ಸುದ್ದಿಗಳು

ತಾಂತ್ರಿಕತೆ ಮುಂದುವರಿದರೂ ಸಮಸ್ಯೆ ಮುಗಿಯದು…! | ಇಲ್ಲಿ ವಿದ್ಯುತ್‌ ಕೈಕೊಟ್ಟದ್ದು ಹೇಗೆ..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೆಲವು ಸಮಸ್ಯೆಗಳಿಗೆ ಪರಿಹಾರ ಇಲ್ಲ. ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ವಿದ್ಯುತ್‌ ಸರಬರಾಜು ಸಮಸ್ಯೆ. ಕಾರಣ ಭೂಮಿ ಒಳಗಿನ ಕೇಬಲ್‌ ಸಮಸ್ಯೆ.

Advertisement

ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ಕಳೆದ ಎರಡು ದಿನಗಳಿಂದ ವಿದ್ಯುತ್‌ ಸರಬರಾಜಿನಲ್ಲಿ ಸಮಸ್ಯೆ. ಹೀಗಾಗಿ ಅನೇಕ ಕಡೆಯ ವಿದ್ಯುತ್‌ ಬಳಕೆದಾರರಿಗೆ ಸಮಸ್ಯೆ. ಹಾಗೆಂದು ಇಲಾಖೆಯ ಸಿಬಂದಿಗಳು, ಅಧಿಕಾರಿಗಳು ಮೌನವಾಗಿ ಕುಳಿತಿಲ್ಲ. ಇಡೀ ದಿನ ಕೆಲಸ ಮಾಡುತ್ತಲೇ ಇದ್ದಾರೆ. ಗ್ರಾಹಕರು, ಕೃಷಿಕರಿಗೆ ಎರಡೂ ದಿನಗಳಿಂದ ಅಧಿಕಾರಿಗಳಿಗೆ, ಮೆಸ್ಕಾಂ ಸಿಬಂದಿಗಳನ್ನು ಪ್ರಶ್ನಿಸುವುದೇ ಕೆಲಸ, ಕರೆಂಟಿಲ್ಲ ಏಕೆ..?. ಕಾರಣ , ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಕೇಬಲ್‌ ಸಮಸ್ಯೆ.(ಯು ಜಿ ಕೇಬಲ್)‌

ಭೂಮಿಯೊಳಗೆ ಕೇಬಲ್‌ ಅಳವಡಿಕೆ ಮಾಡುವ ವೇಳೆ ಎರಡೆರಡು ಕೇಬಲ್‌ ಅಳವಡಿಕೆ ಮಾಡಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ಯಾವ ಸಮಸ್ಯೆಯೂ ಇಲ್ಲದೆ ಗ್ರಾಹಕರಿಗೆ ನಿಶ್ಚಿಂತೆಯಿಂದ ವಿದ್ಯುತ್‌ ಸರಬರಾಜಾಗಿತ್ತು. ಇದೀಗ ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಒಂದು ಕೇಬಲ್‌ ಸಮಸ್ಯೆಯಾಗಿ ಇನ್ನೊಂದು ಕೇಬಲ್‌ ಮೂಲಕ ವಿದ್ಯುತ್‌ ನೀಡಿದಾಗಲೂ ಸಮಸ್ಯೆ..!. ಇದನ್ನು ದುರಸ್ತಿ ಮಾಡಲು ಇನ್ನೊಂದು ತಂಡ ಆಗಮಿಸಬೇಕು ಹಾಗೂ ಭೂಮಿಯೊಳಗಿನಿಂದ ಕೇಬಲ್‌ ತೆಗೆದು ದುರಸ್ತಿ ಮಾಡಬೇಕು. ಹೀಗಾಗಿ ಸಮಸ್ಯೆಯಾಗಿದೆ. ಅಧಿಕಾರಿಗಳು, ಸಿಬಂದಿಗಳು ನಿರಂತರ ಕೆಲಸದಲ್ಲಿದ್ದಾರೆ.

ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕೈಕೊಟ್ಟರೆ ಕೃಷಿಕರು, ಗ್ರಾಮೀಣ ಭಾಗದ ಹಲವು ಕಡೆ ಸಮಸ್ಯೆ. ಕುಡಿಯುವ ನೀರು, ಸಣ್ಣ ಪುಟ್ಟ ಇಂಡಸ್ಟ್ರೀಗಳು, ಕೃಷಿಕರು ಸೇರಿದಂತೆ ಉದ್ಯಮಿಗಳು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈಗಲೂ ಅದೇ ಸಮಸ್ಯೆ ಕಾಡಿದೆ. ತಾಂತ್ರಿಕವಾಗಿ ಎಷ್ಟೇ ಮುಂದಿವರಿದರೂ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಸ್ವಲ್ಪ ವಿಳಂಬವೇ ಆಗಿದೆ. ಇದಕ್ಕೆ ಕಾರಣರು ಯಾರೂ ಅಲ್ಲ, ಪ್ರಕೃತಿಯೇ ಕಾರಣ. ಹೀಗಾಗಿ ಗ್ರಾಹಕರು ಸಮಾಧಾನ ಪಟ್ಟುಕೊಳ್ಳುವುದು, ತಾಳ್ಮೆ ಕಳೆದುಕೊಳ್ಳದಿರುವುದೇ ಪರಿಹಾರ..!.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

7 hours ago

ಹವಾಮಾನ ವರದಿ | 23-04-2025 | ಇಂದು ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆಯ ಮುನ್ಸೂಚನೆ | ರಾಜ್ಯದಲ್ಲಿ ಎ.27 ರ ನಂತರ ಮಳೆ ಹೆಚ್ಚಾಗುವ ಲಕ್ಷಣ

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.…

14 hours ago

ಅರ್ಧಕೇಂದ್ರ ಯೋಗದಿಂದ ಈ 3 ರಾಶಿಗೆ ಯಶಸ್ಸು | ಕೋಟ್ಯಾಧಿಪತಿ ಯೋಗ!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜೋತಿಷಿಗಳನ್ನು ಸಂಪರ್ಕಿಸಿ 9535156490

21 hours ago

ಹೊಸರುಚಿ | ಗುಜ್ಜೆ ಮೊಸರು ಗೊಜ್ಜು

ಗುಜ್ಜೆ ಮೊಸರು ಗೊಜ್ಜು ಬೇಕಾಗುವ ಸಾಮಾಗ್ರಿಗಳು :  ಗುಜ್ಜೆ 1 ಕಪ್ ಬೇಯಿಸಿ…

21 hours ago

ಜಮ್ಮು- ಕಾಶ್ಮೀರ | ಪ್ರವಾಸಿಗರ ಮೇಲೆ ಉಗ್ರರ ದಾಳಿ | ಉಗ್ರರ ದಾಳಿಗೆ ಕನ್ನಡಿಗ ಸೇರಿ 20 ಕ್ಕೂ ಹೆಚ್ಚು ಜನರು ಬಲಿ

ಜಮ್ಮು- ಕಾಶ್ಮೀರದ  ಪೆಹಲ್ಗಾಮ್ ನಲ್ಲಿಂದು ಪ್ರವಾಸಿಗರ ಮೇಲೆ  ಭಯೋತ್ಪಾದಕ ದಾಳಿ ನಡೆದಿದೆ. ಘಟನೆಯಲ್ಲಿ…

1 day ago