Advertisement
ಸುದ್ದಿಗಳು

ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರ ಜಾಹೀರಾತು : ಡಿಕೆ ಶಿವಕುಮಾರ್​ಗೆ ನೋಟಿಸ್

Share

ಬಿಜೆಪಿ ಸರ್ಕಾರ ವಿರುದ್ಧ ಭ್ರಷ್ಟಾಚಾರ ಆರೋಪಿಸಿ ಪತ್ರಿಕೆಗಳಲ್ಲಿ ಜಾಹೀರಾತು ಹಾಕಿದ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್  ಅವರಿಗೆ ಚುನಾವಣಾ ಆಯೋಗವು ನೋಟಿಸ್ ಜಾರಿ ಮಾಡಿದೆ. ಸರ್ಕಾರದ ವಿರುದ್ಧ ಮಾಡಿದ ಆರೋಪಗಳ ಬಗ್ಗೆ ನೈಜ ಸಾಕ್ಷ್ಯಗಳನ್ನು ಮೇ 7ರ ಸಂಜೆ 7 ಗಂಟೆಯೊಳಗೆ ಒದಗಿಸುವಂತೆ ಡಿ.ಕೆ.ಶಿವಕುಮಾರ್‌ಗೆ ಆಯೋಗದಿಂದ ನೋಟಿಸ್ ಜಾರಿಯಾಗಿದೆ.

ಸರ್ಕಾರದ ನೀತಿಯ ಬಗ್ಗೆ ಟೀಕಿಸುವ ಹಕ್ಕಿದೆ. ಆದರೆ ಜಾಹೀರಾತಿನಲ್ಲಿರುವುದು ಸಾಧಾರಣ ಆರೋಪಗಳಲ್ಲ. ಸರ್ಕಾರದ ಆಡಳಿತ ಯಂತ್ರದ ಮೇಲೆ ನಿರ್ದಿಷ್ಟವಾಗಿ ಆರೋಪಿಸಲಾಗಿದೆ. ಇದು ಸರಾಗ ಚುನಾವಣೆ ಮೇಲೂ ಪರಿಣಾಮ ಬೀರುವಂತಹದ್ದಾಗಿದೆ. ಜಾಹೀರಾತು ಗಮನಿಸಿದರೆ ಕಾಂಗ್ರೆಸ್ ಪಕ್ಷದ ಬಳಿ ಪುರಾವೆಗಳಿರಬೇಕು. ಹೀಗಾಗಿ ನಾಳೆ ಸಂಜೆ 7 ಗಂಟೆಯೊಳಗೆ ಪುರಾವೆ ನೀಡುವಂತೆ ಕೆಪಿಸಿಸಿ ಅಧ್ಯಕ್ಷರಿಗೆ ಚುನಾವಣಾ ಆಯೋಗವು ತಾಕೀತು ಮಾಡಿದೆ.

ಡಿಕೆ ಶಿವಕುಮಾರ್, ಸಿದ್ದರಾಮಯ್ಯಗೆ ಬಿಜೆಪಿಯಿಂದ ಲೀಗಲ್ ನೋಟಿಸ್

ಕಾಂಗ್ರೆಸ್ ಪಕ್ಷದಿಂದ ಬಿಜೆಪಿ ಕುರಿತು ಅವಹೇಳನಕಾರಿ ಜಾಹೀರಾತು ನೀಡಿದ್ದ ಆರೋಪ ಹಿನ್ನೆಲೆ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ ಶಿವಕುಮಾರ್ ಅವರಿಗೆ ಬಿಜೆಪಿ ಕ್ರಿಮಿನಲ್ ಡಿಫಾಮೇಷನ್ ಲೀಗಲ್ ನೋಟೀಸ್ ಜಾರಿ ಮಾಡಿದೆ. ಸೋಮವಾರದೊಳಗೆ ತಮ್ಮ ಜಾಹೀರಾತನ್ನು ಹಿಂಪಡೆದು ಕ್ಷಮೆ ಕೋರಬೇಕು, ಇಲ್ಲವಾದರೆ ಮಾನಹಾನಿ ಪ್ರಕರಣ ಹೂಡುವುದಾಗಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೇಶವಪ್ರಸಾದ್ ವತಿಯಿಂದ ನೋಟೀಸ್ ಜಾರಿಯಾಗಿದೆ.

ಕಾಂಗ್ರೆಸ್ ಪಕ್ಷವು ಬಿಜೆಪಿ ಸರ್ಕಾರ ವಿರುದ್ಧ ಜಾಹೀರಾತಿನಲ್ಲಿ ಮಾಡಿದ ಆರೋಪಗಳು ಆಧಾರ ರಹಿತವಾದದ್ದು. ಹೀಗಾಗಿ ಇದರ ವಿರುದ್ಧ ಕ್ರಮ ಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ರಾಜ್ಯ ಬಿಜೆಪಿ ದೂರು ನೀಡಿತ್ತು. ಜಾಹೀರಾತಿನಲ್ಲಿ ಬಿಜೆಪಿ ಸರ್ಕಾರವನ್ನು ಟ್ರಬಲ್ ಎಂಜಿನ್ ಸರ್ಕಾರ, 40 ಪರ್ಸೆಂಟ್ ಸರ್ಕಾರ ಎಂದೆಲ್ಲಾ ಸಂಬೋಧಿಸಿದ್ದು, ನೇಮಕಾತಿ, ವರ್ಗಾವಣೆ, ಹುದ್ದೆಗಳಿಗೆ ಒಂದೊಂದು ದರ ಫಿಕ್ಸ್ ಮಾಡಿ ರೇಟ್ ಕಾರ್ಡ್ ಜಾಹೀರಾತು ಪ್ರಕಟಿಸಿದೆ. ಇದರ ವಿರುದ್ಧ ಸೂಕ್ತ ಕ್ರಮಕ್ಕೆ ದೂರಿನಲ್ಲಿ ಬಿಜೆಪಿ ಒತ್ತಾಯಿಸಿತ್ತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಪೀಡಿತ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿಗೆ 12 ತಿಂಗಳ ವಿಸ್ತರಣೆ

ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…

4 hours ago

25 ಸಾವಿರ ವರ್ಷಗಳ ಹಿಂದೆಯೇ ಅಡಿಕೆ ಬಳಕೆ ? ಪುರಾತನ ಹಲ್ಲುಗಳಲ್ಲಿ ಸಿಕ್ಕಿದ ಸುಳಿವು

ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…

12 hours ago

“ಹನುಮಾನ್ ಅಂಶ್‌” ಬಾಕ್ಸ್ ಆಫೀಸ್ ದಾಖಲೆ – 40ನೇ ದಿನವೂ ₹8.25 ಕೋಟಿ – ಪಠಾಣ್‌, ಛಾವಾ, ಉರಿ ದಾಖಲೆ ಮೀರಿಸಿದ ಸಿನಿಮಾ

‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್‌ನಲ್ಲಿ…

14 hours ago

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ

ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…

20 hours ago

ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…

21 hours ago

ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?

ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್‌ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…

1 day ago