Advertisement
ಸುದ್ದಿಗಳು

ತಾಂತ್ರಿಕತೆ ಮುಂದುವರಿದರೂ ಸಮಸ್ಯೆ ಮುಗಿಯದು…! | ಇಲ್ಲಿ ವಿದ್ಯುತ್‌ ಕೈಕೊಟ್ಟದ್ದು ಹೇಗೆ..?

Share

ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೆಲವು ಸಮಸ್ಯೆಗಳಿಗೆ ಪರಿಹಾರ ಇಲ್ಲ. ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ವಿದ್ಯುತ್‌ ಸರಬರಾಜು ಸಮಸ್ಯೆ. ಕಾರಣ ಭೂಮಿ ಒಳಗಿನ ಕೇಬಲ್‌ ಸಮಸ್ಯೆ.

Advertisement

ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ಕಳೆದ ಎರಡು ದಿನಗಳಿಂದ ವಿದ್ಯುತ್‌ ಸರಬರಾಜಿನಲ್ಲಿ ಸಮಸ್ಯೆ. ಹೀಗಾಗಿ ಅನೇಕ ಕಡೆಯ ವಿದ್ಯುತ್‌ ಬಳಕೆದಾರರಿಗೆ ಸಮಸ್ಯೆ. ಹಾಗೆಂದು ಇಲಾಖೆಯ ಸಿಬಂದಿಗಳು, ಅಧಿಕಾರಿಗಳು ಮೌನವಾಗಿ ಕುಳಿತಿಲ್ಲ. ಇಡೀ ದಿನ ಕೆಲಸ ಮಾಡುತ್ತಲೇ ಇದ್ದಾರೆ. ಗ್ರಾಹಕರು, ಕೃಷಿಕರಿಗೆ ಎರಡೂ ದಿನಗಳಿಂದ ಅಧಿಕಾರಿಗಳಿಗೆ, ಮೆಸ್ಕಾಂ ಸಿಬಂದಿಗಳನ್ನು ಪ್ರಶ್ನಿಸುವುದೇ ಕೆಲಸ, ಕರೆಂಟಿಲ್ಲ ಏಕೆ..?. ಕಾರಣ , ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಕೇಬಲ್‌ ಸಮಸ್ಯೆ.(ಯು ಜಿ ಕೇಬಲ್)‌

ಭೂಮಿಯೊಳಗೆ ಕೇಬಲ್‌ ಅಳವಡಿಕೆ ಮಾಡುವ ವೇಳೆ ಎರಡೆರಡು ಕೇಬಲ್‌ ಅಳವಡಿಕೆ ಮಾಡಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ಯಾವ ಸಮಸ್ಯೆಯೂ ಇಲ್ಲದೆ ಗ್ರಾಹಕರಿಗೆ ನಿಶ್ಚಿಂತೆಯಿಂದ ವಿದ್ಯುತ್‌ ಸರಬರಾಜಾಗಿತ್ತು. ಇದೀಗ ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಒಂದು ಕೇಬಲ್‌ ಸಮಸ್ಯೆಯಾಗಿ ಇನ್ನೊಂದು ಕೇಬಲ್‌ ಮೂಲಕ ವಿದ್ಯುತ್‌ ನೀಡಿದಾಗಲೂ ಸಮಸ್ಯೆ..!. ಇದನ್ನು ದುರಸ್ತಿ ಮಾಡಲು ಇನ್ನೊಂದು ತಂಡ ಆಗಮಿಸಬೇಕು ಹಾಗೂ ಭೂಮಿಯೊಳಗಿನಿಂದ ಕೇಬಲ್‌ ತೆಗೆದು ದುರಸ್ತಿ ಮಾಡಬೇಕು. ಹೀಗಾಗಿ ಸಮಸ್ಯೆಯಾಗಿದೆ. ಅಧಿಕಾರಿಗಳು, ಸಿಬಂದಿಗಳು ನಿರಂತರ ಕೆಲಸದಲ್ಲಿದ್ದಾರೆ.

ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕೈಕೊಟ್ಟರೆ ಕೃಷಿಕರು, ಗ್ರಾಮೀಣ ಭಾಗದ ಹಲವು ಕಡೆ ಸಮಸ್ಯೆ. ಕುಡಿಯುವ ನೀರು, ಸಣ್ಣ ಪುಟ್ಟ ಇಂಡಸ್ಟ್ರೀಗಳು, ಕೃಷಿಕರು ಸೇರಿದಂತೆ ಉದ್ಯಮಿಗಳು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈಗಲೂ ಅದೇ ಸಮಸ್ಯೆ ಕಾಡಿದೆ. ತಾಂತ್ರಿಕವಾಗಿ ಎಷ್ಟೇ ಮುಂದಿವರಿದರೂ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಸ್ವಲ್ಪ ವಿಳಂಬವೇ ಆಗಿದೆ. ಇದಕ್ಕೆ ಕಾರಣರು ಯಾರೂ ಅಲ್ಲ, ಪ್ರಕೃತಿಯೇ ಕಾರಣ. ಹೀಗಾಗಿ ಗ್ರಾಹಕರು ಸಮಾಧಾನ ಪಟ್ಟುಕೊಳ್ಳುವುದು, ತಾಳ್ಮೆ ಕಳೆದುಕೊಳ್ಳದಿರುವುದೇ ಪರಿಹಾರ..!.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

19 hours ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

19 hours ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

1 day ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 days ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

2 days ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

2 days ago