗಳಲ್ಲ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿರ್ದಿಷ್ಟವಾಗಿ ಆರೋಪಿಸಲಾಗಿದೆ. ಇದು ಸರಾಗ ಚುನಾವಣೆ ಮೇಲೂ ಪರಿಣಾಮ ಬೀರುವಂತಹದ್ದಾಗಿದೆ. ಜಾಹೀರಾತು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಬಳಿ ಪುರಾವೆಗಳಿರಬೇಕು. ಹೀಗಾಗಿ ನಾಳೆ ಸಂಜೆ 7 ಗಂಟೆಯೊಳಗೆ ಪುರಾವೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಚುನಾವಣಾ ಆಯೋಗವು ತಾಕೀತು ಮಾಡಿದೆ.

ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಬಿಜೆಪಿಯಿಂದ ಲೀಗಲ್ ನೋಟಿಸ್

ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಕುರಿತು ಅವಹೇಳನಕಾರಿ ಜಾಹೀರಾತು ನೀಡಿದ್ದ ಆರೋಪ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟೀಸ್ ಜಾರಿ ಮಾಡಿದೆ. ಸೋಮವಾರದೊಳಗೆ ತಮ್ಮ ಜಾಹೀರಾತನ್ನು ಹಿಂಪಡೆದು ಕ್ಷಮೆ ಕೋರಬೇಕು, ಇಲ್ಲವಾದರೆ ಮಾನಹಾನಿ ಪ್ರಕರಣ ಹೂಡುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ನೋಟೀಸ್ ಜಾರಿಯಾಗಿದೆ.

ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರ ವಿರುದ್ಧ ಜಾಹೀರಾತಿನಲ್ಲಿ ಮಾಡಿದ ಆರೋಪಗಳು ಆಧಾರ ರಹಿತವಾದದ್ದು. ಹೀಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ದೂರು ನೀಡಿತ್ತು. ಜಾಹೀರಾತಿನಲ್ಲಿ ಬಿಜೆಪಿ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ, 40 ಪರ್ಸೆಂಟ್ ಸರ್ಕಾರ ಎಂದೆಲ್ಲಾ ಸಂಬೋಧಿಸಿದ್ದು, ನೇಮಕಾತಿ, ವರ್ಗಾವಣೆ, ಹುದ್ದೆಗಳಿಗೆ ಒಂದೊಂದು ದರ ಫಿಕ್ಸ್ ಮಾಡಿ ರೇಟ್ ಕಾರ್ಡ್ ಜಾಹೀರಾತು ಪ್ರಕಟಿಸಿದೆ. ಇದರ ವಿರುದ್ಧ ಸೂಕ್ತ ಕ್ರಮಕ್ಕೆ ದೂರಿನಲ್ಲಿ ಬಿಜೆಪಿ ಒತ್ತಾಯಿಸಿತ್ತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

2 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

2 days ago

ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ

ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…

2 days ago