Advertisement
ಸುದ್ದಿಗಳು

ತಾಂತ್ರಿಕತೆ ಮುಂದುವರಿದರೂ ಸಮಸ್ಯೆ ಮುಗಿಯದು…! | ಇಲ್ಲಿ ವಿದ್ಯುತ್‌ ಕೈಕೊಟ್ಟದ್ದು ಹೇಗೆ..?

Share

ತಾಂತ್ರಿಕತೆ ಎಷ್ಟೇ ಮುಂದುವರಿದರೂ ಕೆಲವು ಸಮಸ್ಯೆಗಳಿಗೆ ಪರಿಹಾರ ಇಲ್ಲ. ಕಳೆದ ಎರಡು ದಿನಗಳಿಂದ ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ವಿದ್ಯುತ್‌ ಸರಬರಾಜು ಸಮಸ್ಯೆ. ಕಾರಣ ಭೂಮಿ ಒಳಗಿನ ಕೇಬಲ್‌ ಸಮಸ್ಯೆ.

ಸುಳ್ಯ ತಾಲೂಕಿನ ಗುತ್ತಿಗಾರು ಸಬ್‌ಸ್ಟೇಶನ್‌ಗೆ ಕಳೆದ ಎರಡು ದಿನಗಳಿಂದ ವಿದ್ಯುತ್‌ ಸರಬರಾಜಿನಲ್ಲಿ ಸಮಸ್ಯೆ. ಹೀಗಾಗಿ ಅನೇಕ ಕಡೆಯ ವಿದ್ಯುತ್‌ ಬಳಕೆದಾರರಿಗೆ ಸಮಸ್ಯೆ. ಹಾಗೆಂದು ಇಲಾಖೆಯ ಸಿಬಂದಿಗಳು, ಅಧಿಕಾರಿಗಳು ಮೌನವಾಗಿ ಕುಳಿತಿಲ್ಲ. ಇಡೀ ದಿನ ಕೆಲಸ ಮಾಡುತ್ತಲೇ ಇದ್ದಾರೆ. ಗ್ರಾಹಕರು, ಕೃಷಿಕರಿಗೆ ಎರಡೂ ದಿನಗಳಿಂದ ಅಧಿಕಾರಿಗಳಿಗೆ, ಮೆಸ್ಕಾಂ ಸಿಬಂದಿಗಳನ್ನು ಪ್ರಶ್ನಿಸುವುದೇ ಕೆಲಸ, ಕರೆಂಟಿಲ್ಲ ಏಕೆ..?. ಕಾರಣ , ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಕೇಬಲ್‌ ಸಮಸ್ಯೆ.(ಯು ಜಿ ಕೇಬಲ್)‌

ಭೂಮಿಯೊಳಗೆ ಕೇಬಲ್‌ ಅಳವಡಿಕೆ ಮಾಡುವ ವೇಳೆ ಎರಡೆರಡು ಕೇಬಲ್‌ ಅಳವಡಿಕೆ ಮಾಡಲಾಗುತ್ತದೆ. ಕಳೆದ ಎರಡು ವರ್ಷಗಳಿಂದ ಯಾವ ಸಮಸ್ಯೆಯೂ ಇಲ್ಲದೆ ಗ್ರಾಹಕರಿಗೆ ನಿಶ್ಚಿಂತೆಯಿಂದ ವಿದ್ಯುತ್‌ ಸರಬರಾಜಾಗಿತ್ತು. ಇದೀಗ ಭೂಮಿಯೊಳಗೆ ಅಳವಡಿಕೆ ಮಾಡಿದ್ದ ಒಂದು ಕೇಬಲ್‌ ಸಮಸ್ಯೆಯಾಗಿ ಇನ್ನೊಂದು ಕೇಬಲ್‌ ಮೂಲಕ ವಿದ್ಯುತ್‌ ನೀಡಿದಾಗಲೂ ಸಮಸ್ಯೆ..!. ಇದನ್ನು ದುರಸ್ತಿ ಮಾಡಲು ಇನ್ನೊಂದು ತಂಡ ಆಗಮಿಸಬೇಕು ಹಾಗೂ ಭೂಮಿಯೊಳಗಿನಿಂದ ಕೇಬಲ್‌ ತೆಗೆದು ದುರಸ್ತಿ ಮಾಡಬೇಕು. ಹೀಗಾಗಿ ಸಮಸ್ಯೆಯಾಗಿದೆ. ಅಧಿಕಾರಿಗಳು, ಸಿಬಂದಿಗಳು ನಿರಂತರ ಕೆಲಸದಲ್ಲಿದ್ದಾರೆ.

ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ಕೈಕೊಟ್ಟರೆ ಕೃಷಿಕರು, ಗ್ರಾಮೀಣ ಭಾಗದ ಹಲವು ಕಡೆ ಸಮಸ್ಯೆ. ಕುಡಿಯುವ ನೀರು, ಸಣ್ಣ ಪುಟ್ಟ ಇಂಡಸ್ಟ್ರೀಗಳು, ಕೃಷಿಕರು ಸೇರಿದಂತೆ ಉದ್ಯಮಿಗಳು ಸಂಕಷ್ಟಕ್ಕೆ ಒಳಗಾಗುತ್ತಾರೆ. ಈಗಲೂ ಅದೇ ಸಮಸ್ಯೆ ಕಾಡಿದೆ. ತಾಂತ್ರಿಕವಾಗಿ ಎಷ್ಟೇ ಮುಂದಿವರಿದರೂ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಸ್ವಲ್ಪ ವಿಳಂಬವೇ ಆಗಿದೆ. ಇದಕ್ಕೆ ಕಾರಣರು ಯಾರೂ ಅಲ್ಲ, ಪ್ರಕೃತಿಯೇ ಕಾರಣ. ಹೀಗಾಗಿ ಗ್ರಾಹಕರು ಸಮಾಧಾನ ಪಟ್ಟುಕೊಳ್ಳುವುದು, ತಾಳ್ಮೆ ಕಳೆದುಕೊಳ್ಳದಿರುವುದೇ ಪರಿಹಾರ..!.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

4 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

4 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

21 hours ago

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

2 days ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

2 days ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

2 days ago