ವಿದ್ಯುತ್ ಬೆಲೆ ಏರಿಕೆ ಗಾಯದ ಮೇಲೆ ಉಪ್ಪು ಸುರಿದಂತೆ – ಬಿ. ಕೆ ಇಮ್ತಿಯಾಜ್

April 11, 2022
7:00 PM

ಕೊರೋನಾ ಸಂಕಷ್ಟದಿಂದ ಹೊರ ಬರಲಾಗದ ಜನರಿಗೆ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ತತ್ತರಿಸುತ್ತಿರುವಾಗಲೇ ರಾಜ್ಯ ಸರಕಾರ ವಿದ್ಯುತ್ ಬೆಲೆ ಏರಿಕೆ ಮಾಡಿರುವುದು ಗಾಯದ ಮೇಲೆ ಉಪ್ಪು ಸುರಿದಂತಾಗಿದೆ ಎಂದು ಡಿವೈಎಫ್ಐ ಜಿಲ್ಲಾಧ್ಯಕ್ಷರಾದ ಬಿ.ಕೆ ಇಮ್ತಿಯಾಜ್ ಎಂದು ಆರೋಪಿಸಿದರು.

ಅವರು ಸೋಮವಾರ ಮಂಗಳೂರು ನಗರದ ಬಿಜೈ ಬಳಿ ಇರುವ ಮೆಸ್ಕಾಂ ಕೇಂದ್ರ ಕಚೇರಿ ಎದುರು ಡಿವೈಎಫ್ಐ, ಎಸ್ಎಫ್ಐ ಮತ್ತು ಜೆಎಂಎಸ್ ಸಂಘಟನೆಗಳ ಜಂಟಿ ಸಹಭಾಗಿತ್ವದಲ್ಲಿ ವಿದ್ಯುತ್ ದರ ಏರಿಕೆ ವಿರೋಧಿಸಿ ನಡೆದ ಪ್ರತಿಭಟನಾ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದು ಹೋಗಿದೆ ಜನಸಾಮಾನ್ಯರ ನೈಜ ಸಮಸ್ಯೆಗಳ ಪರಿಹಾರ ಮಾಡದೆ ಜಾತಿ ಧರ್ಮದ ಹೆಸರಲ್ಲಿ ಗಲಾಟೆ ಹಚ್ಚಲು ಪ್ರಚೋದನೆ ಕೊಡುತ್ತಿದೆ. ಜನರನ್ನು ಭಾವನಾತ್ಮಕವಾಗಿ ವಿಂಗಡಿಸಿ ಜನರ ಬದುಕನ್ನು ನರಕಕ್ಕೆ ತಳ್ಳುತ್ತಿದೆ ಎಂದು ಅವರು ಟೀಕಿಸಿದರು.

ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಮಾತನಾಡಿ, ರಾಜ್ಯ ಸರಕಾರ ಪ್ರತಿ ಯುನಿಟಿಗೆ 0.50ಪೈಸೆಯಷ್ಟು ಏರಿಸಿದೆ. ಮೆಸ್ಕಾಂ ಇಲಾಖೆ ಈ ಹಿಂದೆ ಫೆಬ್ರವರಿಯಲ್ಲಿ 2021-22 ಅವಧಿಯ ಆರ್ಥಿಕ ವರುಷದಲ್ಲಿ 943 ಕೋಟಿ ಆದಾಯ ಕೊರತೆ ನೀಗಿಸಲು 1.67 ರೂ ಸುಂಕವನ್ನು ಏರಿಕೆ ಮಾಡಿತ್ತು. ಈಗ ಮತ್ತೆ ರಾಜ್ಯದಲ್ಲಿ ಏರಿಕೆ ಮಾಡಲಾಗುತ್ತಿದೆ ಇದು ತೀರಾ ಅನ್ಯಾಯ. ಮೆಸ್ಕಾಂ ರಾಜ್ಯದಲ್ಲೇ ಅತ್ಯಧಿಕ ಲಾಭಧಾಯಕ ಸಂಸ್ಥೆ ಆಗಿದ್ದರೂ ಈ ಇಲಾಖೆಯಲ್ಲಿರುವ 4035 ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಸಲು ಇಂಧನ ಸಚಿವ ಸುನಿಲ್ ಕುಮಾರ್ ವಿಫಲರಾಗಿದ್ದಾರೆ. ದ.ಕ ಜಿಲ್ಲೆಯೊಂದರಲ್ಲೇ 1424 ಹುದ್ದೆ ಖಾಲಿ ಬಿದ್ದಿದೆ ಎಂದರು.

ಜನವಾದಿ ಮಹಿಳಾ ಸಂಘಟನೆ ಜಿಲ್ಲಾಧ್ಯಕ್ಷೆ ಭಾರತಿ ಬೋಳಾರ ಮಾತನಾಡಿದರು. ಡಿವೈಎಫ್ಐ ಮುಖಂಡರಾದ ಮನೋಜ್ ವಾಮಂಜೂರ್, ಸುನಿಲ್ ತೇವುಲ, ರಫೀಕ್ ಹರೇಕಳ, ರಜಾಕ್ ಮುಡಿಪು, ಹನೀಫ್ ಬೆಂಗರೆ, ತಯ್ಯೋಬ್ ಬೆಂಗ್ರೆ, ಸಲೀಮ್ ಶಾಡೋ, ಜಗದೀಶ್ ಬಜಾಲ್, ಜಯಲಕ್ಷ್ಮೀ, ಅಸುಂತಾ ಡಿಸೋಜ, ಪ್ರಮಿಳಾ ದೇವಾಡಿಗ, ವಿದ್ಯಾರ್ಥಿ ಮುಖಂಡರಾದ ವಿನತ್, ಮಾಧುರಿ ಬೇಳಾರ ಮುಂತಾದವರು ಉಪಸ್ಥಿತರಿದ್ದರು. ನವೀನ್ ಕೊಂಚಾಡಿ ಸ್ವಾಗತಿಸಿ ಕಾರ್ಯಕ್ರಮ ನಿರ್ವಹಿಸಿದರೆ, ನಿತಿನ್ ಕುತ್ತಾರ್ ವಂದಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ
August 16, 2026
12:00 PM
by: ಸಾಯಿಶೇಖರ್ ಕರಿಕಳ
ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ
August 16, 2026
7:30 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ
August 15, 2026
2:07 PM
by: ಸಾಯಿಶೇಖರ್ ಕರಿಕಳ
ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror