ರಾಜ್ಯ ವಿಧಾನಸಭೆ ಚುನಾವಣೆಯ ಜಿದ್ದಾಜಿದ್ದಿನ ಬಹಿರಂಗ ಪ್ರಚಾರಕ್ಕೆ ಸೋಮವಾರ ತೆರೆ ಬಿದ್ದಿದ್ದು ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಹಾಗೂ ಇತರರ ಅಬ್ಬರದ ಬಹಿರಂಗ ಪ್ರಚಾರ ಅಂತ್ಯಗೊಂಡಿದೆ.
ಯಾವುದಕ್ಕೆಲ್ಲ ನಿರ್ಬಂಧ? : ಮತದಾನಕ್ಕೆ ಕೆಲವೇ ಗಂಟೆಗಳು ಉಳಿದಿರುವ ಈ ಸಂದರ್ಭದಲ್ಲಿ ಯಾವುದಕ್ಕೆಲ್ಲ ನಿರ್ಬಂಧ ಹೇರಲಾಗಿದೆ ಎಂಬ ಬಗ್ಗೆ ಚುನಾವಣಾ ಆಯೋಗದ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಸಂಜೆ 5 ಗಂಟೆಯ ಬಳಿಕ ಸಭೆ, ಸಮಾರಂಭ, ಉತ್ಸವ, ರ್ಯಾಲಿ ಮತ್ತು ಧ್ವನಿವರ್ಧಕಗಳನ್ನು ಬಳಸಿ ಪ್ರಚಾರ ಮಾಡುವಂತಿಲ್ಲ ಎಂದು ಆಯೋಗ ಸೂಚಿಸಿದೆ. ಆಯಾ ವಿಧಾನಸಭೆ ಕ್ಷೇತ್ರದಲ್ಲಿ ಅಲ್ಲಿನ ಅಭ್ಯರ್ಥಿ ಹೊರತುಪಡಿಸಿ ಬೇರೆ ನಾಯಕರು ಬಂದು ಪ್ರಚಾರ ಮಾಡುವುದಕ್ಕೂ ನಿರ್ಬಂಧ ಹೇರಿದೆ. ಅಭ್ಯರ್ಥಿ ಸೇರಿದಂತೆ 6 ಜನರು ಮಾತ್ರ ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಆಯೋಗ ಅವಕಾಶ ನೀಡಿದೆ.
ಯಾವುದೇ ರೀತಿಯ ಬಹಿರಂಗ ಸಭೆ, ಸಾರ್ವಜನಿಕ ಸಮಾವೇಶ ನಡೆಸುವಂತಿಲ್ಲ. ಮೇ 8 ಸಂಜೆ 6 ಗಂಟೆಯ ನಂತರ ಮೇ 10ರಂದು ಮತದಾನ ಪ್ರಕ್ರಿಯೆ ಮುಗಿಯುವ ವರೆಗೆ ಮದ್ಯ ಮಾರಾಟ ಮಾಡುವಂತಿಲ್ಲ. 48 ಗಂಟೆಗಳ ಕಾಲ ಧ್ವನಿವರ್ಧಕ ಬಳಕೆಗೆ ಅನುಮತಿ ಇಲ್ಲ. ಅಭ್ಯರ್ಥಿಗಳ ನಡುವಣ ದ್ವೇಷ ಹೆಚ್ಚಿಸುವಂಥ ಹಾಗೂ ದ್ವೇಷ ಸೃಷ್ಟಿಸುವಂತಹ ಯಾವುದೇ ಚಟುವಟಿಕೆ ನಡೆಸಬಾರದು.ಸೂಕ್ಷ್ಮ ಪ್ರದೇಶಗಳ ಮತಕೇಂದ್ರಗಳನ್ನು ಸಿಸಿಟಿವಿ ಕ್ಯಾಮರಾ ಮೂಲಕ ನಿರಂತರ ಕಣ್ಗಾವಲಿನಲ್ಲಿ ಇರಿಸಬೇಕು
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…