Advertisement
ಸುದ್ದಿಗಳು

ತಾಂತ್ರಿಕತೆ ಮುಂದುವರಿದರೂ ಸಮಸ್ಯೆ ಮುಗಿಯದು…! | ಇಲ್ಲಿ ವಿದ್ಯುತ್‌ ಕೈಕೊಟ್ಟದ್ದು ಹೇಗೆ..?

Share

ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೆಲವು ಸಮಸ್ಯೆಗಳಿಗೆ ಪರಿಹಾರ ಇಲ್ಲ. ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ವಿದ್ಯುತ್‌ ಸರಬರಾಜು ಸಮಸ್ಯೆ. ಕಾರಣ ಭೂಮಿ ಒಳಗಿನ ಕೇಬಲ್‌ ಸಮಸ್ಯೆ.

ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ಕಳೆದ ಎರಡು ದಿನಗಳಿಂದ ವಿದ್ಯುತ್‌ ಸರಬರಾಜಿನಲ್ಲಿ ಸಮಸ್ಯೆ. ಹೀಗಾಗಿ ಅನೇಕ ಕಡೆಯ ವಿದ್ಯುತ್‌ ಬಳಕೆದಾರರಿಗೆ ಸಮಸ್ಯೆ. ಹಾಗೆಂದು ಇಲಾಖೆಯ ಸಿಬಂದಿಗಳು, ಅಧಿಕಾರಿಗಳು ಮೌನವಾಗಿ ಕುಳಿತಿಲ್ಲ. ಇಡೀ ದಿನ ಕೆಲಸ ಮಾಡುತ್ತಲೇ ಇದ್ದಾರೆ. ಗ್ರಾಹಕರು, ಕೃಷಿಕರಿಗೆ ಎರಡೂ ದಿನಗಳಿಂದ ಅಧಿಕಾರಿಗಳಿಗೆ, ಮೆಸ್ಕಾಂ ಸಿಬಂದಿಗಳನ್ನು ಪ್ರಶ್ನಿಸುವುದೇ ಕೆಲಸ, ಕರೆಂಟಿಲ್ಲ ಏಕೆ..?. ಕಾರಣ , ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಕೇಬಲ್‌ ಸಮಸ್ಯೆ.(ಯು ಜಿ ಕೇಬಲ್)‌

ಭೂಮಿಯೊಳಗೆ ಕೇಬಲ್‌ ಅಳವಡಿಕೆ ಮಾಡುವ ವೇಳೆ ಎರಡೆರಡು ಕೇಬಲ್‌ ಅಳವಡಿಕೆ ಮಾಡಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ಯಾವ ಸಮಸ್ಯೆಯೂ ಇಲ್ಲದೆ ಗ್ರಾಹಕರಿಗೆ ನಿಶ್ಚಿಂತೆಯಿಂದ ವಿದ್ಯುತ್‌ ಸರಬರಾಜಾಗಿತ್ತು. ಇದೀಗ ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಒಂದು ಕೇಬಲ್‌ ಸಮಸ್ಯೆಯಾಗಿ ಇನ್ನೊಂದು ಕೇಬಲ್‌ ಮೂಲಕ ವಿದ್ಯುತ್‌ ನೀಡಿದಾಗಲೂ ಸಮಸ್ಯೆ..!. ಇದನ್ನು ದುರಸ್ತಿ ಮಾಡಲು ಇನ್ನೊಂದು ತಂಡ ಆಗಮಿಸಬೇಕು ಹಾಗೂ ಭೂಮಿಯೊಳಗಿನಿಂದ ಕೇಬಲ್‌ ತೆಗೆದು ದುರಸ್ತಿ ಮಾಡಬೇಕು. ಹೀಗಾಗಿ ಸಮಸ್ಯೆಯಾಗಿದೆ. ಅಧಿಕಾರಿಗಳು, ಸಿಬಂದಿಗಳು ನಿರಂತರ ಕೆಲಸದಲ್ಲಿದ್ದಾರೆ.

ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕೈಕೊಟ್ಟರೆ ಕೃಷಿಕರು, ಗ್ರಾಮೀಣ ಭಾಗದ ಹಲವು ಕಡೆ ಸಮಸ್ಯೆ. ಕುಡಿಯುವ ನೀರು, ಸಣ್ಣ ಪುಟ್ಟ ಇಂಡಸ್ಟ್ರೀಗಳು, ಕೃಷಿಕರು ಸೇರಿದಂತೆ ಉದ್ಯಮಿಗಳು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈಗಲೂ ಅದೇ ಸಮಸ್ಯೆ ಕಾಡಿದೆ. ತಾಂತ್ರಿಕವಾಗಿ ಎಷ್ಟೇ ಮುಂದಿವರಿದರೂ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಸ್ವಲ್ಪ ವಿಳಂಬವೇ ಆಗಿದೆ. ಇದಕ್ಕೆ ಕಾರಣರು ಯಾರೂ ಅಲ್ಲ, ಪ್ರಕೃತಿಯೇ ಕಾರಣ. ಹೀಗಾಗಿ ಗ್ರಾಹಕರು ಸಮಾಧಾನ ಪಟ್ಟುಕೊಳ್ಳುವುದು, ತಾಳ್ಮೆ ಕಳೆದುಕೊಳ್ಳದಿರುವುದೇ ಪರಿಹಾರ..!.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

10 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

22 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

24 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago